ಸದ್ಯ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮ ದಿನದಿಂದ ದಿನಕ್ಕೆ ವಿವಿಧ ಕಾರಣಕ್ಕೆ ಸುದ್ದಿಯಾಗುತ್ತಿದೆ. ರಾಜ್ಯ ಸರ್ಕಾರದ ಪ್ರಾಯೋಕತ್ವ ಇರುವ ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕನ್ನಡದ ನಟ ಹಾಗೂ ನಟಿಯರು ಮಿಂಚಿದ್ದಾರೆ. ಕೇವಲ ಕನ್ನಡ ನಟ ಹಾಗೂ ನಟಿಯರು ಮಾತ್ರವಲ್ಲದೇ ತೆಲುಗಿನ ಕಲಾವಿದರನ್ನೂ ಸಹ ಈ ಕಾರ್ಯಕ್ರಮಕ್ಕೆ ಕರೆಸಲಾಗಿದೆ. ಇನ್ನು ಮೊದಲಿಗೆ ಕಿಚ್ಚ ಸುದೀಪ್, ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. …
Read More »ದಳಪತಿ ವಿಜಯ್ ಜೊತೆ ಸೆಕ್ಸ್ ಮಾಡ್ಬೇಕುʼ..! ವಿಚಿತ್ರ ಆಸೆ ವ್ಯಕ್ತಪಡಿಸಿದ ನಟಿ
ವಾದಗಳಿಂದಲೇ ಫೇಮಸ್ ಆಗಿರುವ ತಮಿಳು ನಟಿ ರೇಷ್ಮಾ ಪಸುಪುಲೇಟಿ ಪ್ರತಿ ಬಾರಿಯೂ ತನ್ನ ದಿಟ್ಟ ಹೇಳಿಕೆಯಿಂದ ನೆಟ್ಟಿಗರು ಮೂರ್ಛೆ ಹೋಗುವಂತೆ ಮಾಡಿದ್ದಾರೆ. ಮುಕ್ತ ಮಾತುಕತೆಗಳ ಮೂಲಕ ಗಮನ ಸೆಳೆದಿರುವ ನಟಿಯ ಬಯಕೆ ಕೇಳಿದ ಜನ ಶಾಕ್ಗೆ ಒಳಲಾಗಿದ್ದಾರೆ. ಟಾಕ್ ಶೋಗಳಲ್ಲಿ ಕಾಣಿಸಿಕೊಳ್ಳುವ ನಟಿ ಇತ್ತೀಚಿಗೆ ದಳಪತಿ ವಿಜಯ್ ಕುರಿತು ಶಾಕಿಂಗ್ ಸ್ಟೇಟ್ಮೇಂಟ್ ಒಂದನ್ನು ನೀಡಿದ್ದಾರೆ. ವಯಸ್ಕರ ಟಾಕ್ ಶೋ ಪಾಡ್ಕಾಸ್ಟ್ನಲ್ಲಿ ಮಾತನಾಡುತ್ತಾ, ರೇಷ್ಮಾ ಅವರನ್ನು ಹಲವಾರು ಖಾಸಗಿ ವಿಷಯಗಳ ಬಗ್ಗೆ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ
ನಾಗ್ಪುರ: ನಾಗ್ಪುರದ ತನ್ನ ಕಚೇರಿಯಲ್ಲಿ ಲ್ಯಾಂಡ್ಲೈನ್ ಫೋನ್ ಮೂಲಕ ಅಪರಿಚಿತ ವ್ಯಕ್ತಿಗೆ ಕೊಲೆ ಬೆದರಿಕೆ ಬಂದಿದೆ. ನಿತಿನ್ ಗಡ್ಕರಿ ಕಚೇರಿ ನಾಗ್ಪುರ ಪೊಲೀಸರಿಗೆ ದೂರು ನೀಡಿದೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Read More »ಸಿದ್ದುಗೆ ಎರಡರ ಇಕ್ಕಟ್ಟು: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲೇಬೇಕೆಂದು ಆಪ್ತರು ಪಟ್ಟು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿರುವ ಬೆನ್ನಲ್ಲೇ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವುದು ಸುರಕ್ಷಿತವೇ ಎಂಬ ಚಿಂತನೆಯೂ ಚಾಲ್ತಿ ಪಡೆದಿದೆ. ಕೋಲಾರದೊಂದಿಗೆ ಬಾದಾಮಿ ಅಥವಾ ವರುಣಾದಿಂದ ಸ್ಪರ್ಧಿಸುವುದು ಸೂಕ್ತ ಎಂದು ಸಿದ್ದು ಆಪ್ತರು ಒತ್ತಡ ಹಾಕುತ್ತಿದ್ದು, ಇದೀಗ ‘ಚೆಂಡು’ ಹೈಕಮಾಂಡ್ ಅಂಗಳ ತಲುಪುವ ಲಕ್ಷಣಗಳಿವೆ. ಕೋಲಾರದಲ್ಲಿ ಮಾತ್ರ ಸ್ಪರ್ಧಿಸಿ ಅಪಾಯವನ್ನು ಮೈಮೇಲೆ ಎಳೆದು ಕೊಳ್ಳು ವುದು ಬೇಡ ಎಂಬುದು ಆಪ್ತರ ಸಲಹೆ. ಕೆಪಿಸಿಸಿ ಅಧ್ಯಕ್ಷ …
