Home / ರಾಷ್ಟ್ರೀಯ (page 499)

ರಾಷ್ಟ್ರೀಯ

ಆಗಸ್ಟ್ 3 ರಂದು ‘ಸಿದ್ದರಾಮೋತ್ಸವ’: ಕಾರ್ಯಕ್ರಮ ಆಯೋಜನೆ ಖರ್ಚು-ವೆಚ್ಚಕ್ಕೆ ಸಿದ್ದರಾಮಯ್ಯ ಟಿಪ್ಸ್!

ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬ ಆಯೋಜಿಸಲಾಗಿದೆ. ಸೋಮವಾರ ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಆಚರಣೆಗೆ ಉಂಟಾಗುವ ಖರ್ಚು -ವೆಚ್ಚಗಳ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಲಾಯಿತು.   ರಾಜ್ಯದ 13 ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೆಗಾ ರ್ಯಾಲಿಗೆ ಹಣವನ್ನು ಖರ್ಚು ಮಾಡಬೇಕು ಹಾಗೂ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ …

Read More »

3 ವರ್ಷ ಮೀರಿದವರ ವರ್ಗಾವಣೆ ಮಾಡಿ’

ಕಲಬುರಗಿ: ಪ್ರತಿ ಪೊಲೀಸ್ ಠಾಣೆಯಲ್ಲಿ ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಎಸ್ಬಿ ಡ್ಯೂಟಿ ಮಾಡಿದ ಕಾನ್‌ಸ್ಟೆಬಲ್‌ಗಳನ್ನು ಒಂದು ವಾರದೊಳಗೆ ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಬೇಕು ಎಂದು ಕಾನೂನು, ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ನಗರ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸಿದರು.   ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆದ ಬಳಿಕ ಮೊದಲ ಬಾರಿಗೆ ಸೋಮವಾರ ನಗರಕ್ಕೆ ಭೇಟಿ ನೀಡಿದ ಅವರು ಸಾರ್ವಜನಿಕರ ಅಹವಾಲು ಸ್ವೀಕಾರದ …

Read More »

ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಶಿರೋಳ ಗ್ರಾಮಕ್ಕೆ ಬಂತು ಸಾರಿಗೆ ಬಸ್ !

ಮುದ್ದೇಬಿಹಾಳ: ಕೊನೆಗೂ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಮೊದಲ ಬಾರಿಗೆ ಪಟ್ಟಣದಿಂದ 3-4 ಕಿಮಿ ಅಂತರದಲ್ಲಿರುವ ಶಿರೋಳ ಗ್ರಾಮಕ್ಕೆ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಬಂದಿದ್ದು ಗ್ರಾಮಸ್ಥರಲ್ಲಿ ಹರ್ಷದ ಹೊನಲು ಹರಿಯುವಂತೆ ಮಾಡಿದೆ.   ಶನಿವಾರ ನಡೆದಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ ಇಲ್ಲದಿರುವ ಕುರಿತು ತಾಲೂಕಾಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅವರ ಗಮನ ಸೆಳೆದಿದ್ದರು. ಸಭೆಯಲ್ಲಿ ಭರವಸೆ ನೀಡಿದಂತೆ ತಹಶೀಲ್ದಾರ್ …

Read More »

ರಾಷ್ಟ್ರಪತಿ ಚುನಾವಣೆ ಮತಮೌಲ್ಯದ ಲೆಕ್ಕಾಚಾರವೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆಯು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಿಂತ ಸ್ವಲ್ಪ ಭಿನ್ನವಾಗಿರುತ್ತದೆ. ಈ ಪ್ರಕ್ರಿಯೆಯಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳ ಸದಸ್ಯರು ರಾಷ್ಟ್ರಪತಿ ಚುನಾವಣೆಯ ಮತದಾರರಾಗಿರುತ್ತಾರೆ. ಆದರೆ, ರಾಷ್ಟ್ರಪತಿ ಅವರು ನಾಮನಿರ್ದೇಶನ ಮಾಡಿದ ರಾಜ್ಯಸಭೆಯ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ. ಒಬ್ಬ ಜನಪ್ರತಿನಿಧಿ ಚಲಾಯಿಸುವ ಮತವನ್ನು ಒಂದು ಮತ ಎಂದು ಪರಿಗಣಿಸಲಾಗುವುದಿಲ್ಲ. ಬದಲಾಗಿ, ಆಯಾ ರಾಜ್ಯಗಳ ಜನಸಂಖ್ಯೆಯ ಆಧಾರದ ಮೇಲೆ ಅಲ್ಲಿನ ಶಾಸಕನ …

Read More »

ಖಾನಾಪೂರಕ್ಕೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಸೇತುವೆ ಮುಳುಗಡೆ- ಜನರಿಗೆ ಸಂಕಷ್ಟ-

ಬೆಳಗಾವಿ: ಕಳೆದ 20 ದಿನಗಳಿಂದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ ಆಗಿದೆ. ವೈದ್ಯಕೀಯ ಸೌಲಭ್ಯ ಪಡೆಯಲು ಸಮಸ್ಯೆ ಆಗ್ತಿದೆ. ಹೀಗಾಗಿ, ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಮೊಬೈಲ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಮೈದುಂಬಿ ಹರಿಯುತ್ತಿರುವ ಪಾಂಡ್ರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದ್ದು, ಸೇತುವೆ ಮೇಲೆ ನಾಲ್ಕು ಅಡಿ …

Read More »

ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ

ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ.   ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …

Read More »

LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್‌ನಲ್ಲಿ ಸೇನಾ ಟ್ರೋಪ್‌ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …

Read More »

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …

Read More »

ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ

ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …

Read More »