ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್ಲೈನ್ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More »ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!
ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್ಘರ್ ತಿರಂಗ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲು ಮನವಿ ಮಾಡಲಾಗಿತ್ತು. ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್ಲೋಡ್ ಮಾಡಿದ್ದಾರೆ. …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ರ್ಯಾಲಿ.
ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್ಎಸ್ಎಫ್ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು …
Read More »ಹೂಡಿಕೆ ನೆಪದಲ್ಲಿ ಹೋಟೆಲ್ಗೆ ಕರೆಸಿಕೊಂಡು ಅತ್ಯಾಚಾರ,ಕೊಲೆ ಬೆದರಿಕೆ
ಬೆಂಗಳೂರು: ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಈ ಸಂಬಂಧ 32 ವರ್ಷದ ಸಂತ್ರಸ್ತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಮಿಳುನಾಡು ಮೂಲದ ರಮೇಶ್ (53) ತಲೆ ಮರೆಸಿಕೊಂಡಿದ್ದಾನೆ. ಬೆಂಗಳೂರು ಮೂಲದ ಸಂತ್ರಸ್ತೆ ಚಿಕ್ಕವಯಸ್ಸಿನಲ್ಲಿ ತಮಿಳುನಾಡಿನಲ್ಲಿ ಪೋಷಕರ ಜತೆ ವಾಸವಾಗಿದ್ದಾಗ ಆರೋಪಿ ರಮೇಶ್ ಪರಿಚಯವಾಗಿದ್ದ. ಮಹಿಳೆಗೆ ತಂದೆ ಸಮಾನನಾಗಿದ್ದ ಆರೋಪಿಯು ತಮಿಳುನಾಡಿನಲ್ಲಿ ನೆಲೆಸಿದ್ದ. ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ನೂತನವಾಗಿ ಓಟಿಟಿ …
Read More »ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ
ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿ ಕನ್ನಡಿಗರು ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. …
Read More »ವಿವಾದದ ಹೇಳಿಕೆಯೇ ʼಲಾಲ್ ಸಿಂಗ್ ಚಡ್ಡಾʼ ಕ್ಕೆ ಮುಳುವಾಯಿತೇ? : ಟ್ರೋಲ್ ಆದ್ರು ಬೇಬೋ
ಮುಂಬಯಿ: ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ನಟನೆಯ ಬಹು ನಿರೀಕ್ಷಿತ ʼಲಾಲ್ ಸಿಂಗ್ ಚಡ್ಡಾʼ ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದ ಸದ್ದು ಮಾಡುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಸಿನಿಮಾದ ಮೊದಲ ದಿನದ ಗಳಿಕೆಯಿಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿಲ್ಲ ಎನ್ನುವುದು ಸಾಬೀತಾಗಿದೆ. 1994 ರಲ್ಲಿ ಬಂದ ʼಫಾರೆಸ್ಟ್ ಗಂಪ್ʼ ರಿಮೇಕ್ ಚಿತ್ರವಾಗಿರುವ ʼಲಾಲ್ ಸಿಂಗ್ ಚಡ್ಡಾʼದಲ್ಲಿ ಬಹು ಸಮಯದ ಬಳಿಕ ಆಮಿರ್ ಖಾನ್ ಹಾಗೂ ಕರೀನಾ …
Read More »ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ
ನವದೆಹಲಿ; ಅತ್ಯುತ್ತಮ ತನಿಖೆ ನಡೆಸಿದ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಸೇರಿದಂತೆ ದೇಶದ 151 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ಲಭ್ಯವಾಗಿದೆ. ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ರಾಜ್ಯದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮಿ ಗಣೇಶ್ ಕೆ, ಡಿವೈಎಸ್ ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್, ಹೆಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ …
Read More »ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ
ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. ಭಕ್ತವತ್ಸಲ ಸಮಿತಿ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನ್ಯಾ. ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಾದಿ ಸುಗಮವಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು …
Read More »ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿದ
ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಕರಿಸಿದ್ದಪ್ಪ ಕಳಸದ ಮೃತ ದುರ್ದೈವಿ. ಸಿದ್ದನಗೌಡ ದೂಳಪ್ಪ ಹತ್ಯೆಗೈದ ಆರೋಪಿ. ಊಟದ ವಿಚಾರವಾಗಿ ಯೋಧ ಹಾಗೂ ಆತನ ಪತ್ನಿ ವಿದ್ಯಾ ನಡುವೆ ಗಲಾಟೆ ನಡೆದಿದೆ. ಇದರಿಂದ ಬೇಸರಗೊಂಡ ವಿದ್ಯಾ ತನ್ನ ಸಹೋದರ ಸಿದ್ದನಗೌಡನಿಗೆ ಕರೆ ಮಾಡಿ ಹೇಳಿದ್ದಾಳೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ-ಹೆಂಡತಿ …
Read More »ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡ ಅಮೆಜಾನ್ಗೆ 33 ಲಕ್ಷ ಡಾಲರ್ ದಂಡ
ಬಾರ್ಸಿಲೋನಾ (ಸ್ಪೇನ್): ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ಕಂಪನಿಯಾಗಿರುವ ಅಮೆಜಾನ್ ವಿರುದ್ಧ ಬಾರ್ಸಿಲೋನಾ ಸ್ಥಳೀಯ ಕಾರ್ಮಿಕ ಇಲಾಖೆ ತನಿಖೆ ಆರಂಭಿಸಿದೆ. ಅಮೆಜಾನ್ ಸ್ಪೇನ್ನ ಕ್ಯಾಟಲೋನಿಯಾದಲ್ಲಿ ಹಲವಾರು ವರ್ಷಗಳವರೆಗೆ ಉಪಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. 2020ರಲ್ಲಿಯೂ ಇದೇ ರೀತಿಯ ಕಾನೂನು ಬಾಹಿರ ಕೃತ್ಯಕ್ಕಾಗಿ ಕಂಪನಿಯು ಅಂದಾಜು 8 ಲಕ್ಷ 26 ಸಾವಿರ ಡಾಲರ್ಗೂ ಅಧಿಕ ದಂಡ ಪಾವತಿಸಿತ್ತು. ಈ ಬಾರಿ ಅಮೆಜಾನ್ಗೆ 33 ಲಕ್ಷ ಡಾಲರ್ ದಂಡ ವಿಧಿಸಲಾಗಿದೆ …
Read More »
Laxmi News 24×7