Breaking News

ರಾಷ್ಟ್ರೀಯ

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

Read More »

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.

Read More »

777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಸ್ವಭಾವತಃ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು. ತಮ್ಮ ಪ್ರೀತಿಯ ನಾಯಿ ತೀರಿಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ …

Read More »

ಲಾಡ್ಜ್ ನ‌ಲ್ಲಿ ಕತ್ತು ಹಿಸುಕಿ ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ

ಬೆಂಗಳೂರು: ಪ್ರೇಯಸಿಯನ್ನು ಪ್ರಿಯಕರನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಡಿಶಾ ಮೂಲದ ದೀಪ ಪದಮ್‌(32) ಕೊಲೆ ಯಾದ ಮಹಿಳೆ. ಕೃತ್ಯ ಎಸಗಿದ ಆರೋಪಿ ಅನ್ಮಲ್‌ ರತನ್‌ ಕಂದರ್‌ಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.   ಆರೋಪಿ ಅನ್ಮಲ್‌ ರತನ್‌ ಕಂದರ್‌ ಕೆಲ ವರ್ಷಗಳ ಹಿಂದೆ ದೀಪಾಲಿ ಎಂಬಾಕೆಯನ್ನು ಒಡಿಶಾದಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಆರೋಪಿ ಬಾಟಾ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ದಂಪತಿ ಬೆಂಗಳೂರಿನ …

Read More »

ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವ ಮೈಕ್ರೋಸಾಫ್ಟ್‌

ಸಾಫ್ಟ್‌ವೇರ್‌ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿಯು ತನ್ನ ಪ್ರಸಿದ್ಧ ವೆಬ್‌ ಬ್ರೌಸರ್‌ ಇಂಟರ್ನೆಟ್ ಎಕ್ಸ್‌ಪ್ಲೋರರ್ (IE) ಗೆ ನಿವೃತ್ತಿ ಘೋಷಿಸಿದೆ. ಈ ಹಿಂದೆ ಕಳೆದ ವರ್ಷವೇ ಈ ಕುರಿತು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವುದಾಗಿ ಹೇಳಿದೆ. ಇದರ ಬದಲಾಗಿ ಕ್ರೋಮಿಯಂ-ಆಧಾರಿತ ಎಡ್ಜ್ ಅನ್ನು ವಿಂಡೋಸ್ ಪಿಸಿಗಳಿಗೆ ಪ್ರಾಥಮಿಕ ಬ್ರೌಸರ್‌ ಆಗಿ ಮಾರ್ಪಡಿಸಲಾಗುತ್ತದೆ. ಪ್ರಸ್ತುತ ಜನರೇಷನ್ನಿನ ವಿಂಡೋಸ್‌ ಎಡ್ಜ್‌ ಬ್ರೌಸರ್‌ “ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ಗಿಂತ ವೇಗವಾದ, …

Read More »

ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, …

Read More »

ಹಣದ ಆಮಿಷ ಒಡ್ಡಿದ ಪ್ರಕಾಶ ಹುಕ್ಕೇರಿ ವಜಾ ಮಾಡಿ: ಶಾಸಕ ಅಭಯ ಪಾಟೀಲ ಆಗ್ರಹ

ಬೆಳಗಾವಿ: ‘ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರು ತಮ್ಮ ಹಿಂಬಾಲಕರ ಮೂಲಕ ಮತದಾರರಿಗೆ ಹಣ ಹಂಚಿದ್ದಾರೆ. ಅವರ ಮೇಲೆ ಕ್ರಮ ವಹಿಸಬೇಕು, ಪ್ರಸಕ್ತ ಚುನಾವಣೆಯಿಂದ ಅವರನ್ನು ವಜಾ ಮಾಡಬೇಕು’ ಎಂದು ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ.   ‘ಭಾನುವಾರ ವಿಜಯಪುರ ನಗರದಲ್ಲಿ ಸುಮಾರು ₹ 17.40 ಲಕ್ಷ ಹಣದ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಅಭ್ಯರ್ಥಿಯ ಕರಪತ್ರಗಳು ಸಿಕ್ಕಿವೆ. ಬೆಳಗಾವಿಯ ಗ್ರಾಮೀಣ ಪ್ರದೇಶದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ …

Read More »

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.: ಶ್ರೀಮಂತ ಪಾಟೀಲ್

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಎಷ್ಟು ಹಣ ಹಂಚಿಕೆ ವಿಜಯ್ ಮಾತ್ರ ನಮ್ಮದು ಎಂದು ಕಾಗವಾಡ ಮತ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಏನ್ ವಾಹಿನಿಗೆ ಹೇಳಿದರು. ಸೋಮವಾರದಂದು ಕಾಗವಾಡದ ಸರಕಾರಿ ಕನ್ನಡ ಶಾಲೆಯಲ್ಲಿ ಮತದಾನ ಕೇಂದ್ರ ದಲ್ಲಿ ಮತ ಚಲಾಯಿಸಿದ ಬಳಿಕ ಇನ್ ವಾಹಿನಿಯೊಂದಿಗೆ ಮಾತನಾಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಇವರ ನೇತೃತ್ವದಲ್ಲಿ ಮತ್ತು …

Read More »

ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ

ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಚಿಕ್ಕೋಡಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಕಛೇರಿ ಬೋರ್ಡ್‍ಗೆ ಬಟ್ಟೆ ಕಟ್ಟಿ ಬೋರ್ಡ್ ಮುಚ್ಚಿ ಪಾರ್ಟಿ ಆಯೋಜನೆ ಮಾಡಲಾಗಿದೆ. ನೂರಾರು ಶಿಕ್ಷಕರನ್ನ ಕಛೇರಿಗೆ ಕರೆಸಿ ಪ್ರಕಾಶ ಹುಕ್ಕೇರಿ ಎಣ್ಣೆ ಪಾರ್ಟಿ ಕೊಡುವ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ.   ತಾಲೂಕಾಡಳಿತ …

Read More »

ಪ್ರವಾದಿ ಕುರಿತ ಹೇಳಿಕೆ ವಿರುದ್ಧ ಪ್ರತಿಭಟನೆ: ಯೋಗಿ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ

ಲಕ್ನೋ, ಜೂನ್ 11: ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳ ಹಿಂಸಾಚಾರದ ನಂತರ, ಉತ್ತರ ಪ್ರದೇಶದ ಸಹರಾನ್‌ಪುರದ ಪೊಲೀಸರು ಭಾರಿ ಬಂದೋಬಸ್ತ್‌ನೊಂದಿಗೆ ಬುಲ್ಡೋಜರ್ ಕಾರ್ಯಾಚರಣೆ ಆರಂಭಿಸಿದ್ದಾರೆ. ಭಾರಿ ಪೊಲೀಸ್ ಉಪಸ್ಥಿತಿಯಲ್ಲಿ ಮುನ್ಸಿಪಲ್ ತಂಡಗಳೊಂದಿಗೆ ಬುಲ್ಡೋಜರ್‌ಗಳಿಂದ ಎರಡು ಮನೆಗಳನ್ನು ಧ್ವಂಸಗೊಳಿಸಿದ ವಿಡಿಯೊಗಳನ್ನು ಪೊಲೀಸರು ಹಂಚಿಕೊಂಡಿದ್ದಾರೆ. ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. ಪೊಲೀಸರು ಹಂಚಿಕೊಂಡ ದೃಶ್ಯಗಳಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ …

Read More »