Breaking News

ರಾಷ್ಟ್ರೀಯ

ನಗರದಲ್ಲಿ ಹೆಚ್ಚಾಯ್ತು ರೌಡಿಗಳ ಅಟ್ಟಹಾಸ; ಹಫ್ತಾ ನೀಡಿಲ್ಲವೆಂದು ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿದ ಪುಡಿ ರೌಡಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೌಡಿಗಳ ಹಾವಳಿ ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ಪುಡಿ ರೌಡಿಗಳು ವರ್ತಿಸುತ್ತಿದ್ದಾರೆ. ಸಣ್ಣ ಪುಟ್ಟ ಅಂಗಡಿಗಳಿಗೆ ನುಗ್ಗಿ, ಅಲ್ಲಿದ್ದ ವ್ಯಾಪಾರಸ್ಥರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗೆ ಸಿಗರೇಟ್ ಹಣ ಕೇಳಿದಕ್ಕೆ ಬೈಂದೂರಿನ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ …

Read More »

ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ;

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ.   ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ …

Read More »

ಗರ್ಭಿಣಿ, ಬಾಣಂತಿ’ಯರಿಗೆ ನರೇಗಾದಲ್ಲಿ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮಹಾತ್ಮಾಗಾಂಧಿ ನರೇಂಗಾ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.   ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ.   ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ

ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ.25 ರಿಂದ 35 ವರೆಗೆ ಸಹಾಯಧನವನ್ನು ನೀಡಲಾಗುವುದು. ಈ ವರ್ಷದಲ್ಲಿ …

Read More »

ಸನ್‍ಬರ್ನ್ ಫೆಸ್ಟಿವಲ್’ಗೆ ಕೊನೆಗೂ ಅನುಮತಿ ನೀಡಿದ ಗೋವಾ ಸರಕಾರ

ಪಣಜಿ: ಗೋವಾದಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ‘ಸನ್‍ಬರ್ನ್ ಫೆಸ್ಟಿವಲ್’ಗೆ ಗೋವಾದ ಪ್ರವಾಸೋದ್ಯಮ ಇಲಾಖೆ ಅಂತಿಮವಾಗಿ ಅನುಮತಿ ನೀಡಿದೆ. ಸಂಗೀತೋತ್ಸವವು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತೋರ್‍ನಲ್ಲಿ ನಡೆಯಲಿದೆ.   ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಈ ಉತ್ಸವವನ್ನು ನಡೆಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಈ ಸಂಗೀತ ಮಹೋತ್ಸವದಲ್ಲಿ ದೇಶ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೊಳ್ಳುವ ಇರೀಕ್ಷೆಯಿದೆ ಎಂದೇ ಹೇಳಲಾಗಿದೆ. ಗೋವಾ ಪ್ರವಾಸೋದ್ಯಮ ಇಲಾಖೆಯು ಸನ್‍ಬರ್ನ್ ಉತ್ಸವಕ್ಕೆ …

Read More »

ಗೋವಾದ ಬೆಸಿಲಿಕಾ, ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ಕೇಂದ್ರದಿಂದ 41 ಕೋಟಿ ರೂ.ಅನುದಾನ

ಪಣಜಿ: ಓಲ್ಡ್ ಗೋವಾದ ಬೆಸಿಲಿಕಾ ಆಫ್ ಜೀಸಸ್ ಕ್ರೈಸ್ಟ್ ಮತ್ತು ಇತರ ಕೆಲವು ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ತೀರ್ಥಯಾತ್ರೆ ಮತ್ತು ಆಧ್ಯಾತ್ಮಿಕ ಮಿಷನ್ ಯೋಜನೆಯಡಿ ಕೇಂದ್ರದಿಂದ 41.49 ಕೋಟಿ ರೂ.ಗಳ ನಿಧಿಯನ್ನು ಮಂಜೂರು ಮಾಡಲಾಗಿದೆ. ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿರುವ ಓಲ್ಡ್ ಗೋವಾ ಚರ್ಚ್‍ಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. 2024ರಲ್ಲಿ ಓಲ್ಡ್ ಗೋವಾದಲ್ಲಿ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಅವರ ದೇಹವನ್ನು ಪ್ರದರ್ಶಿಸಲಾಗುವುದು ಮತ್ತು ಅದಕ್ಕೂ ಮೊದಲು ಸಂಬಂಧಿತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು …

Read More »

ಸಭಾಪತಿಗೆ ನನ್ನ ಹೆಸರು ಫೈನಲ್‌: ಬಸವರಾಜ ಹೊರಟ್ಟಿ

ಧಾರವಾಡ: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಆಡಳಿತರೂಢ ಬಿಜೆಪಿ ಪಕ್ಷದಿಂದ ನನ್ನ ಹೆಸರು ಅಂತಿಮಗೊಂಡಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭಾಪತಿ ಸ್ಥಾನದ ಅಭ್ಯರ್ಥಿಯಾದ ಬಗ್ಗೆ ಬಿಜೆಪಿ ಮುಖಂಡರಾದ ರವಿಕುಮಾರ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಶೀಘ್ರ ಅಧಿಕೃತ ಅಭ್ಯರ್ಥಿಯಾಗಿಯೂ ಪ್ರಕಟಣೆ ಹೊರ ಬೀಳಲಿದೆ. ಈ ಸಿಹಿ ಸುದ್ದಿ ನೀಡಿದ ರವಿಕುಮಾರ ಅವರಿಗೆ ಧನ್ಯವಾದ ತಿಳಿಸಿದ್ದೇನೆ. ಉತ್ತರ ಕರ್ನಾಟಕದ ನಮ್ಮ ಸಮಸ್ಯೆಗಳಿಗೆ ಪ್ರತಿಫಲ ಬೇಕಷ್ಟೇ. ಹೀಗಾಗಿ …

Read More »

ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ

ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.  

Read More »

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರಯವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ನಡೆದಿದೆ. ನಗರ ನಿವಾಸಿ ಹಣಮಂತ ಎಂಬುವರ ಶವ ಸಿಕ್ಕಿದ್ದು ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Read More »

ವಾಹನ ಸವಾರರೇ ಎಚ್ಚರ! ಇನ್ಮುಂದೆ ಫುಟ್ ಪಾತ್ ನಲ್ಲಿ ವಾಹನ ಚಲಾಯಿಸಿದ್ರೆ `ಡ್ರೈವಿಂಗ್ ಲೈಸೆನ್ಸ್’ ಅಮಾನತು!

ಬೆಂಗಳೂರು : ಫುಟ್ ಪಾತ್ ಗಳಲ್ಲಿ ತಮ್ಮ ವಾಹನಗಳನ್ನು ಚಲಾಯಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಇನ್ಮುಂದೆ ವಾಹನಗಳನ್ನು ಫುಟ್ ಪಾತ್ ಮೇಲೆ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ.     ವಾಹನ ಸವಾರರು ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ, ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವುದರ ಜೊತೆಗೆ ಅವರ ವಾಹನವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ …

Read More »