Breaking News
Home / ರಾಷ್ಟ್ರೀಯ (page 682)

ರಾಷ್ಟ್ರೀಯ

ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌: ವಿಟಿಯು ಸಿದ್ಧತೆ

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್‌ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್‌ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್‌ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …

Read More »

ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!

ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್‌ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್‌ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …

Read More »

ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ

ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್‌ 100ರ ಗಡಿ ದಾಟಿದೆ. …

Read More »

ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು

ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …

Read More »

ಧಾರವಾಡ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ

ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ. ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು. ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ …

Read More »

ದೇಶದಲ್ಲಿಂದು 45,892 ಜನರಿಗೆ ಕೊರೋನಾ. 817 ಜನ ಸಾವು!

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 45,892 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 817 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 07 ಲಕ್ಷದ 09 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,05,028 ಆಗಿದೆ. ಕಳೆದ 24 ಗಂಟೆಗಳಲ್ಲಿ 44,291 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 98 ಲಕ್ಷದ 43 ಸಾವಿರ ದಾಟಿದೆ. ದೇಶದಲ್ಲಿ …

Read More »

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧಿಸಿದ ಸಿಬಿಐ

ಧಾರವಾಡ, ಜು.08: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆಗೆ ಬರಲಿದೆ. ವಿಚಾರಣೆಗೂ ಮುನ್ನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಗದಗನಲ್ಲಿ ಬಂಧಿಸಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ …

Read More »

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಜಾಗೋ ಮೈಸೂರು ಅಧ್ಯಕ್ಷ. ಪತ್ರದಲ್ಲೇನಿದೆ?

ಮೈಸೂರು: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಜಾಗೋ ಮೈಸೂರು ಅಧ್ಯಕ್ಷ ಚೇತನ್ ಮಂಜುನಾಥ್‌ ಎಂಬವರು ಪತ್ರ ಬರೆದಿದ್ದು, ʻಟಿಎಂಸಿ ಕಾರ್ಯಕರ್ತರು, ಮೂಲಭೂತವಾದಿಗಳಿಂದ ಹಿಂಸೆಯಾಗುತ್ತಿದೆ. 30 ಬಿಜೆಪಿ ಕಾರ್ಯಕರ್ತರು, ಅಮಾಯಕ ಹಿಂದೂಗಳ ಹತ್ಯೆಯಾಗಿದೆ. 7 ಸಾವಿರ ಹಿಂದೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ ಸುಮಾರು 15,000 ಪ್ರಕರಣಗಳು ದಾಖಲಾಗಿವೆ. 1 ಲಕ್ಷಕ್ಕೂ ಹೆಚ್ಚು ಜನ ಜೀವಭಯದಿಂದ …

Read More »

ಯೋಗೇಶ್ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ಶಾಕ್!

ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿಯನ್ನು ಸಿಬಿಐ ಬಂಧಿಸಿದೆ.   ಸುಪ್ರೀಂಕೋರ್ಟ್ ನಲ್ಲಿ ಇಂದು ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದ್ದು, ಈ ಹೊತ್ತಲ್ಲೇ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ನೀಡಿದ್ದು, ಆಪ್ತ ಕಾರ್ಯದರ್ಶಿ ಸೋಮುನ್ನು ಸಿಬಿಐ ಬಂಧಿಸಿದೆ. ವಿನಯ್ ಕುಲಕರ್ಣಿ ಸಚಿವರಾಗಿದ್ದ …

Read More »

ಸ್ಟ್ಯಾನ್‌ ಸ್ವಾಮಿ ಸಾವು: ಲಾಕಪ್‌ಡೆತ್ ಪ್ರಕರಣ ದಾಖಲಿಸುವಂತೆ ಹೋರಾಟಗಾರರ ಆಗ್ರಹ

ಬೆಂಗಳೂರು: ‘ಫಾದರ್‌ ಸ್ಟ್ಯಾನ್‌ ಸ್ವಾಮಿ ಅವರ ಸಾವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮದನ್‌ ಬಿ. ಲೋಕೂರ್‌ ಅವರ ಅಭಿಪ್ರಾಯದಂತೆಯೇ ‘ಲಾಕಪ್ ಡೆತ್‌’ ಎಂದು ಪರಿಗಣಿಸಿ, ವಿಚಾರಣೆ ನಡೆಸಬೇಕು’ ಎಂದು ಕಡಿದಾಳು ಶಾಮಣ್ಣ, ದೇವನೂರ ಮಹಾದೇವ, ರಾಜೇಶ್ವರಿ ತೇಜಸ್ವಿ, ಸಾರಾ ಅಬೂಬಕ್ಕರ್‌, ವೈದೇಹಿ, ಡಿ.ಎಸ್‌. ನಾಗಭೂಷಣ ಸೇರಿದಂತೆ ಚಿಂತಕರು, ಬರಹಗಾರರು, ಹೋರಾಟಗಾರರು ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರ ಜಂಟಿ ಹೇಳಿಕೆ ನೀಡಿರುವ ಅವರು, ‘ಸ್ಟ್ಯಾನ್‌ ಸ್ವಾಮಿಯವರ ಸಾವಿನ ಪ್ರಕರಣ ಮಾನವೀತೆಯ …

Read More »