Breaking News

ರಾಷ್ಟ್ರೀಯ

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ …

Read More »

ವಾಹನ ಸವಾರರಿಗೆ ಇಲ್ಲಿದೆ ವಿಶೇಷ ಸುದ್ದಿ

ಬೆಂಗಳೂರು, ಜೂ.6- ಸಾರಿಗೆ ಇಲಾಖೆಯಿಂದ ನೀಡಲಾಗುವ ವಾಹನ ನೊಂದಣಿ ಪತ್ರ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ತಲುಪಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಮ್ಮತಿಸಿದೆ. ಸಾರಿಗೆ ಇಲಾಖಾ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸಚಿವಾಲಯ ನೊಂದಣಿ ಪ್ರಮಾಣ ಪತ್ರ, ಸ್ಮಾರ್ಟ್ ಕಾರ್ಡ್ ನೀಡಲು ಪ್ರತಿ ಕಾರ್ಡಿಗೆ ಅರ್ಜಿದಾರರಿಂದ ಸಂಗ್ರಹಿಸುವ 212 ರೂ.ಗಳನ್ನು ಹಾಗು ಅಂಚೆ ಮೂಲಕ ರವಾನಿಸಲು 50 ರೂ.ಗಳ ಸೇವಾಶುಲ್ಕ ಒಳಗೊಂಡು …

Read More »

ರಸ್ತೆ ಅಪಘಾತ : ಉರುಸ್‌ಗೆ ಹೊರಟಿದ್ದ ಐದು ಜನರು ಸ್ಥಳದಲ್ಲೇ ಸಾವು ; 13 ಜನರಿಗೆ ಗಾಯ.!

ಯಾದಗಿರಿ : ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(a)ರಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮೂರು ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಒಟ್ಟಾರೆ 13 ಜನರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕ್ರೂಸರ್​ ವಾಹನವು ಗುಲ್ಬರ್ಗಾ ಕಡೆಗೆ ತೆರಳುತ್ತಿತ್ತು. ವಾಹನದಲ್ಲಿ …

Read More »

40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ ಈ ಹಿಂದೆ ಜೈಲಿನಿಂದ …

Read More »

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು: 15 ಜನ ಅಸ್ವಸ್ಥ

ಗಂಗಾವತಿ: ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವನ್ನಪ್ಪಿ ಹದಿನೈದಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿದೆ. ಹೊನ್ನಮ್ಮ ಶಿವಪ್ಪ (65) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಸುಮಾರು ಹದಿನೈದಕ್ಕೂ ಹೆಚ್ಚು ಜನ ಕನಕಗಿರಿ, ಗಂಗಾವತಿಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆ ಹೊನ್ನಮ್ಮ ಅವರನ್ನು …

Read More »

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಿಕೋಟೆ, ಬೈಲಹೊಂಗಲ, ಬಸವನ …

Read More »

ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, …

Read More »

ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ; ಯೋಜನೆಯಿಂದ ವಂಚಿತರಾಗಲಿರುವ ಕರಾವಳಿ ಮಹಿಳೆಯರು

ಮಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಮಂಜೂರು ಮಾಡಿದೆ. ಈ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾಗಿದ್ದು, ಈ ಯೋಜನೆಯಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಮಹಿಳೆಯರು ವಂಚಿತರಾಗಲಿದ್ದಾರೆ. ರಾಜ್ಯದ ಮಹಿಳೆಯರಿಗೆ ದೊರೆತ ಉಚಿತ ಬಸ್ ಭಾಗ್ಯ ಕರಾವಳಿಯ ಮಹಿಳೆಯರಿಗೆ ಮರೀಚಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ …

Read More »

ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ.   ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ …

Read More »

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಸಿದ್ದರಾಮಯ್ಯ

ದಾವಣಗೆರೆ : ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ಸು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಭೆ‌ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಂದು ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಇಂದು ಕೈ ನಾಯಕರಿಗೆ ಅದೃಷ್ಟದ ಜಿಲ್ಲೆಯಾಗಿ ಪರಿಣಮಿಸಿದೆ. ಚುನಾವಣೆ ವೇಳೆ ದಾವಣಗೆರೆಯಲ್ಲಿ ಸಮಾವೇಶ ಮಾಡಿದರೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂಬ …

Read More »