ನವದೆಹಲಿ, ಮೇ 21: ಜಗತ್ತಿನ ಮುಂದೆ ಪಾಕಿಸ್ತಾನ(Pakistan)ದ ಬಂಡವಾಳ ಬಯಲು ಮಾಡಲು ಕೇಂದ್ರ ಸರ್ಕಾರವು 59 ಸದಸ್ಯರ ನಿಯೋಗವನ್ನು ಇಂದು ಪ್ರಪಂಚದಾದ್ಯಂತ ಕಳುಹಿಸಲಿದೆ. ಸರ್ವಪಕ್ಷ ಸಂಸದರ 7 ನಿಯೋಗಗಳನ್ನು ರಚಿಸಲಾಗಿದೆ. ಇದರಲ್ಲಿ 10 ಮುಸ್ಲಿಂ ನಾಯಕರನ್ನು ಸಹ ಇರಿಸಲಾಗದೆ. ನಿಯೋಗದಲ್ಲಿ 51 ನಾಯಕರು ಮತ್ತು 8 ರಾಯಭಾರಿಗಳು ಸೇರಿದ್ದಾರೆ. ಎನ್ಡಿಎ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಅದರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ನಿಯೋಗ ಬುಧವಾರ (ಮೇ 21) ಹೊರಡಲಿದೆ. …
Read More »ಭಾರಿ ಮಳೆಗೆ ಉಡುಪಿ ತತ್ತರ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ, ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದ್ದು, ಇದರಿಂದಾಗಿ ಕಲ್ಲು ಮಿಶ್ರಿತ ನೀರು ರಸ್ತೆಯಲ್ಲಿ ಪ್ರವಾಹದಂತೆ ಹರಿದಿದೆ. ಹಲವು ವಾಹನಗಳಿಗೆ ಹಾನಿಯಾಗಿದ್ದಲ್ಲದೇ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ. …
Read More »SBI ಬ್ಯಾಂಕ್ನಲ್ಲಿ ‘ಕನ್ನಡ ಮಾತನಾಡುವುದಿಲ್ಲ’ವೆಂದ ಮ್ಯಾನೇಜರ್
ಆನೇಕಲ್(ಬೆಂಗಳೂರು): ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು …
Read More »ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ
ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಕುರಿತು ತಾಂತ್ರಿಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕರಾದ ರಾಜಗೋಪಾಲ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.. ಪುಣೆಯ ಥಮ್ರ್ಯಾಕ್ಸ ಬಾಯ್ಲರ್ ತಾಂತ್ರಿಕ ತಂತ್ರಜ್ಞರಾದ ಆರ್. ಅನಿಲ ರೆಡ್ಡಿ, ಮೀಟಕಾನ ಕಂಪನಿಯ ಮಾಜಿ ತಾಂತ್ರಿಕ ನಿರ್ದೇಶಕರಾದ ಶ್ರೀರಂಗ ಶಿರಾಳ್ಕರ, ಗೋಪಿಚಂದ್ರ ಗೌಡ, ಸಿ.ಬಿ. …
Read More »ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದ ಸಚಿವ ಕೆ.ಎನ್.ರಾಜಣ್ಣ
ಮೈಸೂರು: ನನಗೆ 75 ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು, ಆ ದೃಷ್ಟಿಯಿಂದ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರಕಟಿಸಿದರು. ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ, …
Read More »ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ಆದೇಶ ರಾಜಕೀಯಪ್ರೇರಿತ: ಅಶೋಕ್
ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶ ಅತ್ಯಂತ ಜನವಿರೋಧಿ ನಡೆಯಾಗಿದ್ದು, ಇದು ರಾಜಕೀಯ ಪ್ರೇರಿತ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಡವರು, ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ಗುಣಮಟ್ಟದ ಒದಗಿಸುತ್ತಿರುವ ಜನ ಔಷಧಿ ಕೇಂದ್ರಗಳಿಗೆ ಅವಕಾಶ ನೀಡದಿರಲು ಕಾರಣವೇನು? ಸರ್ಕಾರಿ …
Read More »ಇದೇನಾ ಬ್ರ್ಯಾಂಡ್ ಬೆಂಗಳೂರು?
ಬೆಂಗಳೂರು: ಭಾನುವಾರ ರಾತ್ರಿ ಸುರಿದ ಪೂರ್ವ ಮುಂಗಾರು ಮಳೆಗೆ ಉದ್ಯಾನ ನಗರಿ ಅಕ್ಷರಶ: ನಲುಗಿದೆ. ವರುಣಾರ್ಭಟದಿಂದ ನಾಗರಿಕರು ಇದೇನಾ ಬ್ರ್ಯಾಂಡ್ ಬೆಂಗಳೂರು, ಗ್ರೇಟರ್ ಬೆಂಗಳೂರು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಎಂದು ಬದಲಾಗಿರುವ ರಾಜಧಾನಿಯಲ್ಲಿ ಪ್ರತೀ ಬಾರಿ ಮಳೆ ಸುರಿದಾಗಲೆಲ್ಲ ಮನೆಗಳಿಗೆ ನೀರು ನುಗ್ಗುವುದು, ರಸ್ತೆಯಲ್ಲಿ ನೀರು ನಿಲ್ಲುವುದು ಸಾಮಾನ್ಯ ಎಂಬಂತಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಎಡತಾಕುವ ಜನಪ್ರತಿನಿಧಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ಧಾರೆ. ಗೃಹ …
Read More »ಹುಬ್ಬಳ್ಳಿ – ಧಾರವಾಡದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ತನಿಖೆಯಿಂದ ಪತ್ತೆ: ಎನ್ ಶಶಿಕುಮಾರ್
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡದ ಎರಡು ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ಸೂರತ್ ಮೂಲದವರು ಅನ್ನೋದು ತನಿಖೆಯಿಂದ ಪತ್ತೆಯಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎನ್ ಶಶಿಕುಮಾರ್ ತಿಳಿಸಿದರು. ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿದ್ದು, ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಸಕ ಅರವಿಂದ ಬೆಲ್ಲದ್ ಬರೆದ ಪತ್ರದ ವಿಚಾರ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.ಹುಬ್ಬಳ್ಳಿ – ಧಾರವಾಡ ನಗರ …
Read More »ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್
ನವದೆಹಲಿ, (ಮೇ 19): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ (supreme court) ತಡೆಯಾಜ್ಞೆ ನೀಡಿದೆ. ಬೆಳಗಾವಿ ಅಧಿವೇಶನದ (Belagavi Session) ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ …
Read More »ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ
ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ವೈಟ್ ಫೀಲ್ಡ್ …
Read More »
Laxmi News 24×7