Breaking News
Home / ರಾಷ್ಟ್ರೀಯ (page 602)

ರಾಷ್ಟ್ರೀಯ

ಬೆಳೆ ಹಾನಿ ಪ್ರದೇಶಕ್ಕೆ ಕಾಟಾಚಾರದ ಭೇಟಿ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮುಖ್ಯಮಂತ್ರಿ ಹಾಗೂ ಸಚಿವರ ಅತಿವೃಷ್ಟಿಯ ವೀಕ್ಷಣೆ ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು. ಶಿಡ್ಲಘಟ್ಟದ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್. ರವಿಕುಮಾರ್ ಅವರ ಮನೆಗೆ ಗುರುವಾರ ಭೇಟಿ ನೀಡಿದ್ದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸೌಹಾರ್ದ ಭೇಟಿ ಇದಾದರೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ …

Read More »

ದ್ವಿಶತಕ ಬಾರಿಸಿದ ನುಗ್ಗೆಕಾಯಿ, ಶತಕದತ್ತ ಟೊಮೆಟೊ

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್‌ ಬೆಲೆ ಶತಕ ಬಾರಿಸಿದ ಬೆನ್ನಲ್ಲೇ ತರಕಾರಿ ಬೆಲೆಯೂ ದುಬಾರಿಯಾಗುತ್ತಿದ್ದು, ನುಗ್ಗೆಕಾಯಿ ದ್ವಿಶತಕ ಬಾರಿಸಿದರೆ, ಟೊಮೆಟೊ ಶತಕದತ್ತ ಮುನ್ನುಗ್ಗುತ್ತಿದೆ. ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ತರಕಾರಿ ಬೆಳೆ ನಾಶವಾಗಿದೆ. ಇದರಿಂದ ತರಕಾರಿ ಬೆಲೆ ಹೆಚ್ಚಳವಾಗುತ್ತಿದೆ. ಪ್ರತಿದಿನ ಒಂದೊಂದು ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಳೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಈಗ ತರಕಾರಿ ಬೆಲೆ ಏರಿಕೆಯಾಗಿದ್ದು, ಗ್ರಾಹರಿಗೆ …

Read More »

ವಿಧಾನ ಪರಿಷತ್‌ ಚುನಾವಣೆ: ಹಿಂದೆ ಸರಿದ ಜೆಡಿಎಸ್‌

ಶಿವಮೊಗ್ಗ: ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿದ್ದ ಜೆಡಿಎಸ್‌ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿದಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದ ಪಕ್ಷ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಅನಿರೀಕ್ಷಿತ ಬೆಳವಣಿಗೆ ಯಲ್ಲಿ ಜೆಡಿಯು ಭದ್ರಾವತಿಯ ಬಿ.ಕೆ. ಶಶಿಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಈ ಬಾರಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಸ್ಪರ್ಧೆ …

Read More »

ಭ್ರಷ್ಟ ಅಧಿಕಾರಿಗಳನ್ನು ಗಲ್ಲಿಗೆ ಏರಿಸಬೇಕು. ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕೆಂದು ಪ್ರಮೋದ್ ಮುತಾಲಿಕ್ ಆಕ್ರೋಶ

ವಿಜಯಪುರ: ರಾಜಕೀಯದವರು ಗೂಂಡಾಗಳು ಎಂದು ವಿಜಯಪುರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಶ್ರೀರಾಮಸೇನೆಯ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಪ್ರಮೋದ್ ಮುತಾಲಿಕ್ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ತಾರೆ. ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ. ಹೀಗಾಗಿ ರಾಜಕಾರಣಿಗಳು ನಿಜವಾದ ಗೂಂಡಾಗಳು ಭ್ರಷ್ಟಾಚಾರಿಗಳೆಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ …

Read More »

ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್‌ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಗೋವಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಹೊತ್ತಿನಲ್ಲಿಯೇ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೊರೆಂಕೊ ಅವರು ಭೇಟಿ ನೀಡಿದ್ದಾರೆ. ಈ ಭೇಟಿ ಕುರಿತಂತೆ ಹೋಟೆಲ್‌ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಚರ್ಚಿಸಲು ಅವರು ನಿರಾಕರಿಸಿದ್ದರು. ಗೋವಾ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ …

