ಬೆಂಗಳೂರು: ಅನ್ನಭಾಗ್ಯದಡಿ ಅಕ್ಕಿ ಸಿಗದ ಕಾರಣ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡುದಾರಿಗೆ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಫ್ಸಿಐ ದರ ಪ್ರತಿ ಕೆಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ಹಣ ಪಾವತಿ ಮಾಡಲು ತೀರ್ಮಾನಿಸಲಾಗಿದೆ. ಮನೆಯ ಯಜಮಾನನ ಖಾತೆಗೆ ಕುಟುಂಬ ಸದಸ್ಯರ ಹಣವನ್ನೂ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. …
Read More »ನಂದಿನಿ ಹಾಲು ಮಾರಾಟಕ್ಕೆ ಕೇರಳದಲ್ಲಿ ವಿರೋಧ; ಮಳಿಗೆ ವಿಸ್ತರಿಸದಿರಲು ಕೆಎಂಎಫ್ ನಿರ್ಧಾರ
ಬೆಂಗಳೂರು : ನೆರೆಯ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ವಿಸ್ತರಿಸದಿರಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಿರ್ಧರಿಸಿದೆ ಎಂದು ಮೂಲಗಳು ಬುಧವಾರ ಖಚಿತಪಡಿಸಿವೆ. ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಕೆಎಂಎಫ್ ಈ ನಿರ್ಧಾರ ತಳೆದಿದೆ. ಕೇರಳದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವ ಜೆ. ಚಿಂಚು ರಾಣಿ ಮತ್ತು ಕೆಎಂಎಫ್ ಸಿಇಒ ನಡುವೆ ನಡೆದ ಮಾತುಕತೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲು ಮತ್ತು ಹಾಲು …
Read More »ಮಂತ್ರಾಲಯ ದಲ್ಲಿ 7 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ …
Read More »ದಮ್ಮು, ತಾಕತ್ತು ಧೈರ್ಯದ ಬಗ್ಗೆ ಮಾತಾಡ್ತರೆ. ಅಷ್ಟೊಂದು ಮಾತಾಡೋರು ಯಾಕ್ರಿ ಸೋತ್ರಿ :ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ದಮ್ಮು ತಾಕತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರಿಗೆ ತಡವಾಗಿ ಆದರೂ ಬುದ್ಧಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ತಮ್ಮ ಗೃಹ ಕಚೇರಿಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ತಮ್ಮೇಗೌಡರನ್ನ ಪಕ್ಷಕ್ಕೆ ಸೇರ್ಪಡೆ ಹಾಗು ಕಾರ್ಯಕರ್ತರ ಸಭೆ ಹಮ್ಮಿಕೊಂಡಿದ್ದರು. ಇದೇ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಮುಖಂಡರಿಂದ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎನ್ನುವುದು ಈಗಲಾದರೂ ಬಿಜೆಪಿಗೆ ಅರಿವಾಗಿದೆಯಾ?. ದಮ್ಮು ತಾಕತ್ತು ದೈರ್ಯದ ಬಗ್ಗೆ …
Read More »ಹಿಂದಿನ ಸರ್ಕಾರದ ಎಲ್ಲಾ ಅವ್ಯವಹಾರ ತನಿಖೆ ಮಾಡಿಸುತ್ತೇವೆ.: ಸಿದ್ದರಾಮಯ್ಯ
ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್ನಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ …
Read More »ಯಡಿಯೂರಪ್ಪರನ್ನು ಕೆಳಗಿಳಿಸಬಾರದಿತ್ತು, ಶೆಟ್ಟರ್, ಈಶ್ವರಪ್ಪಗೆ ಟಿಕೆಟ್ ಕೋಡ್ಬೆಕಿತ್ತು: ಎಂ ಪಿ ರೇಣುಕಚಾರ್ಯ
ದಾವಣಗೆರೆ: ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದೇವೆ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸ ಬಾರದಿತ್ತು. ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಬೇಕಿತ್ತು. ಈ ತಪ್ಪು ನಿರ್ಧಾರದಿಂದ ನಮಗೆ ಸೋಲಾಗಿದೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಚುನಾವಣೆಯಲ್ಲಿ ಪಕ್ಷ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ …
Read More »ಎಲ್ಲ ನಾಯಕರು ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಟೀಲ್ ಎಚ್ಚರಿಕೆ
ಮಂಗಳೂರು : ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಎಲ್ಲರೂ ಕೆಲಸ ಮಾಡಬೇಕು. ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ …
Read More »ವಂದೇ ಭಾರತ್ ರೈಲಿನಲ್ಲೂ ಬೆಳಗಾವಿಗೆ ಅನ್ಯಾಯ
ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ. 3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …
Read More »ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ ವಿಕಾಸ್ ಕುಮಾರ್ ವಿಕಾಶ್- …
Read More »ವಂದೇ ಭಾರತ್ ಎಕ್ಸ್ಪ್ರೆಸ್ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.
Read More »
Laxmi News 24×7