Breaking News

ರಾಷ್ಟ್ರೀಯ

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಮಹಿಳಾ ಚಾಲಕರ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಓ ದರ್ಶನ್ ಚಾಲನೆ

ಗ್ರಾಮೀಣ ಪ್ರದೇಶದ ಘನ ಮತ್ತು ದ್ರವ್ಯ ತ್ಯಾಜ್ಯ ಘಟಕದ ನಿರ್ವಹಣೆಯ ವಾಹನಗಳಿಗೆ ಮಹಿಳಾ ಚಾಲಕರಿಗೆ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ, ಸಂಜೀವಿನಿ ಡೇ-ಎನ್‍ಆರ್‍ಎಲ್‍ಎಂ, ಸ್ವಚ್ಛ ಭಾರತ ಮಿಶನ್ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿಗಳ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆಗಾಗಿ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ …

Read More »

ಬಸವಸಾಗರ ಡ್ಯಾಂನಿಂದ ಕೃಷ್ಣಾಗೆ ಭಾರೀ ಪ್ರಮಾಣದ ನೀರು, ನದಿ ತೀರದಲ್ಲಿ ಪ್ರವಾಹ ಭೀತಿ!

ಯಾದಗಿರಿ: ಮಹಾರಾಷ್ಟ್ರದಲ್ಲಿ (Maharashtra) ಭಾರಿ ಪ್ರಮಾಣದ ಮಳೆಯಾಗುತ್ತಿರುವ (Rain) ಪರಿಣಾಮ ಮಹಾರಾಷ್ಟ್ರದ ಮಹಾಮಳೆಗೆ ಯಾದಗಿರಿ (Yadagiri) ಜಿಲ್ಲೆಯ ಕೃಷ್ಣಾ (Krishna) ಹಾಗೂ ಭೀಮಾನದಿ (Bhima River) ತೀರದಲ್ಲಿ ಪ್ರವಾಹ (Flood) ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯ (Narayanapur Dam) ಈಗ ಭರ್ತಿಯಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 28.820 ಟಿಎಂಸಿ ನೀರು ಸಂಗ್ರಹವಾಗಿದೆ. ಕೃಷ್ಣಾ ನದಿಗೆ ಒಳಹರಿವು ಹೆಚ್ಚಾದ ಹಿನ್ನೆಲೆ …

Read More »

ಬಿಎಸ್‌ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ

ಬೆಂಗಳೂರು: 4 ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದವರು ಯಾರು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಶ್ನಿಸಿದ್ದಾರೆ. ಖರ್ಗೆ, ಪರಮೇಶ್ವರ್ ಮುಗಿಸಿರುವ ಸಿದ್ದು ಮುಂದಿನ ಗುರಿ ಡಿಕೆಶಿ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. #ಒಡೆದಮನೆಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವಸಿದ್ದರಾಮಯ್ಯ, ‘ಪಕ್ಷ ಅಧಿಕಾರದಲ್ಲಿದ್ದಾಗಲೇ ಬಿಎಸ್‍ವೈಯನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ …

Read More »

ಹೀಗಿರಬೇಕು ಮದುವೆ ಅಗ್ರಿಮೆಂಟ್‌! ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ!

ಮದುವೆಯಲ್ಲಿ ನವ ವಧು-ವರರು ಏಳೇಳು ಜನ್ಮಕ್ಕೂ ಜತೆಯಾಗಿರುವುದಾಗಿ ಪ್ರಮಾಣಿಸುವುದು ಸಾಮಾನ್ಯ. ಆದರೆ ಈ ಮದುವೆಯಲ್ಲಿ ನಡೆದ ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ. ‘ತಿಂಗಳಿಗೊಂದೇ ಪಿಜ್ಜಾ ತರಿಸಬೇಕು’, ’15 ದಿನಕ್ಕೊಮ್ಮೆ ಶಾಪಿಂಗ್‌ಗೆ ಕರೆದೊಯ್ಯಬೇಕು’, ‘ಮನೆ ಊಟಕ್ಕೆ ಯಾವಾಗಲೂ ಬೇಡ ಎನ್ನಕೂಡದು’, ‘ಪ್ರತಿದಿನ ಜಿಮ್‌ಗೆ ಹೋಗಬೇಕು’, ‘ಪ್ರತಿ ಪಾರ್ಟಿಯಲ್ಲಿ ಒಳ್ಳೊಳ್ಳೆ ಫೋಟೋ ತೆಗೆದುಕೊಡಬೇಕು’, ‘ಪ್ರತಿ ಭಾನುವಾರ ಗಂಡನೇ ತಿಂಡಿ ರೆಡಿ ಮಾಡಬೇಕು’.   ಇದು ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ವರ-ವಧು …

Read More »

ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ಘೋಷಣೆ..?!

