Breaking News

ರಾಷ್ಟ್ರೀಯ

ಪುತ್ರಿಯೊಂದಿಗೆ ತಾಯಿಯೂ ಪಿಯುಸಿ ಪಾಸ್!

ಬಂಟ್ವಾಳ: ಪುತ್ರಿಯೊಂದಿಗೆ ತಾಯಿಯೂ ಪಾಸ್ ಆದ ವಿಶೇಷವೊಂದು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ಎಂಬಲ್ಲಿ ನಡೆದಿದೆ. ಪುತ್ರಿ ತ್ರಿಶಾರೊಂದಿಗೆ ಪಿಯುಸಿ ಉತ್ತೀರ್ಣರಾದ ತಾಯಿಯ ಹೆಸರು ರವಿಕಲಾ. ತ್ರಿಶಾ ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, 584 ಅಂಕಗಳನ್ನು ಪಡೆದು ವಿಶೇಷ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ರವಿಕಲಾ ಅವರು ಆರ್ಟ್ಸ್ ತೆಗೆದುಕೊಂಡು ಖಾಸಗಿಯಾಗಿ ಪರೀಕ್ಷೆ ಬರೆದು 275 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ. ರವಿಕಲಾ ಖಾಸಗಿಯಾಗಿ ಪರೀಕ್ಷೆ ಬರೆದಿರುವುದರಿಂದ ಸಾಮಾನ್ಯ …

Read More »

ಸರ್ವೇ, ನಕ್ಷೆ ಕೆಲಸವನ್ನು ರೋವರ್ 10 ನಿಮಿಷದಲ್ಲೇ ಮುಗಿಸಲಿದೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ. ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ”ಸರ್ವೇ ಇಲಾಖೆ ಇಡೀ ಸರ್ಕಾರಕ್ಕೆ ಮೂಲ ಇಲಾಖೆ. ಯಾವುದೇ ಭೂಮಿಗೆ ದಾಖಲೆಗಳ …

Read More »

ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಮತ್ತೆ 4 ತಿಂಗಳು ಬಂದ್

ಹುಬ್ಬಳ್ಳಿ: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣ (ನಗರ ಪ್ರಾದೇಶಿಕ ಬಸ್ ನಿಲ್ದಾಣ) ವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 …

Read More »

ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ರಾಮನಗರ, ಏಪ್ರಿಲ್​ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್​ಎನ್​ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್‌ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು. ನಡೆದದ್ದೇನು? 2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ …

Read More »

ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ವಿಜಯೇಂದ್ರ

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು. ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ …

Read More »

ಕುಡಿವ ನೀರಿನ ದರ ಹೆಚ್ಚಳದ ಶಾಕ್

ಬೆಂಗಳೂರು: ಬೆಂಗಳೂರು ಜಲ ಮಂಡಳಿ ಅಳೆದೂ ತೂಗಿ ಕೊನೆಗೂ ಕುಡಿಯುವ ನೀರಿನ ದರ ಏರಿಕೆ ಮಾಡಿದೆ. ಹನ್ನೊಂದು ವರ್ಷಗಳ ನಂತರ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು ನಾಳೆ ನೀರಿನ ದರ ಹೆಚ್ಚಳ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಹೈ-ರೈಸ್ ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.30 ಪೈಸೆಯಿಂದ ಗರಿಷ್ಠ 1 ಪೈಸೆ ಪ್ರತಿ …

Read More »

ವೃತ್ತಿಯ ಕೊನೆ ದಿನ ಲಂಚದ ಬೇಡಿಕೆ ಇಟ್ಟ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಆಗಿದ್ದ ಕೃಷ್ಣಪ್ಪ ಅವರು ಬಿಲ್ ಪಾಸ್ ಮಾಡಲು ರೂ.1 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಆಗಿದ್ದರು. ಇವರು ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಎಲ್​ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆಯ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್​ ಬಿಲ್ ಪಾಸ್ ಮಾಡಲು 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. …

Read More »

ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ …

Read More »

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ; ನಕಲಿ ಚಿನ್ನದ ಕೇಸ್​ನಲ್ಲಿ ಶಕ್ಕೆ ಪಡೆದ ED

ಬೆಂಗಳೂರು, (ಏಪ್ರಿಲ್ 09): ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank ) ಹಗರಣ ಪ್ರಕರಣದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ …

Read More »

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ*

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ* *ವಿಮಾನಯಾನ ಸಂಸ್ಥೆಗಳ ಜತೆ ಸುದೀರ್ಘ ಸಭೆ ನಡೆಸಿದ ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ* *ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ* ಬೆಂಗಳೂರು: ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ …

Read More »