Breaking News

ರಾಷ್ಟ್ರೀಯ

ವಿವಿಧೆಡೆ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಂಠೀರವ ನಗರ, ಕಮಲಾನಗರ, ವಿಧಾನಸೌಧದ ಮುಂಭಾಗ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಅಂಬೇಡ್ಕರ್ ಸರ್ಕಲ್, ಅಂಬೇಡ್ಕರ್ ಭವನ ಹಾಗೂ ರವೀಂದ್ರ ಕಲಾಕ್ಷೇತ್ರ ಸೇರಿದಂತೆ ವಿವಿಧೆಡೆ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ರವರು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ, ಅವರು ಮಾತನಾಡಿದರು.   ನಂತರ ಮಾತನಾಡಿದ ಅವರು, ಮಹಾನ್ ಮಾನವತವಾದಿ ಭಾರತರತ್ನ, …

Read More »

ಇಂದು ಸಂಜೆಯೇ ಕಾಂಗ್ರೆಸ್ ಸೇರುತ್ತೇನೆ:ಲಕ್ಷ್ಮಣ ಸವದಿ

ಬೆಂಗಳೂರು – ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದಕ್ಕೆ ಮುಹೂರ್ತ ಫಿಕ್ಸ ಆಗಿದೆ. ಇಂದು ಸಂಜೆ 4.30ಕ್ಕೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆಯ ಬಳಿಕ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ಶಿವಕುಮಾರ ಈ ಕುರಿತು ಮಾಹಿತಿ ನೀಡಿದರು. ಲಕ್ಷ್ಮಣ ಸವದಿ ಯಾವುದೇ ಷರತ್ತಿಲ್ಲದೇ …

Read More »

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮರಣ ಕಾರಣ ನಮೂದು ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮರಣ ಕಾರಣವನ್ನು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ಭರ್ತಿ ಮಾಡಿ, ಜನನ-ಮರಣ ಮುಖ್ಯ ನೋಂದಣಾ ಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತರು ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿ ಜಂಟಿ ಯಾಗಿ ಸುತ್ತೋಲೆ ಹೊರಡಿಸಿದ್ದಾರೆ.   ಜನನ, ಮರಣಗಳ ನೋಂದಣಿ ಅಧಿನಿಯಮ 1969ರ ಪ್ರಕಾರ ಎಲ್ಲಾ ವೈದ್ಯರು, ವೈದ್ಯ ವೃತ್ತಿಪರರು ತಾವು ಉಪಚರಿಸಿದ ವ್ಯಕ್ತಿ ಮೃತನಾದಲ್ಲಿ …

Read More »

ಚಂದಾದಾರಿಕೆ ಹೆಸರಿನಲ್ಲಿ ವಂಚನೆ ಗಾಳ: ಇಂಡಿಯನ್ ಮನಿ ಕಂಪನಿ ವಿರುದ್ಧ 6 ಎಫ್‌ಐಆರ್

ಬೆಂಗಳೂರು: ಹಣಕಾಸು ವಿಷಯದಲ್ಲಿ ಸಲಹೆ ನೀಡುವ ಉದ್ದೇಶವಿಟ್ಟುಕೊಂಡಿದ್ದ ‘ಇಂಡಿಯನ್ ಮನಿ ಡಾಟ್ ಕಾಮ್’ಕಂಪನಿ, ಹಲವು ಸಾಧಕರ ಹೆಸರು ಹಾಗೂ ಅವರಿಂದ ತರಬೇತಿ ಕೊಡಿಸುವ ನೆಪದಲ್ಲಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ಹಣ ಪಡೆದು ವಂಚಿಸಿರುವ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.   ಅರೆಕಾಲಿಕ ಕೆಲಸದ ಹೆಸರಿನಲ್ಲಿ ಯುವಕ- ಯುವತಿಯರನ್ನು ವಂಚಿಸಿರುವ ಪ್ರಕರಣದ ತನಿಖೆ ಕೈಗೊಂಡಿರುವ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ …

Read More »