ಬೆಂಗಳೂರು,ಜು.11- ಕರ್ನಾಟಕದಲ್ಲಿ ಅವಧಿಗೂ ಮುನ್ನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಬರಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. 2023ರ ಮೇ ತಿಂಗಳಲ್ಲಿ ನಡೆಯಬೇಕಿರುವ ರಾಜ್ಯ ವಿಧಾನಸಭೆ ಚುನಾವಣೆಯೂ ಈ ವರ್ಷದ ಡಿಸೆಂಬರ್‍ನಲ್ಲಿಯೇ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   ಗುಜರಾತ್ ಚುನಾವಣೆಯೂ ಡಿಸೆಂಬರ್‍ಲ್ಲೇ ನಡೆಯಲಿದ್ದು, ಅದರ ಜೊತೆಯಲ್ಲೇ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಗಿಸುವ ತವಕದಲ್ಲಿ ಬಿಜೆಪಿ ಇದ್ದು, ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಬಿಜೆಪಿ ಇಡುತ್ತಿರುವ ಹೆಜ್ಜೆಗಳನ್ನು …

Read More »

ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.

ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಇಡೀ ವಿಶ್ವದಾಧ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಬಿಮ್ಸ ಉಪನ್ಯಾಸ ಕೊಠಡಿಯಲ್ಲಿ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ …

Read More »

ಮಹಿಳಾಮಣಿಗಳೇ, ಮೋದಿ ಸರ್ಕಾರ ಉಚಿತವಾಗಿ ‘ಹೊಲಿಗೆ ಯಂತ್ರ’ ವಿತರಿಸ್ತಿದೆ ; ಅರ್ಜಿ ಪ್ರಕ್ರಿಯೆ ಆರಂಭ, ಇಂದೇ ಅಪ್ಲೈ ಮಾಡಿ

ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ (Free Silai Machine Scheme). ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನ ಉಚಿತವಾಗಿ ನೀಡುತ್ತದೆ. ಈ ಯೋಜನೆಯ ಸಹಾಯದಿಂದ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳನ್ನ ಪೂರೈಸಿಕೊಳ್ಳಲು ಬೇರೆಯವರ ಮೇಲೆ ಅವಲಂಬಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಅವ್ರು ತಮ್ಮ ಪ್ರತಿಯೊಂದು ಅಗತ್ಯವನ್ನ ತಾವಾಗಿಯೇ ಪೂರೈಸಿಕೊಳ್ಳಲು ಸಮರ್ಥರಾಗಿರಬೇಕು ಮತ್ತು ಅಧಿಕಾರ ಹೊಂದಿರಬೇಕು. …

Read More »

Bakrid 2022: ‘ಬಕ್ರೀದ್‌’ನ ಸಂದೇಶ

ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್‌ ಅದ್‌ಹಾ’. ಭಾರತದಲ್ಲಿ ಈ ಹಬ್ಬ ‘ಬಕ್ರೀದ್‌’ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ದೇಶದಾದ್ಯಂತ ಮುಸ್ಲಿಮರು ಇಂದು (ಜುಲೈ 10) ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.   ‘ರಂಜಾನ್’ ತಿಂಗಳ ಉಪವಾಸದ ಬಳಿಕ ‘ಈದುಲ್‌ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್‌ ಕ್ಯಾಲೆಂಡರಿನ ‘ದುಲ್‌ ಹಜ್ಜ್‌’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ …

Read More »

ಶ್ರೀಲಂಕಾ ಅಧ್ಯಕ್ಷರ ಬಂಗಲೆಗೆ ಮುತ್ತಿಗೆ ಹಿಂಸಾಚಾರಕ್ಕೆ ತಿರುಗಿದ ರಾವಣ ರಾಷ್ಟ್ರ

ಶ್ರೀಲಂಕಾ ಕಳೆದ 4 ತಿಂಗಳುಗಳಿಂದ ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ, ಆಹಾರಕ್ಕಾಗಿ ಜನ ತತ್ತರಗೊಂಡಿದ್ದಾರೆ. ಜನ ಸಾಮಾನ್ಯ ವಸತಿಗಾಗಿ ಸಾವಿರಾರು ರೂಗಳನ್ನ ತೆತ್ತಲು ಅವರ ಬಳಿ ಹಣ ಇಲ್ಲದೆ ನೆರೆ ದೇಶಗಳಿಗೆ ನಡೆದು ಆ ದೇಶಗಳ ಪೋಲಿಸರ ಅತಿಥಿಗಳಾಗಿದ್ದಾರೆ , ನೆರೆ ದೇಶಗಳು ಸಾವಿರಾರು ಕೋಟಿ ಹಣ ಸಹಾಯ ಮಾಡಿದರು ಶ್ರೀಲಂಕಾ ಇನ್ನೂ ಸರಿದಾರಿ ತರುವಲ್ಲಿ ಏಡವಿದ್ದಾರು ಎಲ್ಲಿ ಎಂದು ಈಗ ಜನ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ , ಮುಖ್ಯವಾಗಿ ರಾಜಕಾರಣಿಗಳ ಏಡಬಿಡಂಗಿತನ …

Read More »