Breaking News

ರಾಷ್ಟ್ರೀಯ

ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ: 10 ಮಂದಿ ದಾರುಣ ಸಾವು,

ಮಹಾರಾಷ್ಟ್ರ,- ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಧುಲೆ (ಮಹಾರಾಷ್ಟ್ರ): ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್​ ಮತ್ತು ಇತರೆ ವಾಹನಗಳ ಮೇಲೆ ಹರಿದು ಪರಿಣಾಮ ಸಂಭವಿಸಿದ ಸರಣಿ ಭೀಕರ ಅಪಘಾತದಲ್ಲಿ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗಡಿಭಾಗದ ಪಲಾಸ್ನೇರ್ ಗ್ರಾಮದ ಮುಂಬೈ- ಆಗ್ರಾ ಹೆದ್ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು …

Read More »

ವಿಧಾನಸಭೆ ಅಧಿವೇಶನ ಸದನದ ಬಾವಿಗಿಳಿದು ಬಿಜೆಪಿ ಸದಸ್ಯರ ಪ್ರತಿಭಟನೆ

ಬೆಂಗಳೂರು: ಪ್ರಶ್ನೋತ್ತರ ಕಲಾಪಕ್ಕೂ ಮುನ್ನ ನಿಲುವಳಿ ಮಂಡನೆಗೆ ಅವಕಾಶ ಕೇಳಿದ ಬಿಜೆಪಿ ಸದಸ್ಯರಿಗೆ ಅನುಮತಿ ನಿರಾಕರಿಸಿದ ಕಾರಣ ವಿಧಾನಸಭೆ ಮತ್ತು ವಿಧಾನಪರಿಷತ್​ನಲ್ಲಿ ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದ್ದಾರೆ. ಈ ವೇಳೆ ಸ್ಪೀಕರ್ ಯು.ಟಿ. ಖಾದರ್, ನಿಮ್ಮ ಅನುಚಿತ ವರ್ತನೆಯನ್ನು ಜನರು ನೋಡ್ತಿದ್ದಾರೆ. ಶಾಸಕರ ಪ್ರಶ್ನಾವಳಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಶ್ನೋತ್ತರ ಹಾಗೂ ಶೂನ್ಯವೇಳೆ ಆದಮೇಲೆ, ನಿಲುವಳಿ ಪ್ರಸ್ತಾಪಕ್ಕೆ …

Read More »

ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ, ನಾನು ಸಿಎಂ ಅಲ್ಲ ಕುರಿ, ಎಮ್ಮೆ ಕಾಯುತ್ತಾ ಇರಬೇಕಿತ್ತು: ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಮಾತನಾಡಿ, ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೇ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ ಬುದ್ದ, ಬಸವಾದಿ ಶರಣರು, …

Read More »

ಬೆಳಗಾವಿ: ಜಮೀನು ವಿವಾದ ಹಿನ್ನೆಲೆ ಗೂಂಡಾಗಳಿಂದ ಹಲ್ಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್​ ಧರಣಿ

ಬೆಳಗಾವಿ: ತಾಲೂಕಿನ ಬೆಕ್ಕಿನಕೇರಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ರೈತರು ಮತ್ತು ಗ್ರಾಮಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್​ ಧರಣಿ ನಡೆಸಿದರು. ಗೂಂಡಾಗಳಿಂದ ತಮ್ಮ ತಲೆ, ಭುಜ, ಬೆನ್ನು ಮತ್ತು ಹೊಟ್ಟೆ ಮೇಲೆ ಆಗಿರುವ ಗಾಯಗಳನ್ನು ತೋರಿಸಿ, ಕಣ್ಣೀರು ಸುರಿಸಿದರು. ತಮ್ಮ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು. ನಮಗಾದ ಅನ್ಯಾಯಕ್ಕೆ …

Read More »

