Breaking News

ರಾಷ್ಟ್ರೀಯ

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್‌ ಕತ್ತಿ ಬೆಂಬಲ

ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್‌ ಕತ್ತಿ ಬೆಂಬಲ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ …

Read More »

ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು

  ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ   ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …

Read More »

ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. …

Read More »

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.   ಮಠದ ಭಕ್ತರಾದ ಪಿಎಸ್ ಪ್ರಕಾಶ್ ಅಲಿಯಾಸ್ ಪಂಚಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸರು ಮುರುಘಾ …

Read More »

ಈ ಊರಿನ ಜನರೆಲ್ಲ ಯೂಟ್ಯೂಬರ್ಸ್​; ಎಲ್ರದ್ದೂ ಒಂದೊಂದು ಚಾನಲ್! ಸರ್ಕಾರಿ ಕೆಲಸವೂ ಬೇಡ್ವಂತೆ

ಯೂಟ್ಯೂಬ್ ಚಾನಲ್ ನಡೆಸ್ತಿರೋರನ್ನು ನೀವು ನೋಡಿರಬಹುದು. ನಿಮ್ಮದೂ ಒಂದು ಯೂಟ್ಯೂಬ್ ಚಾನಲ್ ಇರಬಹುದು! ಚೆನ್ನಾಗಿ ಸ್ಮಾರ್ಟ್ ಆಗಿ ಕೆಲಸ ಮಾಡಿ ನಿಮ್ಮ ಚಾನಲ್ ಸಹ ಕ್ಲಿಕ್ ಆದರೆ ಚೆನ್ನಾಗಿಯೇ ಹಣ ಬರುತ್ತೆ ನಿಜ. ಆದರೆ ಯೂಟ್ಯೂಬ್ ಚಾನಲ್​ಗೆಂದೇ ಸರ್ಕಾರಿ ಕೆಲಸವನ್ನೂ (Government Job) ಬಿಡೋರನ್ನು ನೋಡಿದ್ದೀರಾ? ಇಲ್ಲೊಂದು ಊರಿಗೆ ಊರೇ ಯೂಟ್ಯೂಬ್ ವಿಡಿಯೋಸ್ (YouTube Channel) ಮಾಡ್ತಾ ಅದ್ರಲ್ಲಿ ಬರೋ ಹಣದಿಂದಲೇ ಜೀವನ ಮಾಡ್ತಿದೆ! ಇದು ನಂಬಲಿಕ್ಕೆ ಅಸಾಧ್ಯ ಅನಿಸುವಂಥಾ …

Read More »

ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ

ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, …

Read More »

ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ …

Read More »

ಎಲ್​​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91 ರೂ. ಇಳಿಕೆ

ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್​​​ಪಿಜಿ ಗ್ಯಾಸ್​ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಇಂಧನ ಗ್ಯಾಸ್​ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ …

Read More »

ಈ ರಾಶಿಯವರ ಮೇಲೆ ಗಣಪತಿಯ ಆಶೀರ್ವಾದ ಸದಾ ಇರುತ್ತೆ

Ganesh Chaturthi 2022: ಹಿಂದೂ ಧರ್ಮದಲ್ಲಿ, ಗಣೇಶನನ್ನು ಮೊದಲ ಆರಾಧಕ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಪ್ರತಿ ಪೂಜೆ, ಆಚರಣೆ ಮತ್ತು ಮಂಗಳಕರ ಕೆಲಸಕ್ಕೂ ಮೊದಲು ಗಣೇಶನನ್ನು ಆವಾಹನೆ ಮಾಡಲಾಗುತ್ತದೆ. ಇದರಿಂದ ವಿಧ್ವಂಸಕ ಗಣೇಶನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಅಲ್ಲದೆ, ಆ ಕಾರ್ಯಗಳು ಶುಭ ಫಲಿತಾಂಶಗಳನ್ನು ನೀಡುತ್ತವೆ. ಅದೇ ಸಮಯದಲ್ಲಿ, ಕೆಲವು ಜನರು ಹುಟ್ಟಿನಿಂದಲೇ ಗಣೇಶನ ಆಶೀರ್ವಾದವನ್ನು ಪಡೆಯುವ ಅದೃಷ್ಟವನ್ನು ಹೊಂದಿರುತ್ತಾರೆ. ಈ ಜನರು ಯಾವುದೇ ಕೆಲಸ ಮಾಡಿದರೂ ಅವರಿಗೆ …

Read More »