Breaking News
Home / ರಾಷ್ಟ್ರೀಯ (page 493)

ರಾಷ್ಟ್ರೀಯ

ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆA.C.B.ಬಲೆಗೆ

ಖಾನಾಪುರ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿಯ ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೌದು ನಿಟ್ಟೂರು ಗ್ರಾಮ ಪಂಚಾಯತಿ ಪಿಡಿಓ ಶ್ರೀದೇವಿ ಮತ್ತು ಕ್ಲರ್ಕ್ ಸಿದ್ದಪ್ಪ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು. ಪ್ರಭುನಗರದ ನಿವಾಸಿ ರಾಮಚಂದ್ರ ಗಂಗಾರಾಮ ಪಾಟೀಲ ಇವರು ವ್ಹಿ ಪಿ ಸಿ ನಂಬರ್ 154 ಮನೆ ನಂಬರ್ 90 ನೇದ್ದು ಇದ್ದು ಇದರಲ್ಲಿ ಅರ್ಧ ಭಾಗದಲ್ಲಿ ತಂದೆಯ …

Read More »

8 ಐಪಿಎಸ್ ಅಧಿಕಾರಿಗಳಿಗೆ E.D. ಸಮನ್ಸ್

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 8 ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ್ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಆಗಸ್ಟ್ 21ರಿಂದ 31ರವರೆಗೆ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ಈ 8 …

Read More »

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …

Read More »

ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ! ಮತ್ತೆ ಗಣಿಗಾರಿಕೆ ಗ್ಯಾರಂಟಿ!

ಅನಂತಪುರ, ಆಗಸ್ಟ್ 11: ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎದುರಿಸಿರುವ ಕರ್ನಾಟಕದ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ಉದ್ಯಮಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಕಬ್ಬಿಣ ಅದಿರು ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿರುವ ರೆಡ್ಡಿಗೆ ಆಂಧ್ರಪ್ರದೇಶ ಸರ್ಕಾರ ಮುಕ್ತ ಆಹ್ವಾನ ನೀಡಿರುವ ಸುದ್ದಿ ಬಂದಿದೆ.   ಕರ್ನಾಟಕ – ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಎಂದಿನಂತೆ ಚಟುವಟಿಕೆ ನಡೆಸಲು ಇದ್ದ …

Read More »

ಮೋದಿ ವಿರುದ್ಧ ಯೋಗಿ ಬಂಡಾಯ: ಆಮ್‌ ಆದ್ಮಿ ಪಕ್ಷದ ನಾಯಕರು ನೀಡಿದ ಕಾರಣವೇನು?

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್‌ ದಂಗೆ ಎದ್ದಂತಿದೆ’ ಎಂದು ಹೇಳಿದೆ. ‌ ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …

Read More »

ಪೋಸ್ಟ್‌ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ

ಹೊಸದಿಲ್ಲಿ: ಭಾರತದ ಸ್ವಾತ್ರಂತ್ಯೋತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಹರ್‌ ಘರ್‌ ತಿರಂಗಾ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಪೋಸ್ಟ್‌ (ಭಾರತೀಯ ಅಂಚೆ ಇಲಾಖೆ) ಹೊಸ ಆಫ‌ರ್‌ ನೀಡಿದೆ. ಇಂಡಿಯಾ ಪೋಸ್ಟ್‌ ಮೂಲಕ ತ್ರಿವರ್ಣ ಧ್ವಜವನ್ನು ಮಾರಾಟ ಮಾಡಲು ಇಲಾಖೆ ಮುಂದಾಗಿದೆ. ಜಿಎಸ್‌ಟಿ ಶುಲ್ಕವಿಲ್ಲದೆ ಈ ಧ್ವಜವನ್ನು ಖರೀದಿಸಬಹುದಾಗಿದೆ. ಅಲ್ಲದೆ, ತಮ್ಮ ವೆಬ್‌ಸೈಟ್‌ನಲ್ಲಿ ಖರೀದಿಸಲಾಗುವ ಈ ಧ್ವಜವನ್ನು ಯಾವುದೇ ವಿತರಣಾ ಶುಲ್ಕ ಇಲ್ಲದೇ (ಡಿಲಿವರಿ ಚಾರ್ಜಸ್‌) ಗ್ರಾಹಕರ ವಿಳಾಸಕ್ಕೆ ತಲುಪಿಸಲಾಗುವುದು …

Read More »

(ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ.   ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ಸರ್ಕಾರಗಳಿಂದಲೂ ಕೂಡ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಒತ್ತಡಗಳು ಹೆಚ್ಚುತ್ತಿವೆ. ರಾಜ್ಯಗಳು 5,517.87 …

Read More »

ಶಿರಡಿ ಸಾಯಿಬಾಬಾಗೆ ಭಕ್ತ 100 ಗ್ರಾಂ ತೂಕದ ಬಂಗಾರದ ಕೊಳಲು ಸಮರ್ಪಿಸಿದ್ದಾರೆ.

ಮಹಾರಾಷ್ಟ್ರ): ಮಹಾರಾಷ್ಟ್ರದ ಅಹ್ಮದ್​​ ನಗರ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಿರಡಿ ಸಾಯಿಬಾಬಾಗೆ ದೆಹಲಿ ಮೂಲದ ಭಕ್ತರೊಬ್ಬರು ಚಿನ್ನದ ಕೊಳಲು ಅರ್ಪಿಸಿ ತಮ್ಮ ಭಕ್ತಿಯನ್ನು ಮರೆದಿದ್ದಾರೆ. ಅಂದಾಜು 100 ಗ್ರಾಂ ತೂಕದ ಈ ಬಂಗಾರದ ಕೊಳಲು 4.85 ಲಕ್ಷ ರೂ. ಬೆಲೆ ಬಾಳುತ್ತದೆ. ದೆಹಲಿಯ ರಿಷಬ್ ಲೋಹಿಯಾ ಎಂಬುವವರೇ ಶಿರಡಿ ಸಾಯಿಬಾಬಾಗೆ ಚಿನ್ನದ ಕೊಳಲು ಅರ್ಪಿಸಿರುವ ಭಕ್ತರು. ತಮ್ಮ ಕುಟುಂಬದ ಸಮೇತ ಶಿರಡಿಗೆ ಬಂದು ಇದನ್ನು ದೇವರಿಗೆ ಸಮರ್ಪಿಸಿದ್ದಾರೆ. ಸಾಯಿ ಬಾಬಾ ನಮಗೆ ಶ್ರೀಕೃಷ್ಣನ …

Read More »

ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಗೋಕಾಕ್ ಮೂಲದ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್ ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ …

Read More »

ಈ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ VTU ಸೂಚನೆ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.   ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ …

Read More »