Breaking News

ರಾಷ್ಟ್ರೀಯ

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ

ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕುರಿತು ಇಂದು …

Read More »

ಅದೃಷ್ಟದ ಮೊರೆ ಹೋದ್ರಾ ಕಾಂಗ್ರೆಸ್ ನಾಯಕ; ಹಸ್ತದ ರೇಖೆಯನ್ನೇ ಬದಲಿಸಿದ್ರಾ ಡಿಕೆಶಿ?

ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.  1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು. ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ. ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ …

Read More »

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ.:H.D.K.

ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …

Read More »

ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ

ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ‌ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ‌ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …

Read More »

ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ

ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು.   ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ …

Read More »

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ. ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ …

Read More »

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

Read More »

ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ : ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಲ್ಲೆಗಳಲ್ಲಿ ಮೋರ್ಚಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೋ ವ್ಯಾನ್ ಪ್ರಚಾರ, ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನ, ರಥ ಯಾತ್ರೆಗಳಿಗೆ ಉಸ್ತುವಾರಿಗಳನ್ನು ನೀಮಕ ಮಾಡಿದೆ. ಯಾತ್ರೆ ಪ್ರಮುಖರಾಗಿ ಸಚಿವರ ಸಿ‌ಸಿ ಪಾಟೀಲ್, ಪಕ್ಷದ ಎಲ್ಲ ಮೋರ್ಚಾಗಳ ಜಿಲ್ಲಾ ಸಮಾವೇಶ ಸಂಚಾಲಕರಾಗಿ ಬಿ.ವೈ ವಿಜಯೇಂದ್ರ, ಫಲಾನುಭವಿಗಳ ಸಮ್ಮೇಳನದ ಸಂಚಾಲಕರಾಗಿ‌ …

Read More »

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ …

Read More »