ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೊತ್ಸವದ ಆನೆ ಬಲರಾಮ (67) ಅನಾರೋಗ್ಯದಿಂದ ಮೃತಪಟ್ಟಿದೆ. ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿ ಬಲರಾಮ ಮೃತಪಟ್ಟಿರುವುದಾಗಿ ಆನೆ ಶಿಬಿರ ಸಿಬ್ಬಂದಿಗಳು ತಿಳಿಸಿದ್ದಾರೆ. ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇತ್ತೀಚೆಗೆ ಅನಾರೊಗ್ಯದಿಂದ ಬಳಲುತ್ತಿತ್ತು. ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
Read More »ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿಯನ್ನು ಈ ಬಾರಿಯೂ ಸೋಲಿಸಿ’: ಅಮಿತ್ ಶಾ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಕಾಂಗ್ರೆಸ್ನ ಗ್ಯಾರಂಟಿಗಳ ಮೊತ್ತವು ರಾಜ್ಯ ಬಜೆಟ್ಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜನ ಎಲ್ಲ ಲೆಕ್ಕ ಹಾಕಿದ್ದಾರೆ. ಆದರೆ, ಇದು ರಾಹುಲ್ ಗಾಂಧಿಗೆ ಅರ್ಥವಾಗಿಲ್ಲ’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಟೀಕಿಸಿದರು. ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ಪರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದ ಅವರು, ‘ಗುಜರಾತ್, ಉತ್ತರಪ್ರದೇಶ, ಉತ್ತರಾಖಂಡ, ಅಸ್ಸಾಂ, ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ಕೂಡ ಕಾಂಗ್ರೆಸ್ ಇವೇ ಐದು ಗ್ಯಾರಂಟಿಗಳನ್ನು …
Read More »ಕೇಂದ್ರದ ಎಂಜಿನ್ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’: ಫಡಣವೀಸ್
ಬೆಳಗಾವಿ: ‘ಕೇಂದ್ರದಲ್ಲಿ ಬಿಜೆಪಿಯ ಎಂಜಿನ್ ಇದೆ. ಅದಕ್ಕೆ ಬೇರೆ ಪಕ್ಷದ ಬೋಗಿ ಅಳವಡಿಸಿದರೆ, ಹೈದರಾಬಾದ್ನಲ್ಲಿರುವ ಎಂಜಿನ್ ಕಡೆ ಹೋಗುತ್ತದೆ. ಹಾಗಾಗಿ ಆ ಎಂಜಿನ್ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೋರಿದರು. ಇಲ್ಲಿನ ಟಿಳಕ್ ಚೌಕ್ನಲ್ಲಿ ಗುರುವಾರ ನಡೆದ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಬಲ್ ಎಂಜಿನ್ ಸರ್ಕಾರ ಅಧಿಕಾರದಲ್ಲಿದ್ದರೆ ಅಭಿವೃದ್ಧಿ …
Read More »ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ
ಮೂಡಲಗಿ: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …
Read More »ರಾಜಕೀಯ ಪಕ್ಷಗಳಿಂದ ಉಚಿತ ಗ್ಯಾರಂಟಿಗಳ ಮಹಾಪೂರ:ರಾಜ್ಯದ ಆರ್ಥಿಕತೆಯ ಗತಿ ಏನು..?
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡದಲ್ಲಿನ ಮಹಾಸಮರ ಅಂತಿಮ ಹಂತಕ್ಕೆ ಬಂದಿದೆ. ಪ್ರಮುಖ ರಾಜಕೀಯ ಪಕ್ಷಗಳು ಮತದಾರರ ಮತ ಸೆಳೆಯಲು ತಮ್ಮ ಪ್ರಣಾಳಿಕೆಯಲ್ಲಿ ಉಚಿತಗಳ ಭರಪೂರ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಧಿಕಾರಕ್ಕೆ ಬರಲು ಪಕ್ಷಗಳ ವಿವಿಧ ಉಚಿತ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸದ ಮೇಲೆ ಹೊರೆ ಏನಾಗಲಿದೆ ಎಂಬ ವರದಿ ಇಲ್ಲಿದೆ ಓದಿ. ಮತಬೇಟೆಗೆ ಇಳಿದ ಮೂರು ಪಕ್ಷಗಳು: ರಾಜ್ಯ ಚುನಾವಣೆಯ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಇನ್ನೇನು ನಾಲ್ಕು ದಿನಗಳಲ್ಲಿ ಮತದಾನ ನಡೆಯಲಿದೆ. …
Read More »ಲಕ್ಷ್ಮಣ ಸವದಿಯಿಂದ ಬಿಜೆಪಿಗೆ ದ್ರೋಹ: ಅಮಿತ್ ಶಾ
