Breaking News
Home / ರಾಷ್ಟ್ರೀಯ (page 559)

ರಾಷ್ಟ್ರೀಯ

ಕರ್ನಾಟಕದ ದುಃಸ್ಥಿತಿಗೆ ಸಿದ್ದರಾಮಯ್ಯ ಕಾರಣ; ಕುಮಾರಸ್ವಾಮಿ

ಕೋಲಾರ, ಮಾರ್ಚ್”ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕಸಿದ್ದರಾಮಯ್ಯಅವರೇ ಮೂಲ ಕಾರಣ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದರು. ಭಾನುವಾರ ಕೋಲಾರದಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್, ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ …

Read More »

ರಾಜ್ಯಕ್ಕೆ ರಾಜಕೀಯ ಚಾಣಕ್ಯ ಅಮಿತ್ ಶಾ ಎಂಟ್ರಿ.. ಏಕೆ?

ಕೇಂದ್ರ ಗೃಹ ಸಚಿವ, ರಾಜಕೀಯ ಚಾಣಾಕ್ಷ ಅಮಿತ್ ಶಾ ಕರ್ನಾಟಕಕ್ಕೆ ಎಂಟ್ರಿ ಕೊಡಲಿದ್ದಾರೆ. ತುಮಕೂರಿನ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಆಗಮಿಸಲಿರುವ ಅವರು ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತೋತ್ಸವದ ಹಿನ್ನೆಲೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಿದ್ದಗಂಗಾ ಮಠ… ತ್ರಿವಿಧ ದಾಸೋಹದಿಂದ ಪ್ರಸಿದ್ದಿ ಪಡೆದ ಕ್ಷೇತ್ರ. ಇಂತಹ ಕ್ಷೇತ್ರದ ಮಠಾಧಿಪತಿಗಳಾಗಿದ್ದ ನಡೆದಾಡುವ ದೇವರು ಡಾ. ಶ್ರೀಶಿವಕುಮಾರ ಮಹಾಸ್ವಾಮಿಗಳ 115 ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏಪ್ರಿಲ್ 1 …

Read More »

BREAKING ತಿರುಪತಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮದ್ವೆ ಬಸ್​ ಪಲ್ಟಿಯಾಗಿ 8 ಸಾವು.. 55 ಮಂದಿ ಗಂಭೀರ

ಮದುವೆ ಬಸ್ 50 ಅಡಿ ಆಳದ ಕಂದಕಕ್ಕೆ ಬಿದ್ದಿರುವ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ತಾಲೂಕಿನ ಬಾಕರಪೇಟೆ ರಸ್ತೆಯಲ್ಲಿ ನಡೆದಿದೆ. ಮದನಪಲ್ಲಿ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಪಾಸ್‌ನ ಮುಖ್ಯ ತಿರುವಿನಲ್ಲಿ ಅನಾಹುತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿ ಏಳು ಜನರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಾಲಿಶೆಟ್ಟಿ ವೆಂಗಪ್ಪ, ಮಾಲಿಶೆಟ್ಟಿ ಮುರಳಿ, …

Read More »

ಮಗು ರಕ್ಷಿಸಿದ ಶ್ವಾನ-ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ನಾಳೆಯಿಂದ SSLC ಪರೀಕ್ಷೆ ಆರಂಭ ನಾಳೆಯಿಂದದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಏಪ್ರಿಲ್ 4ರಂದು ಗಣಿತ, 6ಕ್ಕೆ ಸಮಾಜ ವಿಜ್ಞಾನ, 8ಕ್ಕೆ ತೃತೀಯ ಭಾಷೆ ಮತ್ತು 11 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್​​ ಕಡ್ಡಾಯವಿಲ್ಲ …

Read More »

ಇಂದಿನಿಂದ RCB ಅಸಲಿ ಆಟ ಶುರು; ವಿರಾಟ್ ಕೊಹ್ಲಿ ಸುತ್ತ ಸುತ್ತುತ್ತಿದೆ ಹೊಸ ಚರ್ಚೆ..! 

