ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಬೆಂಗಳೂರಿನಲ್ಲಿರುವ ರನ್ಯಾ ರಾವ್ರ ನಿವಾಸ, ಅವರ ವಿವಾಹ ಜರುಗಿದ ಹೋಟೆಲ್, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್ ಜೊತೆಗೆ ಸಂಪರ್ಕ ಹೊಂದಿರುವವರ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದರ ಭಾಗವಾಗಿ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಅತಿಥಿಗಳು, ಬಂದಿರುವ ದುಬಾರಿ ಉಡುಗೊರೆಗಳು ಕುರಿತು …
Read More »ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ,
ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಕಾಯಕ – ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು. ಸಮಾಜದಲ್ಲಿ ದುಡಿಯುವ ವರ್ಗ …
Read More »ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್
ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …
Read More »ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ
ಬೆಂಗಳೂರು, ಮಾರ್ಚ್ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿದ್ದಾನೆ. ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ. ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ …
Read More »IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು;
IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …
Read More »ಪ್ರವಾಸಿಗರ ಮೇಲೆ ಅತ್ಯಾಚಾರಇದು ಸರ್ಕಾರದ ವೈಫಲ್ಯ :ಜೋಶಿ
ಹುಬ್ಬಳ್ಳಿ, ಮಾರ್ಚ್ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.
Read More »ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ
ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …
Read More »ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?
ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …
Read More »ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್ : ಸಂಸದೆ ಪ್ರಿಯಂಕಾ ಜಾರಕಿಹೊಳಿ
ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್ : ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ …
Read More »ದಾಖಲೆಯ ಬಜೆಟ್ ಮಂಡನೆ ಬಳಿಕ ಸಿಎಂಗೆ ಹಸ್ತಲಾಘವ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ವಿತ್ತೀಯ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್ ಮಂಡಿಸಿದ್ದಾರೆ. ತವರಾದ ಮೈಸೂರು ಜಿಲ್ಲೆ ಸೇರಿದಂತೆ, ಎಲ್ಲಾ ಜಿಲ್ಲೆಗಳಿಗೆ ಆದ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ಇಂದಿನ ತಮ್ಮ ದಾಖಲೆಯ ಬಜೆಟ್ನಲ್ಲಿ ಹಲವು ಹೊಸ ಯೋಜನೆಗಳನ್ನು ಸಹ ಪ್ರಕಟಿಸಿದ್ದಾರೆ. 2025-26ನೇ ಸಾಲಿನ ಬಜೆಟ್ನಲ್ಲಿ, ರಾಜ್ಯದ 31 ಜಿಲ್ಲೆಗಳಿಗೂ ನ್ಯಾಯ ವದಗಿಸುವ ಯತ್ನ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜ್ಯದ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ …
Read More »