Breaking News

ರಾಷ್ಟ್ರೀಯ

ಇಂದು ದೇವೇಂದ್ರ ಫಡ್ನವೀಸ್​ ನೇತೃತ್ವದಲ್ಲಿ ರಾಜ್ಯಪಾಲರ ಬಳಿಗೆ ತೆರಳಿ ಸರ್ಕಾರ ರಚನೆ ?

ಮುಂಬೈ: ಕಳೆದೊಂದು ವಾರದಿಂದ ಭರ್ಜರಿ ಪ್ರರ್ದಶನ ಕಾಣುತ್ತಿದ್ದ ಮಹಾ ರಾಜಕೀಯ ನಾಟಕ ಕೊನೆಗೂ ಅಂತ್ಯವಾಗಿದೆ. ಉದ್ಧವ್​ ಠಾಕ್ರೆ, ಏಕನಾಥ್​ ಶಿಂಧೆ ಬಣದ ಬಂಡಾಯದ ಸಮರದಲ್ಲಿ ಮಹಾ ವಿಕಾಸ್​ ಅಘಾಡಿ ಸರ್ಕಾರ ಪತನವಾಗಿದೆ.. ಹೀಗಾಗಿ ಮುಂದೆ ಮಹಾ ಸಿಂಹಾಸನದಲ್ಲಿ ಕುಳಿತು ಅಧಿಕಾರ ನಡೆಸೋರು ಯಾರು ಅನ್ನೋ ಲೆಕ್ಕಾಚಾರ ಶುರುವಾಗಿದೆ. ವಿಶ್ವಾಸ ಯುದ್ಧಕ್ಕೂ ಮುನ್ನವೇ ಸಿಎಂ ಉದ್ಧವ್​ ಠಾಕ್ರೆ ಶಸ್ತ್ರತ್ಯಾಗ ಮಾಡಿ, ಮಹಾ ಸಿಂಹಾಸನದಿಂದ ಕೆಳಗಿಳಿದಿದ್ದಾರೆ. ಠಾಕ್ರೆ ರಾಜೀನಾಮೆ ಘೋಷಿಸುತ್ತಿದ್ದಂತೆ, ಮಾಜಿ ಸಿಎಂ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ

  ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.   ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …

Read More »

T.C.ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ

ಅಕ್ರಮ ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಬಂಧಿತ ಆರೋಪಿ. ರೈತನಿಗೆ ಟಿಸಿ ಕೊಡಲು ಬರೋಬ್ಬರಿ 25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ಮರಗೂರ ಕ್ರಾಸ್ ಬಳಿಯ ಬಸ್ ‌ನಿಲ್ದಾಣದಲ್ಲಿ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ …

Read More »

ರಾಜವಂಶಸ್ಥ ಯದುವೀರ ಒಡೆಯರ್ ಕುಟುಂಬ ಅಂಜನಾದ್ರಿಗೆ ಭೇಟಿ

ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿದರು. ಅಂಜನಾದ್ರಿ ಬೆಟ್ಟದ‌ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು. ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.

Read More »

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.   ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ …

Read More »

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ C.M. ಬೊಮ್ಮಾಯಿ

ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.   ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ …

Read More »

ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್‌ಜಿವಿ ವಿರುದ್ಧ ಬಿಜೆಪಿ ದೂರು

ಹೈದರಾಬಾದ್: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು’ ಎಂದು ಪ್ರಶ್ನಿಸಿ ಶುಕ್ರವಾರ ವರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಮ್ ಗೋಪಾಲ್ ವರ್ಮಾ ವಿರುದ್ಧ ಎಸ್‌ಸಿ -ಎಸ್‌ಟಿ ಕಾನೂನಿನ ಅಡಿಯಲ್ಲಿ …

Read More »

ಅಪ್​ಡೇಟ್​ ಆದ ಮತದಾರರ ಪಟ್ಟಿಯ ಹೆಸರು ಆನ್​ಲೈನ್​ನಲ್ಲಿ ಹುಡುಕುವುದು ಹೇಗೆ?