ಐಪಿಎಲ್​ ಇತಿಹಾಸದ 15ನೇ ಅಧ್ಯಾಯ ಆರಂಭವಾಗಿಬಿಟ್ಟಿದೆ. ಇಂದು ಅಭಿಮಾನಿಗಳಿಗೆ ಡಬಲ್​ ಧಮಾಕಾ ಯಾಕಂದ್ರೆ, ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ ಇವತ್ತು ಆರ್​​ಸಿಬಿ ಅಸಲಿ ಆಟ ಇಂದಿನಿಂದ ಶುರುವಾಗಲಿದೆ. ಬೆಂಗಳೂರು ತಂಡದ ಅಭಿಮಾನಿಗಳ ರಸದೌತಣಕ್ಕೆ ಕಾದುಕುಳಿತಿದ್ದಾರೆ. ಈಗಲೂ ಕೊಹ್ಲಿ ಕ್ರಮಾಂಕವೇ ಯಕ್ಷಪ್ರಶ್ನೆಯಾಗಿದೆ. ಆರ್​​ಸಿಬಿ.. ಆರ್​​ಸಿಬಿ.. ಈ ಕೂಗು ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಇವತ್ತು ಮೊಳಗಲಿದೆ. ಅದಕ್ಕೆ ಕಾರಣ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ನೂತನ ಕ್ಯಾಪ್ಟನ್​ ನೇತೃತ್ವದಲ್ಲಿ …

Read More »

RRR ಸಿನಿಮಾದಲ್ಲಿ ತಾಂತ್ರಿಕ ದೋಷ – ಚಿತ್ರಮಂದಿರದ ಗಾಜು ಪುಡಿ ಪುಡಿ

ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ. ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ …

Read More »

ಗ್ರಾಮಕ್ಕೆ ಬಸ್‌ ಬಿಡಿ: ಸಿಎಂ ಕಾರು ತಡೆದು ಮನವಿ ಪತ್ರ ಕೊಟ್ಟ ವಿದ್ಯಾರ್ಥಿನಿಯರು

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಹೋಗುತ್ತಿದ್ದ ಕಾರ್ ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿನಿಯರು ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೊಮ್ಮಾಯಿ ಅವರು ಶನಿವಾರ(ಇಂದು) ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರು ಗ್ರಾಮದ ಮಲಿಯಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವಿಯ ದರ್ಶನ ಪಡೆದ ನಂತರ ಗ್ರಾಮದಲ್ಲಿ …

Read More »

ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಸರ್ಕಲ್​ ಇನ್ಸ್​ಪೆಕ್ಟರ್​ ಪರಾರಿ: ಬಯಲಾಯ್ತು ಸಿಐ ಕರಾಳ ಮುಖ

ತಿರುಪತಿ: ಕರ್ನೂಲ್​ ತಾಲೂಕು ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್​ ಇನ್ಸ್​ಪೆಕ್ಟರ್​ ಒಬ್ಬರು ಠಾಣೆಯಲ್ಲಿದ್ದ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕರ್ನೂಲ್​ ಜಿಲ್ಲಾ ಪೊಲೀಸ್​ ವಿಭಾಗ ತಲೆಮರೆಸಿಕೊಂಡಿರುವ ಪೊಲೀಸ್​ ಇನ್ಸ್​ಪೆಕ್ಟರ್​ ಪತ್ತೆಗೆ ಶುಕ್ರವಾರ ಬಲೆ ಬೀಸಿದ್ದಾರೆ.   ಮೂಲಗಳ ಪ್ರಕಾರ, ಸರ್ಕಲ್​ ಇನ್ಸ್​ಪೆಕ್ಟರ್​ ಹೆಸರು ಕಂಬಗಿರಿ ರಾಮುಡು ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ತಮಿಳುನಾಡು ಮೂಲದ ಸತೀಶ್​ …

Read More »

ಅಗತ್ಯ ವಸ್ತುಗಳ ಬೆನ್ನಲ್ಲೇ ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ

ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ NLEM ನಲ್ಲಿ …

Read More »

ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!

ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಹಣಕಾಸು ವಿಚಾರಕ್ಕೆ ಹಲವಾರು ಬಾರಿ ಗಲಾಟೆ ಮಾಡಿಕೊಂಡಿದ್ದರು. ವರದಕ್ಷಿಣೆ (Dowry) ಹಣ ತರುವಂತೆ ಗಂಡ ಪೀಡಿಸುತ್ತಿದ್ದನಂತೆ. ಹೀಗಾಗಿ ಸೌಮ್ಯ ತವರುಮನೆಯಿಂದ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ. ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು …

Read More »