ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ತಲುಪಿಸುವ ಉದ್ದೇಶದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್ನಲ್ಲಿ ಮೇ 26ರಿಂದ ಮೇ 29ರವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ‘ಜಿಲ್ಲೆಯ ಮಾವು ಬೆಳೆಗಾರರು ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಉತ್ಪನ್ನವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಯೋಗ್ಯ ಬೆಲೆಗೆ ಮಾರಬಹುದು. ವಿಷೇಶವಾಗಿ ಈ ಬಾರಿ ಬೆಳಗಾವಿ, ಧಾರವಾಡ ಹಾಗೂ ರತ್ನಗಿರಿ ರೈತರಿಂದ …
Read More »ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್ನಿಂದ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿ
ಬೆಳಗಾವಿ: ನ್ಯೂಯಾರ್ಕ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್ನಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಭಾರತೀಯ …
Read More »ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ
ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ. ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು …
Read More »ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ
ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ …
Read More »ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ಪಿಎಸ್ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. …
Read More »ಸಿಲಿಕಾನ್ ಸಿಟಿ’ಯನ್ನು ‘ಸ್ವಿಮ್ಮಿಂಗ್ ಪೂಲ್’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು:H.D.K.
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ( Silicon City ) ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ. …
Read More »ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ …
Read More »ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು: ವಿಡಿಯೊ ಹಂಚಿ ಟಿಎಸ್ಆರ್ಟಿಸಿ ಎಚ್ಚರಿಕೆ
ಹೈದರಾಬಾದ್: ಮೋಟರ್ ಬೈಕ್ನ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ, ಕೆಳಗೆ ಬಿದ್ದ 18 ವರ್ಷದ ಯುವತಿ ಸಾವಿಗೀಡಾಗಿರುವ ಘಟನೆ ಹೈದರಾಬಾದ್ನಲ್ಲಿ ಇತ್ತೀಚೆಗೆ ಸಂಭವಿಸಿದೆ. ಸೋದರನೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಬುರ್ಖಾ ಹಿಂಬದಿಯ ಚಕ್ರಕ್ಕೆ ಸುತ್ತಿಕೊಂಡಿದೆ. ಹೀಗಾಗಿ ಇಬ್ಬರೂ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಆದರೆ, ಯುವತಿಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದ್ದು, ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ವಿಡಿಯೋವನ್ನು ತೆಲಂಗಾಣದ ಸಾರಿಗೆ ನಿಗಮದ ಎಂಡಿ ವಿಸಿ ಸಜ್ಜನರ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, …
Read More »ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: 1,201 ಹುದ್ದೆಗಳು ಖಾಲಿ..!
ಬೆಂಗಳೂರು : ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 …
Read More »‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ
‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ ಬೆಂಗಳೂರು, ಮೇ 20: ಮಳೆಯಿಂದ ತತ್ತರಿಸಿ ಹೋಗಿರುವ ನಗರದ ವಿವಿಧ ಭಾಗಗಳಿಗೆ ರಾಜಕೀಯ ಮುಖಂಡರು ಪ್ರದಕ್ಷಿಣೆ ಹಾಕುತ್ತಿದ್ದಾರೆ. ಅದರಂತೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗಾಂಧಿನಗರ, ಶಿವಾಜಿನಗರ, ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿದ್ದಾರೆ. ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಸಿದ್ದರಾಮಯ್ಯ, ಮಳೆಯಿಂದ ಇಷ್ಟೊಂದು ಆವಾಂತರವಾಗಲು ಸರಕಾರದ …
Read More »
Laxmi News 24×7