Read More »

ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಹೊರಗಿನವರಿಗೆ …

Read More »

ಕಾಂಗ್ರೆಸ್ ಎಂಎಲ್​ಸಿ ಅಭ್ಯರ್ಥಿಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಬಂಧಿ ಎಸ್​. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …

Read More »

ಸತ್ತೇ ಹೋದ ಅಂದವನು 7 ಗಂಟೆ ಬಳಿಕ ಎದ್ದು ಕೂತಿದ್ದ: ಇಲ್ಲಿದೆ ಎದೆ ಝಲ್ ಎನಿಸುವ ವಿಡಿಯೋ

ಕೆಲವೊಮ್ಮೆ ತುಂಬಾ ಅಪರೂಪವಾಗಿ ಸತ್ತಂತಹ ವ್ಯಕ್ತಿಗಳು(Dead Person) ಮತ್ತೆ ಜೀವಂತ(Alive)ವಾಗಿರುವ ಘಟನೆಗಳನ್ನು ನಾವು ಟಿವಿ(TV)ಯಲ್ಲಿ ನೋಡಿರುತ್ತೇವೆ ಅಥವಾ ದಿನಪತ್ರಿಕೆ(News Paper)ಗಳಲ್ಲಿ ರುತ್ತೇವೆ. ಕೆಲವೊಂದು ಸಮಯದಲ್ಲಿ ಮೃತ ವ್ಯಕ್ತಿಯ ದೇಹವನ್ನು ಅಂತಿಮ ಸಂಸ್ಕಾರ(Last Rituals)ಕ್ಕೆಂದು ತೆಗೆದುಕೊಂಡು ಹೋದಾಗ ಅಲ್ಲಿ ಕೆಲವರಿಗೆ ಜೀವ ಮರಳಿ ಬಂದಿರುವಂತಹ ಘಟನೆಗಳು ನಡೆದಿವೆ. ಇಂತಹ ಘಟನೆಗಳು ಅಲ್ಲಿ ನೆರದ್ದಿದ್ದವರನ್ನು ಭಯಭೀತರನ್ನಾಗಿಸುವುದಲ್ಲದೆ, ಸತ್ತಂತಹ ವ್ಯಕ್ತಿ ಹೇಗೆ ಮತ್ತೆ ಜೀವಂತವಾಗಿದ್ದಾನೆ ಎಂದು ಆಶ್ಚರ್ಯವನ್ನು ಸಹ ಉಂಟು ಮಾಡಿರುತ್ತದೆ. ಇಲ್ಲಿಯೂ ಇಂತಹದ್ದೇ …

Read More »

ಬಾವನ ಜೊತೆಯೇ ಲವ್ವಿ ಡವ್ವಿ: ಗಂಡನಿಗೆ ಪ್ರಸಾದ ಎಂದು ನಿದ್ದೆ ಮಾತ್ರೆ! ಕತ್ತು ಹಿಸುಕುವಾಗ ಎದ್ದ ಗಂಡ, ಮುಂದೆ ಆಗಿದ್ದೇನು?

ಯಾದಗಿರಿ(ನ.21): ನಿದ್ದೆ ಮಾತ್ರೆ ನೀಡಿ ಹೆಂಡತಿಯೇ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೊವಿನಹಳ್ಳಿಯಲ್ಲಿ ನಡೆದಿದೆ. ಪಾಪಿ ಪತ್ನಿ ತನ್ನ ಅಕ್ರಮ ಸಂಬಂಧ ಮುಚ್ಚಿ ಹಾಕಲು ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.   ಚಂದ್ರಕಲಾ ತನ್ನ ಪ್ರಿಯತಮ ಬಸನಗೌಡನ ಜೊತೆ ಸೇರಿ ತನ್ನ ಪತಿ ವಿಶ್ವನಾಥರಡಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪಿ. ಚಂದ್ರಕಲಾ ತನ್ನ ಸಹೋದರಿಯ ಪತಿಯೊಂದಿಗೆ ಅನೈತಿಕ ಸಂಬಂಧ …

Read More »

ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್‌ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು.   ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್​ ಅವರ …

Read More »