ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. …
Read More »ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ …
Read More »SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,… ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. …
Read More »ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು:ಯು.ಟಿ ಖಾದರ್
ಬೆಂಗಳೂರು: ಇಂದು ವಿಧಾನಸಭೆ ಕಲಾಪದಲ್ಲಿ ಬಿ.ಎಸ್ ಯಡಿಯೂರಪ್ಪ ಕೊನೆಯ ಅಧಿವೇಶದ ಭಾಷಣ ಮಾಡಿದ್ದರು. ಇದಕ್ಕೆ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು ಎಂದು ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರಿಂದ ಮುಕ್ತವಾಗಿ ಓಡಾಡಲು ಸಾಧ್ಯವಾಯ್ತು. ಜನರ ಕೆಲಸ ಫುಟ್ಬಾಲ್ ರೀತಿ ಆಗಬಾರದು. ಆಧಿಕಾರಿಗಳು ಕೆಲಸ ಮಾಡಬೇಕು, ನಾವು ನೇರಾನೇರ ಇರಬೇಕು. ಎಲ್ಲವನ್ನೂ ಗಳಿಸಿ ಪರಿಸ್ಥಿತಿ ವಿಷಮವಾದರೆ …
Read More »ಕನ್ನಡಕ್ಕೆ ಅಗ್ರಸ್ಥಾನ: ಮಸೂದೆ ಅಂಗೀಕಾರ
ಬೆಂಗಳೂರು: ರಾಜ್ಯದಲ್ಲಿ ಕನ್ನಡಕ್ಕೆ ಅಗ್ರಸ್ಥಾನ, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸಲು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ರೂಪಿಸುವ ಉದ್ದೇಶದಿಂದ ಸರ್ಕಾರ ಮಂಡಿಸಿದ ಮಸೂದೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಮಸೂದೆಯನ್ನು ಮಂಡಿಸಿದರು. ಸೆಪ್ಟೆಂಬರ್ನಲ್ಲಿ ನಡೆದ ಅಧಿವೇಶನದಲ್ಲಿ ಇದೇ ಮಸೂದೆಯನ್ನು ಮಂಡಿಸಲಾಗಿತ್ತು. ಆಗ ಸಾರ್ವಜನಿಕ ವಲಯದಿಂದ ಕೆಲವು ಆಕ್ಷೇಪಣೆಗಳು, ಸಲಹೆಗಳು ಬಂದ ಕಾರಣ, ಅದರಲ್ಲಿನ ಕೆಲವು …
Read More »ಕಾಂಗ್ರೆಸ್ ಪ್ರಮುಖ ಸಭೆಗೆ ಗಾಂಧಿ ಕುಟುಂಬದ ಗೈರು; ಖರ್ಗೆಗೆ ಫುಲ್ ಪವರ್
ಹೊಸದಿಲ್ಲಿ: ಛತ್ತೀಸ್ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್ ಸೇ ಹಾಥ್ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಸ್ವಾತಂತ್ಯ ನೀಡುವ ಉದ್ದೇಶದಿಂದ ಗಾಂಧಿ ಕುಟುಂಬ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದಾಗ್ಯೂ ಸಮಾವೇಶದ ಉಳಿದ ಭಾಗಕ್ಕೆ ಹಾಜರಾಗುತ್ತಾರೆ. …
Read More »ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ನಿಧನ
ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪ್ರತಿಭಾ ದೇವಿ ಸಿಂಗ್ ಪಾಟೀಲ್, ಪುತ್ರ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಶೆಖಾವತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಹುಲ್ಮಾಲುಹಾಸಿನ ಮೇಲೆ ಕುಸಿದುಬಿದ್ದಿದ್ದರು ಎಂದು ಹೇಳಲಾಗಿದೆ. ಆ ಬಳಿಕ …
Read More »ಆಪರೇಶನ್ ಕಮಲದ ಮೂವರು ಬಾಂಬೆ ಫ್ರೆಂಡ್ಸ್ ಮತ್ತೆ ಕಾಂಗ್ರೆಸ್ಸಿಗೆ?
ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶತ್ರುಗಳಿಲ್ಲ, ಮಿತ್ರರೂ ಇಲ್ಲ ಎನ್ನುವ ಮಾತನ್ನು ನಾಡಿನ ರಾಜಕಾರಣಿಗಳು ಚುನಾವಣೆಯ ವೇಳೆ ನಿಜವೆಂದು ರುಜುವಾತು ಪಡಿಸುತ್ತಾರೆ. ಇದಕ್ಕೆ ಪೂರಕವಾದ ರಾಜಕೀಯ ವಿದ್ಯಮಾನಗಳು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಹಲವರು ಪಕ್ಷ ನಿಯತ್ತನ್ನು ಬದಲಿಸಿಯಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇನ್ನೇನು ಹದಿನೈದು ದಿನಗಳಲ್ಲಿ ಚುನಾವಣಾ ಆಯೋಗ ತಾರೀಕು ನಿಗದಿ ಪಡಿಸುತ್ತದೆ …
Read More »ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಅವರು, ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ …
Read More »ದಿ|ಆನಂದ ಮಾಮನಿ ಅವರ ಸ್ಥಾನ ತುಂಬುವವರು ಬಿಜೆಪಿಯವರೇ ಅಥವಾ ಕಾಂಗ್ರೆಸ್ನವರೇ
ಬೆಳಗಾವಿ: ಸತತ ಮೂರು ಬಾರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಶಾಸಕ ದಿ|ಆನಂದ ಮಾಮನಿ ಅವರ ಸ್ಥಾನವನ್ನು ತುಂಬುವ ವರು ಯಾರು? -ಇದು ಸವದತ್ತಿ ಕ್ಷೇತ್ರದಾದ್ಯಂತ ಈಗ ಎಲ್ಲರ ಬಾಯಲ್ಲಿ ಕೇಳಿಬರುತ್ತಿರುವ ಕುತೂಹಲದ ಪ್ರಶ್ನೆ. ಮಾಮನಿ ಅವರ ಸ್ಥಾನ ತುಂಬುವವರು ಬಿಜೆಪಿಯವರೇ ಅಥವಾ ಕಾಂಗ್ರೆಸ್ನವರೇ ಎಂಬ ಚರ್ಚೆ ನಿರಂತರವಾಗಿ ನಡೆದಿದೆ. ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ ಹಾಗೂ ಕಾಂಗ್ರೆಸ್ದಿಂದ ಟಿಕೆಟ್ ಯಾರಿಗೆ ಎಂಬುದು ಅಂತಿಮವಾಗಿಲ್ಲ. ಎರಡೂ …
Read More »
Laxmi News 24×7