Breaking News
Home / ರಾಷ್ಟ್ರೀಯ (page 706)

ರಾಷ್ಟ್ರೀಯ

ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ

  ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …

Read More »

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಮುಂಬೈ ಮಳೆಗೆ ಕಟ್ಟಡ: ಕುಸಿತ ಹನ್ನೊಂದು ಸಾವು

ಮುಂಬೈ : ಮುಂಬೈನಲ್ಲಿ ಸುರಿಯುತ್ತಿರುವ ಸತತ ಮಾನ್ಸೂನ್ ಮಳೆಯಿಂದ ಮುಂಬೈ ನಗರದ ಕಟ್ಟಡವೊಂದು ಕುಸಿದು ಬಿದ್ದಿದೆ. ಮಲಾಡ್ West ನ ಈ ಕಟ್ಟಡ ಕುಸಿತಕ್ಕೆ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 15 ಹೆಚ್ಚು ಜನರನ್ನು ಇದುವರೆಗೆ ರಕ್ಷಿಸಲಾಗಿದೆ. ಕಟ್ಟಡ ಕುಸಿಯುತ್ತಿದ್ದಂತೆ ಬದಿಗೆ ಇರುವ 3 ಕಟ್ಟಡಗಳಲ್ಲಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕ್ಷಿಪ್ರಗತಿಯಲ್ಲಿ ಸಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮುಂಬೈ, ಥಾಣೆ, ಪಾಲ್ಘರ್ …

Read More »

ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಗೋಕಾಕ: ಹಿಂದುಳಿದ ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಯೆ ಭಾರತಿ ಶಿವಾನಂದ ಹತ್ತಿ ಅವರು ಆಸರೆಯಾಗಿದ್ದಾರೆ. ನಗರದ ಹೊರವಲಯದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ದಿನಸಿ ಕಿಟ್ ವಿತರಿಸಿ ಮಾನವಿಯತೆ ಮೆರದಿದ್ದಾರೆ. ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‌ಸಿ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಕುಟುಂಬದವರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ …

Read More »

COVID ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಜೂನ್ 7 ರ ವರೆಗೆ ಇದ್ದ ಲಾಕ್​ಡೌನ್​ನನ್ನು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇನ್ನು ಒಂದು ವಾರ ವಿಸ್ತರಿಸಿದೆ. ಜೊತೆಗೆ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5 ಕ್ಕೆ ಬರುತ್ತದೋ ಆ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ …

Read More »

ಬರೀ 25 ಸಾವಿರ ರೂಪಾಯಿಗೆ ಹೊಂಡಾ ಆಯಕ್ಟೀವಾ ಖರೀದಿಸಿ; ಬಂಪರ್​ ಆಫರ್ ಪಡೆಯಲು ಹೀಗೆ ಮಾಡಿ

ಕೊರೊನಾ ಸಂದರ್ಭದಲ್ಲಿ ಸ್ವಂತ ವಾಹನ ಅತ್ಯವಶ್ಯಕ ಎನ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್ಥಿಕ ಚಟುವಟಿಕೆಗಳೆಲ್ಲಾ ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಒಮ್ಮೆಲೆಗೆ ದೊಡ್ಡ ಮೊತ್ತದ ಹಣ ನೀಡಿ ವಾಹನ ಖರೀದಿಗೆ ಕೈ ಹಾಕುವುದೆಂದರೆ ಸಾಮಾನ್ಯ ಜನರ ಜೇಬಿಗೆ ಬಲುಭಾರವಾಗುತ್ತದೆ. ಇಂತಹ ಹೊತ್ತಿನಲ್ಲಿ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವ ಹೋಂಡಾ ಕಂಪೆನಿಯ ವಾಹನವೊಂದರ ಮೇಲೆ ಭಾರೀ ಆಫರ್​ ನೀಡಲಾಗಿದೆ. ಈ ಆಫರ್​ ಅಡಿಯಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಯಕ್ಟೀವಾವನ್ನು ಕೇವಲ …

Read More »

ಗುರುವಾರ ಸಂಭವಿಸಲಿದೆ ಖಗ್ರಾಸ ಸೂರ್ಯಗ್ರಹಣ; ಭಾರತದಲ್ಲಿ ಎಲ್ಲೆಲ್ಲಿ ಗೋಚರ?

ಕೋಲ್ಕತ: ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ. ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ …

Read More »

ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.    

Read More »

ಪೆಟ್ರೋಲ್, ಡೀಸೆಲ್ ಖರೀದಿಗೆ ಸಾಲ ನೀಡಿ: ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ

ದಾವಣಗೆರೆ: ಪೆಟ್ರೋಲ್, ಡೀಸೆಲ್ ಖರೀದಿಸಲು ಬ್ಯಾಂಕ್‌ಗಳು ಸಾಲ ನೀಡಬೇಕು ಎಂದು ಭಾರತೀಯ ಯುವ ಕಾಂಗ್ರೆಸ್ ಇಲ್ಲಿನ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂದೆ ಆಗ್ರಹಿಸಿತು. ಯುವ ಕಾಂಗ್ರೆಸ್ ವಕ್ತಾರ ಎಚ್.ಜೆ. ಮೈನುದ್ದೀನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಪ್ರದರ್ಶಿಸಿ ಸಾಲ ನೀಡುವಂತೆ ಒತ್ತಾಯಿಸಿದರು. ‘ಲಾಕ್‌ಡೌನ್‌ನಿಂದಾಗಿ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ.ಪೆಟ್ರೋಲ್ ದರ ಒಂದು ಲೀಟರ್‌ಗೆ ₹ 100, ಡೀಸೆಲ್ ದರ ಒಂದು ಲೀಟರ್‌ಗೆ ₹ 90ರ ಗಡಿ ದಾಟಿದೆ. ₹ …

Read More »