Breaking News
Home / ರಾಷ್ಟ್ರೀಯ (page 6)

ರಾಷ್ಟ್ರೀಯ

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು ಮತಗಳು ಚಲಾವಣೆ ಆಗಿವೆ; ಯಾವುದೇ ಗುಂಡಿ ಅದುಮಿದರೂ ಬಿಜೆಪಿಗೆ ಮತ ಚಲಾವಣೆ ಆಗಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಚುನಾವಣ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ತಿಳಿಸಿದೆ. ಆದರೆ ಇದು ಸುಳ್ಳು ಆರೋಪ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣ ಆಯೋಗ ತಿಳಿಸಿದೆ. ಅಣಕು ಮತದಾನದ ವೇಳೆ ಎಲ್ಲ 190 ಇವಿಎಂಗಳಲ್ಲಿ …

Read More »

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ …

Read More »

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ …

Read More »

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …

Read More »

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ H.D.K.

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್‌ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು. ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ …

Read More »

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು …

Read More »

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು …

Read More »

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ ಮಕ್ಕಳನ್ನು ಕೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಅನುಮಾನಾಸ್ಪದವಾಗಿ ಅವಳಿ-ಜವಳಿ ಮಕ್ಕಳು ಮೃತಪಟ್ಟಿದ್ದರು. ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡು ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಪೊಲೀಸರ ವಿಚಾರಣೆ ವೇಳೆ ಮಹಿಳೆ ಪೂಜಾ ತಾನೇ ಊಟದಲ್ಲಿ ವಿಷ ಬೆರಸಿ ಹೆತ್ತ ಮಕ್ಕಳನ್ನು ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. …

Read More »

ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.   ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ …

Read More »

ಹುಬ್ಬಳ್ಳಿಯಲ್ಲಿ ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ

ಹುಬ್ಬಳ್ಳಿಯಲ್ಲಿ ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ ಹುಬ್ಬಳ್ಳಿ : ಇಂದು ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ …

Read More »