Breaking News

ರಾಷ್ಟ್ರೀಯ

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು.

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು. 1 ಸಚಿವೆ ಹೆಬ್ಬಾಳಕರ್ ಭೇಟಿಯಾದ ಶ್ರೀಶೈಲ ಜಗದ್ಗುರುಗಳು. 2 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು3 ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್.4 ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದ ಜಗದ್ಗುರುಗಳು.  ಇತ್ತೀಚೆಗೆ ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ …

Read More »

ವಿಧಾನಸೌಧ ಆವರಣದಲ್ಲಿ ಜ.27ಕ್ಕೆ 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿಯ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಲಿದ್ದಾರೆ.

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆಯು ಜ.27ರಿಂದ ಅನಾವರಣಗೊಳ್ಳಲಿದೆ. ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ …

Read More »

ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ

ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ ಅವರು, ಸುಮಾರು ಕಡೆ ಕಿರುಕುಳ ಕೊಡುವ ವರದಿಗಳು ಬರುತ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ‌ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ, ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ. ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು …

Read More »

ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ…

ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗೆ 1 ಲಕ್ಷ ಹಣ ತುಂಬಿ ಕಾಯುತ್ತಿರುವ ಜನರಿಂದ ಆಕ್ರೋಶ …ಮಹಾನಗರ ಪಾಲಿಕೆಗೆ ಮನವಿ ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗಾಗಿ ಕಾಯುತ್ತಿರುವ ಜನ 1 ಲಕ್ಷ ಹಣ ತುಂಬಿದರೂ ಸಿಗದ ಸ್ಪಂದನೆ ಮಹಾನಗರ ಪಾಲಿಕೆಯ ವಿರುದ್ಧ ಅಸಮಾಧಾನ ವ್ಯಕ್ತ ಪ್ರಧಾನಮಂತ್ರಿ ಆವಾಸ …

Read More »

ಸಿಎಂ ಹುದ್ದೆಗಾಗಿ ಅಭಿಮಾನಿಗಳ ಪೂಜೆ ಹಳೆಯದಲ್ಲ‌ :ಸತೀಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): “ವರಿಷ್ಠರ ತೀರ್ಮಾನದ ಹಿನ್ನೆಲೆ ಪಕ್ಷದಲ್ಲಿ ಎಲ್ಲವೂ ಶಾಂತವಾಗಿದೆ, ಹೈಕಮಾಂಡ್​ ಆದೇಶದ ಮುಂದೆ ನಾನು ಕುಣಿದಾಡಲು ಸಾಧ್ಯವಿಲ್ಲ ಈಗ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಈಗ ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು. 2028 ರಲ್ಲಿ ಕಾಂಗ್ರೆಸ್​ ಸರ್ಕಾರ ಮತ್ತೊಮ್ಮೆ …

Read More »

ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …

Read More »

ಹೈವೇ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು. ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ …

Read More »

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ‌ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜ.17 ರಂದು ಉಳ್ಳಾಲದ ಕೆ.ಸಿ. ರೋಡ್​ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ …

Read More »

ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ. ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ …

Read More »

ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.

ಗಂಗಾವತಿ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ …

Read More »