ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಆತ್ಮಹತೆಗೂ ಮುನ್ನ ತಾನೇ ಕ್ರಿಮಿನಾಶಕ ಔಷಧ ಖರೀದಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿಯ ಶಾಂಭವಿ ಹೋಟೆಲ್ ನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಮುನ್ನ ಚಿಕ್ಕಮಗಳೂರಿನಲ್ಲಿ 450 ರೂ. ನೀಡಿ 1 ಲೀಟರ್ ಕ್ರಿಮಿನಾಶಕ ಖರೀದಿಸಿದ್ದರು ಎಂದು ತನಿಖೆಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ತಿಳಿದು ಬಂದಿದೆ. ತಾನೇ ಖರೀದಿಸಿದ್ದ ಕ್ರಿಮಿನಾಶಕವನ್ನು ಶಾಂಭವಿ ಲಾಡ್ಜ್ ನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
Read More »ಬಿಜೆಪಿಯಿಂದ ಹಲಾಲ್ ಆದ ಮೊದಲ ವ್ಯಕ್ತಿ ಈಶ್ವರಪ್ಪ: ಸತೀಶ್ ಜಾರಕಿಹೊಳಿ
ಬೆಳಗಾವಿ: ಕೆ.ಎಸ್. ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ವ್ಯಕ್ತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆ.ಎಸ್. ಈಶ್ವರಪ್ಪನವರ ಸರದಿ ಬಂದಿತ್ತು, ಹಲಾಲ್ ಆದರು. ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ. ಶೀಘ್ರವೇ ಅವರ ಸರದಿಯೂ ಬರಲಿದೆ ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಹೀಗಾಗಿ ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಬಿಜೆಪಿ ನೇತೃತ್ವದ …
Read More »ಗುತ್ತಿಗೆದಾರ ಸಂತೋಷ್’ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಸಾವಿಗೂ ಮುನ್ನ ‘ಲಾಡ್ಜ್’ನಲ್ಲಿ ಆಗಿದ್ದೇನು.?
ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ. ಆದ್ರೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆಯನ್ನು ರಾಜ್ಯಾಧ್ಯಂತ ನಡೆಸಲಾಗುತ್ತಿದೆ. ಈ ನಡುವೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಅವರ ಸಾವಿಗೂ ಮುನ್ನವೇ ಲಾಡ್ಜ್ ನಲ್ಲಿ ಆಗಿದ್ದೇನು ಎನ್ನುವ ಮಾಹಿತಿಯನ್ನು ಸಂತೋಷ್ ಸ್ನೇಹಿತರು ಬಿಚ್ಚಿಟ್ಟಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ಗುತ್ತಿಗೆದಾರ ಸಂತೋಷ್ …
Read More »3 ತಿಂಗಳಲ್ಲಿ ಇನ್ಫೋಸಿಸ್ ತೊರೆದಿದ್ದಾರೆ 80 ಸಾವಿರ ಉದ್ಯೋಗಿಗಳು.!
ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ಸೇವಾ ಸಂಸ್ಥೆಯಾದ ಇನ್ಫೋಸಿಸ್ನಿಂದ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ತ್ರೈಮಾಸಿಕದ ಅಂಕಿ-ಅಂಶಗಳನ್ನು ಗಮನಿಸಿದ್ರೆ ನೌಕರಿ ಬಿಟ್ಟು ಹೋದವರ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿದೆ. 2022ರ ಜನವರಿಯಿಂದ ಮಾರ್ಚ್ವರೆಗೆ ಶೇ.27.7 ರಷ್ಟು ಉದ್ಯೋಗಿಗಳು ಕೆಲಸ ತೊರೆದಿದ್ದಾರೆ. ಅಂದರೆ 3 ತಿಂಗಳ ಅವಧಿಯಲ್ಲಿ 80 ಸಾವಿರ ನೌಕರರು ಇನ್ಫೋಸಿಸ್ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇನ್ಫೋಸಿಸ್, ಜಾಗತಿಕವಾಗಿ ಒಟ್ಟು 85,000 …
Read More »ರಾಜೀನಾಮೆ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರಿಟ್ಟ ಬಿಜೆಪಿ ಕಾರ್ಯಕರ್ತೆಯರು!
ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲು ಕೆ.ಎಸ್.ಈಶ್ವರಪ್ಪ ಬರುತ್ತಿದ್ದಂತೆ ಅವರನ್ನು ಸುತ್ತುವರಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರು ಹಾಕಿದರು. ಆ ವೇಳೆ ಮಹಿಳಾ ಕಾರ್ಯಕರ್ತರನ್ನು ಸಂತೈಸಲು ಮುಂದಾದ ಈಶ್ವರಪ್ಪ, ನೀವು ಹೀಗೆ ಅಳುತ್ತಿದ್ದರೆ ನಾನು ಇಲ್ಲಿಂದ ಹೋಗುವುದೇ ಇಲ್ಲ. ಸಂತೋಷದಿಂದ ಕಳಿಸಿಕೊಡಿ ಎಂದು ಮನವಿ ಮಾಡಿದರು. …
Read More »ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು.: ರೇಣುಕಾಚಾರ್ಯ
ಬೆಂಗಳೂರು,ಏ.15-ಮಾನ್ಯ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು. ಬೆನ್ನಿಗೆ ಚೂರಿ ಇರಿಯುವ ಮೊದಲು ಯಾವುದಕ್ಕೂ ಹುಷಾರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರದ ಹಪಾಹಪಿಗೆ ಬಿದ್ದಿರುವ ಬಂಡೆ ಈಗ ಎಲ್ಲೋ ಕುಳಿತು ಇನ್ನೆಲ್ಲೋ ಬಾಂಬ್ ಸಿಡಿಸುವ ಕಲೆಯನ್ನು ರಕ್ತಗತ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದು …
Read More »ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ
ಬೆಂಗಳೂರು : ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಧರಣಿಯನ್ನು ಮುಕ್ತಾಯಗೊಳಿಸಿದ್ದು, ಸರ್ಕಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ 24 ಗಂಟೆಗಳ ಧರಣಿ ಮುಕ್ತಾಯಕ್ಕೂ ಮುನ್ನ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಂದರು. ಮನವಿ ಪತ್ರವನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡುತ್ತೇವೆ. ಸರ್ಕಾರ ನಿಯೋಜಿಸುವ ಯಾವುದೇ ವಿಧದ ಅನೇಕ …
Read More »ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು
ಶಿವಮೊಗ್ಗ: ‘ನನಗೆ ಇದು ಅಗ್ನಿ ಪರೀಕ್ಷೆ. ಈ ಅಗ್ನಿ ಪರೀಕ್ಷೆಯಲ್ಲಿ ನಾನು ಗೆದ್ದು ಬರುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿ, ನೀವು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದಾಗ ಈಶ್ವರಪ್ಪ ಸಮಾಧಾನಪಡಿಸಿದರು. ನನ್ನ ಬಗ್ಗೆ ತಿಳಿದಿರುವ ಎಲ್ಲರೂ ಸಹ ನನಗೆ ವಿಶ್ವಾಸ ತುಂಬುತ್ತಿದ್ದಾರೆ. ನೀವು ಗೆದ್ದು ಬರುತ್ತೀರಿ ಎನ್ನುತ್ತಿದ್ದಾರೆ. ನಾನು ಹೀಗೆ ನನಗೆ ಅಗ್ನಿಪರೀಕ್ಷೆ ಬರುತ್ತದೆ ಎಂದು ತಿಳಿದುಕೊಂಡಿರಲಿಲ್ಲ. ಆದರೆ, ಜನರೇ …
Read More »ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ, ಖರ್ಚು ಕಡಿಮೆಯಾಗಿ ಲಾಭ ಹೆಚ್ಚು: ರಮೇಶ ಬಸಪ್ಪ
ಮೂಡಲಗಿ (ಬೆಳಗಾವಿ ಜಿಲ್ಲೆ): ‘ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ. ಪಕ್ಕಾ ಸಾವಯವ ಕೃಷಿ ಮಾಡ್ತಿದ್ದೀವ್ರಿ. ಖರ್ಚು ಕಡಿಮೆಯಾಗಿ ಲಾಭ ಹೆಚ್ಚು ಬರತೈತ್ರೀ’ ಎಂದು ತಾಲ್ಲೂಕಿನ ಕಲ್ಲೋಳಿಯ ಯುವ ರೈತರಾದ ರಮೇಶ ಬಸಪ್ಪ ಖಾನಗೌಡ್ರ ಮತ್ತು ಮಲ್ಲಿಕಾರ್ಜುನ ಖಾನಗೌಡ್ರ ಹೆಮ್ಮೆಯಿಂದ ಬೀಗುತ್ತಾರೆ. ಅವರು 10 ಎಕರೆ ಭೂಮಿಯಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ, ವಿವಿಧ ತರಕಾರಿಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುತ್ತಿದ್ದಾರೆ. ಹೈನುಗಾರಿಕೆ, ಕೋಳಿ, ಮೀನು, …
Read More »ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ರಾಜಕೀಯ ಕ್ಷೇತ್ರದಲ್ಲಿ ಮತ್ತೆ ಎಲ್ಲರೂ ತಿರುಗಿ ನೋಡುವಂತಹ ಸುದ್ದಿ ಮಾಡಿದೆ. ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣ ಬಿಜೆಪಿ ಸರಕಾರದ ಇಬ್ಬರು ಪ್ರಭಾವಿ ರಾಜಕಾರಣಿಗಳ ತಲೆದಂಡವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಈ ಎರಡೂ ತಲೆದಂಡದಲ್ಲಿ ಕಾಂಗ್ರೆಸ್ನ ಒಗ್ಗಟ್ಟಿನ ಹೋರಾಟಕ್ಕಿಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ರೀತಿಯ ಶಪಥ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಗಂಭೀರ ಆರೋಪ ಹೊತ್ತ …
Read More »
Laxmi News 24×7