Breaking News
Home / ರಾಷ್ಟ್ರೀಯ (page 569)

ರಾಷ್ಟ್ರೀಯ

ಅಶೋಕ- ಅಶ್ವತ್ಥನಾರಾಯಣ ಕಿತ್ತಾಟ!ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗ

ಬೆಂಗಳೂರು: ಮಾಗಡಿ ತಾಲ್ಲೂಕಿನ ತಹಶೀಲ್ದಾರ್‌ ವರ್ಗಾವಣೆ ವಿಚಾರದಲ್ಲಿ ಕಂದಾಯ ಸಚಿವ ಆರ್‌.ಅಶೋಕ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನಡುವೆ ವಿಧಾನಸಭೆ ಮೊಗಸಾಲೆಯಲ್ಲೇ ಗುರುವಾರ ಕಿತ್ತಾಟ ನಡೆದಿದೆ. ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗಗೊಂಡಿದೆ.   ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥನಾರಾಯಣ, ಮಾಗಡಿ ತಹಶೀಲ್ದಾರ್‌ ಶ್ರೀನಿವಾಸ್‌ ಅವರನ್ನು ವರ್ಗಾವಣೆ ಮಾಡುವಂತೆ ಕಂದಾಯ ಸಚಿವರಿಗೆ ಪತ್ರ ಬರೆದಿದ್ದರು. ಆದರೆ, ಕಂದಾಯ ಸಚಿವರು ವರ್ಗಾವಣೆ ಆದೇಶ ಹೊರಡಿಸಿರ ಲಿಲ್ಲ. …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …

Read More »

ಶಸ್ತ್ರ ಚಿಕಿತ್ಸೆಗಾಗಿ ವಿದೇಶಕ್ಕೆ ಹಾರಿದ ನಟ ಪ್ರಭಾಸ್

ನಟ ಪ್ರಭಾಸ್ ಅಭಿನಯದ ‘ರಾಧೆಶ್ಯಾಮ್’ ಸಿನಿಮಾ ಬಳಿಕ ಈಗ ಪ್ರಭಾಸ್ ನಾಪತ್ತೆ ಆಗಿದ್ದಾರೆ. ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆ ಕಂಡು ನಟ ಪ್ರಭಾಸ್ ಬೇಸರವಾಗಿದ್ದಾರೆ. ಹಾಗಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿತ್ತು. ಆದರೆ ಕಾರಣ ಬೇರೆನೇ ಇದೆ.   ನಟ ಪ್ರಭಾಸ್ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಭಾಸ್ ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆ ಪಡೆಯಲು ವಿದೇಶಕ್ಕೆ ಹಾರಿದ್ದಾರೆ. ಚಿಕಿತ್ಸೆಗಾಗಿ ಪ್ರಭಾಸ್ ಸ್ಪೇನ್‌ಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕೆಲವು …

Read More »

ಕುಡಿದು ಮಲಗಿದ್ದ ವೃದ್ಧನ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಬೀದಿಯಲ್ಲಿ ಮಲಗಿದ್ದ ವೃದ್ಧನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.ಮಾರ್ಚ್ 15ರ ನಸುಕಿನ ಜಾವ ಹೆಗ್ಗನಹಳ್ಳಿಯಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಕೊಲೆಯಾದವ. ಅಂದು ರಾತ್ರಿ ಬಾರ್​ವೊಂದರಲ್ಲಿ‌ ಕಂಠಪೂರ್ತಿ ಕುಡಿದಿದ್ದ ಹಿನ್ನೆಲೆಯಲ್ಲಿ ಕೃಷ್ಣಪ್ಪನನ್ನು ಸ್ಥಳೀಯರು ಅಂಗಡಿಯೊಂದರ ಮುಂದೆ ಮಲಗಿಸಿ ಹೋಗಿದ್ದರು. ಕುಡಿದು ಮಲಗಿದ್ದ ಈ ಜಾಗಕ್ಕೆ ಸೈಕೋ ಮನಸ್ಥಿತಿಯ …

Read More »

ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್‍ನಲ್ಲಿ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಬಳೆಗಳ ಕಳ್ಳತನ : ಓರ್ವ ಮಹಿಳೆ ಅರೆಸ್ಟ್..!

ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್‍ನಲ್ಲಿ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಬಳೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್‍ನಲ್ಲಿ ಹರಿಯಾಣಾ ರಾಜ್ಯದ ಗುಡಗಾಂವ್‍ನ ಶಿಪ್ರಾ ಬಿಜಾವತ್ ಎಂಬವರು ಹೊಟೆಲ್ ಮೆರಿಯಟ್‍ನಲ್ಲಿ ರೂಮ್ ಮಾಡಿಕೊಂಡಿದ್ದರು. ಬೆಳಗಾವಿ ಹತ್ತಿರದ ರಾಜಾಗೋಳಿ ಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಚ್‍ಆರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಇವರು ವಜ್ರದ ಬಳೆಗಳನ್ನು ಬ್ಯಾಗ್‍ನಲ್ಲಿ ಹಾಕಿ ತೆಗೆದಿಟ್ಟಿದ್ದರು. ಬೆಳಿಗ್ಗೆ 10 ಗಂಟೆಗೆ …

Read More »

ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ

ಕರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. …

Read More »

ಪೊಲೀಸರ ಗಮನ ಬೇರೆಡೆ ಸೆಳೆದು ಚಾರಣಾಧೀನ ಖೈದಿ ಒಬ್ಬ ಕಾರಾಗೃಹದಿಂದಲೇ ಪರಾರಿ

ಗಲಾಟೆ, ಜಾತಿನಿಂದನೆ ಸೇರಿದಂತೆ ಒಟ್ಟು 6 ಪ್ರಕರಣದಲ್ಲಿ ಆತ ಭಾಗಿಯಾಗಿದ್ದ. ಇದೀಗ ಜೈಲು ಸೇರಿ 15 ದಿನಗಳಲ್ಲೇ ಆರೋಪಿ ಪರಾರಿ ಆಗಿದ್ದಾನೆ. ಪೊಲೀಸರ ಗಮನ ಬೇರೆಡೆ ಸೆಳೆದು ತಪ್ಪಿಸಿಕೊಂಡಿದ್ದಾನೆ.ಬೆಳಗಾವಿ: ವಿಚಾರಣಾಧೀನ ಖೈದಿ ಒಬ್ಬ ಕಾರಾಗೃಹದಿಂದಲೇ ಪರಾರಿ ಆದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಾರಾಗೃಹದಲ್ಲಿ ನಡೆದಿದೆ. ಖೈದಿ ಖಾದಿರಸಾಬ್ ರಾಜೇಖಾನ್ (34) ಎಂಬಾತ ಜೈಲಿನಿಂದಲೇ ಪರಾರಿ ಆಗಿದ್ದಾನೆ. ಜೈಲು ಸಿಬ್ಬಂದಿ ಗಮನ ಬೇರೆಡೆ ಸೆಳೆದು ಸಬ್ ಜೈಲಿನ ಮುಖ್ಯ ದ್ವಾರದಿಂದಲೇ ಆರೋಪಿ …

Read More »

ನಾಳೆಯಿಂದ ಎರಡು ದಿನ ಜಮ್ಮು ಪ್ರವಾಸದಲ್ಲಿ ಅಮಿತ್ ಶಾ

ಶ್ರೀನಗರ(ಜಮ್ಮು): ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನಗಳ ಕಾಲ ಜಮ್ಮು ಪ್ರವಾಸ ಕೈಗೊಳ್ಳಲಿದ್ದು, ಭದ್ರತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ, ಕೇಂದ್ರ ಸಶಸ್ತ್ರ ಪಡೆ, ಕಾಶ್ಮೀರ ಪೊಲೀಸ್​, ಗುಪ್ತಚರ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಅಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲಿರುವ ಅಮಿತ್ ಶಾ, ಮಾರ್ಚ್​ 19ರಂದು ಜಮ್ಮುವಿನಲ್ಲಿ ಆಯೋಜನೆಗೊಂಡಿರುವ ಸಿಆರ್​ಪಿಎಫ್​​ನ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ …

Read More »

ಗಂಡ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ವೈದ್ಯೆಯಾಗಿರುವ ಹೆಂಡತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

  ಹೈದರಾಬಾದ್​(ತೆಲಂಗಾಣ): ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ಇಬ್ಬರೂ ವೈದ್ಯಕೀಯ ವೃತ್ತಿಯಲ್ಲಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಆದರೆ, ಗಂಡ ವರದಕ್ಷಿಣೆಗಾಗಿ ವಿಪರೀತ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ನೊಂದ ಪತ್ನಿ ಆತ್ಮಹತ್ಯೆಯ ಹಾದಿ ತುಳಿದಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪತಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ನೀಡಿರುವ …

Read More »

ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ವಿರುದ್ಧ ಪ್ರಕರಣ​ ದಾಖಲಾಗಿದೆ.

ಗದಗ: ಕಿರುಕುಳಕ್ಕೆ ಬೇಸತ್ತು ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.   ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, …

Read More »