ಶಿವಮೂರ್ತಿ ಶರಣರ ಮೇಲೆ ದೋಷಾರೋಪ ನಿಗದಿ

ಚಿತ್ರದುರ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ದೋಷಾರೋಪವನ್ನು ಜಿಲ್ಲಾ ನ್ಯಾಯಾಲಯ ಗುರುವಾರ ನಿಗದಿಪಡಿಸಿತು.   ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ದೋಷಾರೋಪ ಪಟ್ಟಿಗಳ ಪೈಕಿ ಒಂದರಲ್ಲಿನ ದೋಷಾರೋಪವನ್ನು ನಿಗದಿಪಡಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಯಿತು. ಕಲಾಪದ ಅವಧಿ ಮುಕ್ತಾಯಗೊಂಡಿದ್ದರಿಂದ ಮತ್ತೊಂದು ದೋಷಾರೋಪ …

Read More »

ನಿಲ್ಲಿಸದ ಬಸ್‌; ಚಲಿಸುವಾಗಲೇ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವು

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಪಟ್ಟಣದ ಹೊರ ವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಳಿ ಸಾರಿಗೆ ಸಂಸ್ಥೆ ಬಸ್‌ ನಿಲುಗಡೆ ಮಾಡಲಿಲ್ಲ. ಹೀಗಾಗಿ ಚಲಿಸುತ್ತಿದ್ದಾಗಲೇ ಅದರಿಂದ ಇಳಿಯಲು ಪ್ರಯತ್ನಿಸಿ ನಿಯಂತ್ರಣ ತಪ್ಪಿ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಬುಧವಾರ ಮೃತಪಟ್ಟಿದ್ದಾರೆ. ಹೊಳಲು ಗ್ರಾಮದ ಎಲ್.ಶ್ವೇತಾ ಶಾಂತಪ್ಪನವರ (19) ಮೃತ ವಿದ್ಯಾರ್ಥಿನಿ. ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್‌ ಆಯಂಡ್ ಕಮ್ಯುನಿಕೇಶನ್ಸ್‌ ವಿಭಾಗದ ಮೊದಲ ಸೆಮಿಸ್ಟರ್ ನಲ್ಲಿ ಓದುತಿದ್ದ ಶ್ವೇತಾ, ಪ್ರತಿದಿನ ಪಟ್ಟಣದ …

Read More »

ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶ

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ. ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ  ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ  ಸಾರಾಯಿ ಮಾರಾಟ …

Read More »

ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ನಿಪ್ಪಾಣಿ: ’ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತರ ಪಕ್ಷದವರು ನಮ್ಮ ಪಕ್ಷಕ್ಕೆ ಸೇರುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಪಕ್ಷಕ್ಕೆ ಬಂದ ಕಾರ್ಯಕರ್ತರ ಗೌರವ ಕಾಪಾಡುವದೊಂದಿಗೆ ಸಮಾಜದ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಚಿಂತನೆಯ ವಿಚಾರಗಳನ್ನು ಬಿಂಬಿಸಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ರೋಹಿದಾಸನಗರದಲ್ಲಿ ವಡ್ಡರ ಸಮಾಜದ ಸುಮಾರು ನೂರಕ್ಕೂ ಅಧಿಕ ಹಾಗೂ ಜತ್ರಾಟವೇಸ್‌ನಲ್ಲಿ ಢೋರ ಸಮಾಜದ …

Read More »

ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು.: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ ಬಿಜೆಪಿ ಕಾರ್ಯಕರ್ತರು, …

Read More »

ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ

ಬೆಳಗಾವಿ: ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ಕೊಡದಿರುವ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಶಿಕಾಂತ ನಾಯಿಕ ಗುರುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಪಕ್ಷ ಕಟ್ಟಲು ಸಹವಾಲು ವರ್ಷಗಳ ಕಾಲ ಶ್ರಮಿಸಿದ್ದೇನೆ. ಹಳ್ಳಿ ಹಳ್ಳಿಯಲ್ಲಿ ಸಂಘಟನೆ ಮಾಡಿದ್ದೇನೆ. ಆದರೆ ಪಕ್ಷ ನನ್ನನ್ನು ಗುರುತಿಸಲಿಲ್ಲ. ಅನೇಕ ಬಾರಿ ಟಿಕೆಟ್ ಕೇಳಿದರೂ ಕೊಡಲಿಲ್ಲ. ಯಾವುದೇ …

Read More »