ಮತದಾರರ ಪಟ್ಟಿ ಅಪ್​ಡೇಟ್​ ಆದ ನಂತರ ಆನ್​ಲೈನ್​ ಮೂಲಕ ಹೆಸರು ಕಂಡುಹಿಡಿಯುವುದು ಹೇಗೆ ಎಂಬುದನ್ನು ಈ ಲೇಖನದಲ್ಲಿ ಹಂತಹಂತವಾಗಿ ವಿವರಿಸಲಾಗಿದೆ.ಭಾರತ ಚುನಾವಣಾ ಆಯೋಗವು (Election Commission Of India) ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮತದಾರರಿಗೆ ಆನ್‌ಲೈನ್ ಮತ್ತು ತಡೆರಹಿತ ಸೌಲಭ್ಯವನ್ನು ಒದಗಿಸುತ್ತದೆ. ಹುಡುಕಾಟ ನಡೆಸಲು ಮೊದಲ ಹೆಸರು, ಕೊನೆಯ ಹೆಸರು, ವಿಧಾನಸಭಾ ಕ್ಷೇತ್ರ, ಲಿಂಗ ಇತ್ಯಾದಿ ವಿವರಗಳು ಅಗತ್ಯವಿದೆ. ಅದಕ್ಕೆ ಬದಲಾಗಿ, ಈ ಹುಡುಕಾಟವನ್ನು ನಡೆಸಲು EPIC …

Read More »

ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ ಸಾಧ್ಯತೆ; ‘ಮಹಾ’ ಪೊಲೀಸರಿಂದ ಮುನ್ನೆಚ್ಚರಿಕೆ

ಮುಂಬೈ: ಶಿವಸೇನಾ ಶಾಸಕ ಏಕನಾಥ ಶಿಂಧೆ ಹಾಗೂ ಅವರ ಬೆಂಬಲಿಗರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ. ಇದರಿಂದ ಆಕ್ರೋಶಗೊಂಡಿರುವ ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಶಿಂಧೆ ಬೆಂಬಲಿಗರ ಫ್ಲೆಕ್ಸ್‌ ಬೋರ್ಡ್‌ಗಳ ಮೇಲೆ ಸೇನಾ ಕಾರ್ಯಕರ್ತರು ದಾಳಿ ನಡೆಸಿರುವ ಹಲವು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಎಲ್ಲ ಜಿಲ್ಲೆಗಳ ಉನ್ನತಾಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು …

Read More »

ಸಿದ್ಧೇಶ್ವರ ಸ್ವಾಮಿಗಳ ಬಗ್ಗೆ ಕೆಲವು ಸಂಗತಿಗಳು.: -ಎಸ್.ಎಮ್.ಜಾಮದಾರ

ಸಿದ್ಧೇಶ್ವರ ಸ್ವಾಮಿಗಳ ಬಗ್ಗೆ ಕೆಲವು ಸಂಗತಿಗಳು. -ಎಸ್.ಎಮ್.ಜಾಮದಾರ ಸಿದ್ಧೇಶ್ವರ ಸ್ವಾಮಿಗಳನ್ನು ನಾನು ಪ್ರಥಮ ಸಲ ನೋಡಿದ್ದು1999ರ ಸುಮಾರಿಗೆ. ಅದು ಬೀಳಗಿಯ ಬಾಪೂಜಿ ಆಬ೯ನ ಬ್ಯಾಂಕಿನ ಉದ್ಘಾಟನೆಯ ಸಂದರ್ಭದಲ್ಲಿ. ನಾನು ಅವಸರದಲ್ಲಿ ಉದ್ಘಾಟನಾ ಭಾಷಣ ಮುಗಿಸಿ ಹೊರಟುಹೋಗಿದ್ದರಿಂದ ಅವರ ಪರಿಚಯ ನನಗೆ ಆಗಲಿಲ್ಲ. ಬಿಳಿಯ ಖಾದಿ ಷಟ೯ ಹಾಗೂ ಲುಂಗಿಯಲ್ಲಿ ಕಾಣುವ ಸಣಕಲು ದೇಹದ, ಸಾದಗಪ್ಪು ವಣ೯ದ, ಸಾಧಾರಣ ಎತ್ತರದ, ಕೋಲು ಮುಖ, ಕುರುಚಲ ಗಡ್ಡ ಹಾಗೂ ತಲೆಕೂದಲಿನ ಅವರದು ದೈಹಿಕವಾಗಿ …

Read More »