Read More »ಡಾ.ವಿಷ್ಣುವರ್ಧನ್ ಸ್ಮಾರಕ: 13 ವರ್ಷಗಳ ಹೋರಾಟ ಸಾರ್ಥಕ, ಅಭಿಮಾನಿಗಳ ಸಂಭ್ರಮ
ಮೈಸೂರು: ಚಲನಚಿತ್ರ ನಟ ದಿ. ವಿಷ್ಣುವರ್ಧನ್ ಅವರ ಸ್ಮಾರಕದ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಕಲಿಕೆಯ ತಾಣವಾಗುವ ಮಹತ್ವಾಕಾಂಕ್ಷೆಯೊಂದಿಗೆ ಜಿಲ್ಲೆಯ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ‘ಸಾಹಸ ಸಿಂಹ ದಿ. ಡಾ.ವಿಷ್ಣುವರ್ಧನ್ ಸ್ಮಾರಕ ಭವನ’ ನಿರ್ಮಾಣವಾಗಿದೆ. ಅಂತಿಮ ಹಂತದ ಕಾಮಗಾರಿಗಳು ಪ್ರಗತಿಯಲ್ಲಿವೆ. 2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್ ವೇದಿಕೆಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ಕರ್ನಾಟಕ ಪೊಲೀಸ್ ವಸತಿ ನಿಗಮವು …
Read More »ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗುವಿನ ರಕ್ಷಣೆ
ಬಳ್ಳಾರಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಸಿಂಧವಾಳ ಗ್ರಾಮದ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ (35), ಶಾಂತಿ (3), ವೆನ್ನೆಲ (4) ಕಾಲುವೆಗೆ ಹಾರಿದ ದುರ್ದೈವಿ ತಾಯಿ, ಮಕ್ಕಳು. ಘಟನೆಯಲ್ಲಿ ಒಬ್ಬ ಮಗಳು ವೆನ್ನೆಲಳನ್ನು ಸ್ಥಳೀಯರು ದಡ ಸೇರಿಸಿ ರಕ್ಷಿಸಿದ್ದಾರೆ. ಮೂಲತಃ ಬಳ್ಳಾರಿ ನಗರದ ಗುಗ್ಗರಹಟ್ಟಿ ನಿವಾಸಿಯಾದ ಲಕ್ಷ್ಮಿಳನ್ನು ನೆರೆಯ ಆಂಧ್ರದ ಅಲೂರು ಗ್ರಾಮದ ವೀರಭದ್ರ ಎನ್ನುವವರೊಂದಿಗೆ …
Read More »ಉಚಿತ ವಿದ್ಯುತ್ ಕಾಂಗ್ರೆಸ್ ನ ಸುಳ್ಳು ಡಂಗುರ: ಸಚಿವ ಸುನಿಲ್ ಕುಮಾರ್
ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ …
Read More »ಇದೇ 29ಕ್ಕೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್ನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ …
Read More »ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಬಂಧಿತರ ಸಂಖ್ಯೆ ಅರ್ಧ ಶತಕ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …
Read More »
Laxmi News 24×7