Breaking News

ರಾಷ್ಟ್ರೀಯ

ʻ’ಈ ತಲೆಗಳ ಕಡಿದರೆ 20 ಲಕ್ಷ ರೂ.. ಖಾತೆಗೆ ಜಮಾʼ: ಮುತಾಲಿಕ್​, ಯಶ್​ಪಾಲ್​ ಪ್ರತಿಕ್ರಿಯೆ ಹೀಗಿದೆ.

ಕಾರ್ಕಳ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಲೆ ಕಡಿದರೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಪತ್ರ ಹರಿದಾಡುತ್ತಿದೆ. ಮಾರಿಗುಡಿ ಪೇಜಿನಲ್ಲಿ ಈ ರೀತಿಯಾಗಿ ಬಹಿರಂಗ ಬೆದರಿಕೆ ಹಾಕಲಾಗಿದೆ.   ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ …

Read More »

ಗೋಕಾಕ ನ ಹಿರಿಯ ತಜ್ಞ ವಾದ್ಯರಾದ ಡಾಕ್ಟರ ಮಹೇಶ್ ಕೊಣಿ ಇವಾಗ ಬೆಳಗಾವಿ D.H.O. ಶಶಿಕಾಂತ ಮುನ್ಯಾಳವರ್ಗಾವಣೆ

ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ. ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.

Read More »

ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ

ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ ನಡೆಯಿತು. ಬುಧವಾರ ಸಂಜೆ ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಸಭಾಸದಸ್ಯರಾದ ರಾಮ್ ಆಪ್ಟೆ, ರಾಜಾಭಾವು ಪಾಟೀಲ, ದಿನೇಶ್ ಓವುಳಕರ, ಸುಜಾತಾ ಸೌನೀಕ್, ಶಿವಾಜೀರಾವ್ ಜಾಧವ, ಸಂತೋಷ ಕಾಕಡೆ ಇನ್ನುಳಿದವರು ಉಪಸ್ಥಿತರಿದ್ಧರು. ಇಂದಿನ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜುಲೈ ೯ ರಂದು ಮುಂದಿನ …

Read More »

SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!

ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ   ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …

Read More »

ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ

ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …

Read More »

90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 …

Read More »

ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …

Read More »

ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ

(ಉತ್ತರಪ್ರದೇಶ): ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೃತ್ಯದಿಂದ ಮನನೊಂದ ಅಪ್ರಾಪ್ತೆಯೊಬ್ಬರು ಕೈ ಮೇಲೆ ಆರೋಪಿಯ ಹೆಸರು ಬರೆದು, ತದನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಬ್ಲ್ಯಾಕ್​ ಮೇಲ್​​ನಿಂದ ಆತಂಕಕ್ಕೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಜೊತೆ ಪ್ರೀತಿಯ ನಾಟಕವಾಡಿರುವ ಯುವಕ, ತದನಂತರ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೋ ಸೆರೆ ಹಿಡಿದಿದ್ದಾನೆ. ಇದಾದ ಬಳಿಕ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ …

Read More »

ರೈಲ್ವೇ ಸ್ಟೇಷನ್​ನಲ್ಲಿ ಫ್ರೀಯಾಗಿ ವೈಫೈ ಕೊಟ್ರೆ ಅಶ್ಲೀಲ ವಿಡಿಯೋ ಹುಡುಕಾಟವೇ ಹೆಚ್ಚು

ರೈಲ್ವೇ ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ (Free WiFi) ಕೊಡಲು ಪ್ರಾರಂಭಿಸಿದ ನಂತರ ಬಹಳಷ್ಟು ಪ್ರಯೋಜನವಾಗಿದೆ. ಪ್ರಯಾಣದ ಮಧ್ಯೆ ಜನರು ಸ್ಟೇಷನ್ (Station) ಬಂದಾಗ ಆತ್ಮೀಯರಿಗೋ, ಕುಟುಂಬದವರಿಗೂ ಕಾಲ್ ಮಾಡಿ ಮಾತನಾಡಬಹುದು, ವಿಡಿಯೋ ಕಾಲ್ ಮಾಡಬಹುದು. ಸೋಷಿಯಲ್ ಮೀಡಿಯಾ ನೋಡಬಹುದು. ಇಂಟರ್​ನೆಟ್ (Internet) ಆರಾಮವಾಗಿ ಬಳಸಬಹುದು. ಮುಖ್ಯ ವಿಚಾರ ಏನು ಎಂದರೆ ರೈಲು ಎಲ್ಲಿಗೆ ತಲುಪಿತು, ಎಷ್ಟು ಹೊತ್ತಿಗೆ ತಲುಪಲಿದೆ? ಆಹಾರ ಬುಕ್ ಮಾಡುವುದು, ಟ್ರೈನ್ ಟ್ರಾಕಿಂಗ್ ಹೀಗೆ ಹಲವಷ್ಟು ಉಪಯುಕ್ತ …

Read More »

ಆಪ್​ ಸಚಿವನ ಮನೆಯಲ್ಲಿ ಸಿಕ್ಕಿದ ಸಂಪತ್ತು ನೋಡಿ ಇಡಿ ಅಧಿಕಾರಿಗಳೇ ಶಾಕ್​!

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್​ ಸಚಿವ ಸತ್ಯೇಂದ್ರ ಜೈನ್​ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್​ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ …

Read More »