ದುಷ್ಕರ್ಮಿಗಳ ಹಲ್ಲೆಯಿಂದ ವಿದ್ಯಾರ್ಥಿ ಸಾವು

ಬೆಂಗಳೂರು: ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಪ್ರಕರಣ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಸೋಮವಾರ ನಡೆದಿದೆ. ಸೊಹೇಲ್ (17) ಮೃತಪಟ್ಟ ವಿದ್ಯಾರ್ಥಿ. ಮಂಜುನಾಥ ನಗರದ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಸೋಮವಾರ ಮಧ್ಯಾಹ್ನ 2.30ರ ಸಮಯಲ್ಲಿ ಕಾಲೇಜು ಸಮೀಪ ವಿದ್ಯಾರ್ಥಿ ನಿಂತಾಗ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಸೊಹೇಲ್ ಎಡಗೈ ಮತ್ತು ತೊಡೆಗೆ ಗಂಭೀರವಾದ …

Read More »

ಬಿಜೆಪಿ ಸಭೆಗೆ ಬಂದ ಬಳ್ಳಾರಿ ಜಿಲ್ಲಾ ಪ್ರಭಾರಿ ಸಿದ್ದೇಶ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಯಾದವ್, ಸಭೆ ಮುಗಿಸಿ ಹೊರಗೆ ಬಂದಾಗ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿತಾದರೂ ಅಷ್ಟರಲ್ಲಿ ನಿಧನರಾಗಿದ್ದಾರೆ.   ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ …

Read More »

ಬತ್ತಿದ ಕಬಿನಿ : ಹಿನ್ನೀರಿನಲ್ಲಿ ಕಾಣಿಸುತ್ತಿವೆ ಐತಿಹಾಸಿಕ ಪುರಾತನ ದೇವಾಲಯ

ಮೈಸೂರು : ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು. ಬಹುತೇಕ ಜಲಾಶಯಗಳು 10 ವರ್ಷಗಳ ನಂತರ ಖಾಲಿಯಾಗಿವೆ. ಮತ್ತೊಂದೆಡೆ ಜಲಾಶಯಗಳ ಹಿನ್ನೀರಿನಲ್ಲಿ ಇರುವ ದೇವಾಲಯಗಳು ಈಗ ಗೋಚರಿಸುತ್ತಿವೆ‌. ಇದಕ್ಕೆ ನಿದರ್ಶನ ಎಂಬಂತೆ 10 ವರ್ಷಗಳ ನಂತರ ಮೈಸೂರು ಜಿಲ್ಲೆಯ ಬೀಚನಹಳ್ಳಿ ಸಮೀಪದಲ್ಲಿರುವ, ಕಬಿನಿ ಡ್ಯಾಂನಲ್ಲಿ ನೀರು ಸಂಪೂರ್ಣ ಕಡಿಮೆ ಆಗಿದ್ದು, ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ, ಐತಿಹಾಸಿಕ, ಪುರಾಣ ಪ್ರಸಿದ್ಧ ದೇವಾಲಯಗಳ ಕುರುಹುಗಳು ಪತ್ತೆಯಾಗಿವೆ. ಕೀರ್ತಿಪುರ ಗ್ರಾಮದ ಅರಳಿ ಮರದ ಬುಡಈ ಕುರುಹುಗಳು ಇತಿಹಾಸದ ಪುನ್ನಾಟ …

Read More »

ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿ‌ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ. ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ‘ಕುರಿಕೋಟಾ ಗ್ರಾಮದ …

Read More »

ಇತಿಹಾಸದಲ್ಲೇ ಮೊದಲ ಬಾರಿಗೆ ಅಧಿಕೃತ ಪ್ರತಿಪಕ್ಷದ ನಾಯಕನ ಆಯ್ಕೆಯಾಗದೇ ಅಧಿವೇಶನ

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ …

Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು

ಬೆಂಗಳೂರು: ಹೊಸ ಸರ್ಕಾರದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ, ಮತ್ತೊಂದೆಡೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು ಜೋರಾಗಿದೆ‌. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಮಳೆಯ ಅಭಾವವಾಗಿರುವುದರಿಂದ ರಾಜ್ಯದಲ್ಲಿ ಬರಗಾಲ ಎಂದು ಘೋಷಿಸುವ ಮೂಲಕ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ …

Read More »