ಅಥಣಿ: ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರ್ ಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ಹುಟ್ಟಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಬೆಳಗಾವಿ ಹಿಂಡಲಗಾ ಜೈಗೆ ಹಾಕಿಸಿದರು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರು …
Read More »ಅಂತರರಾಜ್ಯ ಚೆಕ್ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದನೋಡಲ್ ಅಧಿಕಾರಿ ಪರಶುರಾಮ ದುಡಗುಂಟಿ
ಬೆಳಗಾವಿ: ಜಿಲ್ಲಾ ವೆಚ್ಚ ವೀಕ್ಷಣಾ ನೋಡಲ್ ಅಧಿಕಾರಿ ಪರಶುರಾಮ ದುಡಗುಂಟಿ ಇಂದು ಬೆಳಗಾವಿ ಉತ್ತರ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ, ಅರಳಿಕಟ್ಟಿ, ಹತ್ತರಗಿ ಹಾಗೂ ಬಾಚಿ ಅಂತರರಾಜ್ಯ ಚೆಕ್ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನಕ್ಕೆ ಇನ್ನೇನು ನಾಲ್ಕು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸುವಂತೆ ಚೆಕ್ ಪೋಸ್ಟ ಸಿಬ್ಬಂದಿಗಳಿಗೆ ನಿರ್ದೇಶಿಸಿದರು. ತಪಾಸಣೆ ಪರಿಣಾಮಕಾರಿ ಆಗಲು ಹೆಚ್ಚುವರಿ ತಪಾಸಣಾ ಅಧಿಕಾರಿಗಳು ಮತ್ತು ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ …
Read More »ಹಾಡಹಗಲೇ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ
ವಿಜಯಪುರ: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿರುವಾಗಲೇ ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಮಹಿಳಾ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೈದರ್ ಅಲಿ ನದಾಫ್ ಗುಂಡಿನ ದಾಳಿಗೆ ಬಲಿಯಾದವರು. ಹೈದರ್ ವಾರ್ಡ್ ನಂಬರ್ 19ರ ಪಕ್ಷೇತರ ಪಾಲಿಕೆ ಸದಸ್ಯೆ ನತಾಶ್ ಅವರ ಪತಿ ಎಂದು ತಿಳಿದುಬಂದಿದೆ. ಹೈದರ್ ಅಲಿ ನದಾಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ …
Read More »ಎಂಇಎಸ್ ಕಿಡಿಗೇಡಿಗಳ ಸಂಘಟನೆಎಂದ ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ: ಎಂಇಎಸ್ ಕಿಡಿಗೇಡಿಗಳ ಸಂಘಟನೆ. ನಾವು ಅವರನ್ನು ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ವೇಳೆ ಎಮ್ಇಎಸ್ನವರು ಜನರ ಮನಸ್ಸನ್ನು ಕೆಡಿಸುವ ಗಿಮಿಕ್ ಮಾಡುತ್ತಾರೆ. ಬೆಳಗಾವಿ ಜನರಿಗೆ ಇದೆಲ್ಲಾ ಗೊತ್ತಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದರು. ಜನ ತೀರ್ಮಾನ ತೆಗೆದುಕೊಂಡು ಎಮ್ಇಎಸ್ಅನ್ನು ಐದು ವರ್ಷ ಮನೆಗೆ ಕಳುಹಿಸುತ್ತಾರೆ ಎಂದರು. ನಮ್ಮ ಪ್ರಧಾನಿ ಕಾಂಗ್ರೆಸ್ನ ಪ್ರಧಾನಿಗಳಂತೆ ಇರಬೇಕಿಲ್ಲ ನಮ್ಮ ಪ್ರಧಾನಿ ಕಾಂಗ್ರೆಸ್ನ …
Read More »ಶಿವಸೇನಾ ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಸೀಮಿತ: ಅಶೋಕ ಚವ್ಹಾಣ
ಬೆಳಗಾವಿ: ‘ಶಿವಸೇನಾ(ಉದ್ಧವ್ ಠಾಕ್ರೆ ಬಣ) ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ. ರಾಜ್ಯದ ಹೊರಗೆ ನಾವು ಯಾವುದೇ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಕಾಂಗ್ರೆಸ್ನ ಸ್ಟಾರ್ ಪ್ರಚಾರಕರೂ ಆಗಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಮತಗಳ ವಿಭಜನೆಯಾಗಿ ಬಿಜೆಪಿಗೆ ಲಾಭವಾಗದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸೇರಿದಂತೆ ಜಾತ್ಯತೀತ ಶಕ್ತಿಗಳು ನೋಡಿಕೊಳ್ಳಬೇಕು’ ಎಂದು ಹೇಳಿದರು. …
Read More »
Laxmi News 24×7