Home / ರಾಷ್ಟ್ರೀಯ (page 708)

ರಾಷ್ಟ್ರೀಯ

ಬೆಳಗಾವಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆ ನಡೆಸುವ ಎಚ್ಚರಿಕೆ: ಅಭಯ ಪಾಟೀಲ

ಬೆಳಗಾವಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆ ನಡೆಸುವ ಎಚ್ಚರಿಕೆಯನ್ನು ಶಾಸಕ ಅಭಯ ಪಾಟೀಲ ನೀಡಿದ್ದಾರೆ. ಕೋವಿಡ್ ಚಿಕಿತ್ಸೆಯಲ್ಲಿ ಮನಬಂದಂತೆ ಸೋಂಕಿತರಿಂದ ಹಣವಸೂಲಿ ಮಾಡಲಾಗಿದೆ ಎಂದು ಆರೋಪಿಸಿರುವ ಅವರು ತಕ್ಷಣ ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ವಾಪಸ್ ನೀಡಿ. ಇಲ್ಲವಾದಲ್ಲಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 28 ಆಸ್ಪತ್ರೆಗಳ ಪೈಕಿ 23ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ ಪಡೆಯಲಾಗಿದೆ. ಹೆಚ್ಚುವರಿ ಹಣವನ್ನು ನಗದು ರೂಪದಲ್ಲಿ …

Read More »

ಪಡಿತರ ಚೀಟಿ ಹೊಂದಿಲ್ಲದವರಿಗೆ ಗುಡ್‌ ನ್ಯೂಸ್: ಉಚಿತ ರೇಷನ್ ಗಾಗಿ ಆನ್‌ ಲೈನ್ ಮೂಲಕವೂ ಕಾರ್ಡ್ ನೋಂದಣಿಗೆ ಅವಕಾಶ

ಪಡಿತರ ಚೀಟಿ ಇದ್ದವರಿಗೆ ಸರ್ಕಾರದ ವಿಶೇಷ ಯೋಜನೆ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆಯಡಿ ಪಡಿತರ ಸಿಗಲಿದೆ. ಕೊರೊನಾ ಕಾರಣದಿಂದಾಗಿ ಬಡವರಿಗೆ ಉಚಿತ ಪಡಿತರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಅನೇಕ ರಾಜ್ಯಗಳು ತಮ್ಮ ನಾಗರಿಕರಿಗೆ ಉಚಿತ ಪಡಿತರವನ್ನು ನೀಡುತ್ತಿವೆ. ಈಗ್ಲೂ ನಿಮ್ಮ ಬಳಿ ಪಡಿತರ ಚೀಟಿ ಇಲ್ಲವೆಂದ್ರೆ ಚಿಂತಿಸುವ ಅಗತ್ಯವಿಲ್ಲ. ಸ್ಮಾರ್ಟ್‌ಫೋನ್‌ನಿಂದ ಪಡಿತರ ಚೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ನೀವು ಮೊದಲು ರಾಜ್ಯದ …

Read More »

ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ರೋಗಿಗಳಿಗೆ ಉತ್ತೇಜನ ನೀಡಲು ಮುಂದಾದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕೊರೋನಾ ಸೋಂಕಿನ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕೊರೋನಾ ಸೋಂಕಿತರು ಉಳಿದುಕೊಂಡಿರುವ ದಾವಣಗೆರೆಯ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಲು, ಅವರಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ …

Read More »

ಯುವಕನನ್ನು ಕಾಲಿನಿಂದ ಒದ್ದು, ಅವಾಚ್ಯ ಪದಗಳಿಂದ ನಿಂದಿಸಿದ ಎಎಸ್‍ಐ ಸಸ್ಪೆಂಡ್

ಚಾಮರಾಜನಗರ: ಲಾಕ್‍ಡೌನ್ ವೇಳೆ ಮಾತ್ರೆ ಖರೀದಿಸಲು ಬಂದಿದ್ದ ಯುವಕನಿಗೆ ದರ್ಪ ತೋರಿ ಕಾಲಿನಿಂದ ಒದ್ದು ನಿಂದಿಸಿದ್ದ ಎಎಸ್‍ಐ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೇ 23 ರಂದು ಯುವಕನೋರ್ವ ಮಾತ್ರೆ ಖರೀದಿಸಲು ಬೈಕ್‍ನಲ್ಲಿ ನಗರಕ್ಕೆ ಬಂದಿದ್ದ. ಈ ವೇಳೆ ಕೊಳ್ಳೇಗಾಲ ಪಟ್ಟಣ ಠಾಣೆಯ ಎಎಸ್‍ಐ ರಾಮಸ್ವಾಮಿ, ಯುವಕನಿಗೆ ದರ್ಪ ತೋರಿ ಕಾಲಿಂದ ಒದ್ದು ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದರು. ಯುವಕನಿಗೆ ನಿಂದಿಸಿ, ಒದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಸೆಲೆಬ್ರಿಟಿಗಳು ಮಾತ್ರವಲ್ಲ ಅವರ ಕುಟುಂಬದವರ ಮೇಲೂ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ತಮ್ಮಿಷ್ಟದ ನಟ/ನಟಿಯ ಕುಟುಂಬದವರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಈಗ ನಟಿ ಅನುಷ್ಕಾ ಶರ್ಮಾ ಅವರ ಸಹೋದರ ಕರ್ಣೇಶ್​ ಶರ್ಮಾ ಮೇಲೆ ಅಭಿಮಾನಿಗಳ ಕಣ್ಣುಬಿದ್ದಿದೆ. ಅಷ್ಟೇ ಅಲ್ಲ ಅವರ ಡೇಟಿಂಗ್​ ವಿಚಾರವನ್ನು ಅಭಿಮಾನಿಗಳು ಬಯಲಿಗೆಳೆದಿದ್ದಾರೆ. ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ಬುಲ್​ಬುಲ್​ ಸಿನಿಮಾ ನಟಿ ತೃಪ್ತಿ ದಿಮ್ರಿ ನಟಿಸಿದ್ದರು. ಈಗ ಅವರ …

Read More »

ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ

ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ …

Read More »

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್

ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ. 25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ …

Read More »