ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಮೃತ ಸಂತೋಷ್ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ, ‘ ಸಾವಿಗೆ ಕಾರಣವೇನು? ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್ಗೆ ನ್ಯಾಯ …
Read More »ಬೆಂಗಳೂರಿನಲ್ಲಿ ಭಾರಿ ಮಳೆ ;
ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಗೆ ಕಿಸ್ ಕೊಟ್ಟ ಶಿಕ್ಷಕ : ಮುಂದೆನಾಯ್ತು ಗೊತ್ತಾ?
ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಕೆನ್ನಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್. ಐರಣಿ ಎಂಬಾತ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿ,. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ, ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು …
Read More »ಸಂತೋಷ್ ಸಾವು ಪ್ರಕರಣ: ಸಿಎಂ ಬೊಮ್ಮಾಯಿಗೆ ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ
ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ(Contractor Santosh Patil death case) ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ(Minister K S Eshwarappa) ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಬಂಟ್ವಾಳದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿಯವರು ಮಂಗಳೂರಿನಿಂದ ವಾಹನದಲ್ಲಿ ತೆರಳುತ್ತಿದ್ದ ವೇಳೆ ದಾರಿಯುದ್ದಕ್ಕೂ SDPI ಕಾರ್ಯಕರ್ತರು ವಳಚ್ಚಿಲ್ ಬಳಿ …
Read More »ರಾಹುಲ ಕಪ ವೇದಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.ಎಫ್ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು. ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ …
Read More »ನನ್ನ ಪತಿಯದ್ದು ಆತ್ಮಹತ್ಯೆಯಲ್ಲ, ಕೊಲೆ : ಗುತ್ತೆದಾರ ಸಂತೋಷ್ ಪಾಟೀಲ್ ಪತ್ನಿ
ಬೆಳಗಾವಿ : ನನ್ನ ಪತಿ ಸಂತೋಷ್ ಪಾಟೀಲ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು ಎಂದು ಸಾವಿಗೀಡಾದ ಗುತ್ತೆದಾರ ಸಂತೋಷ್ ಪಾಟೇಲ್ ಪತ್ನಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಬಸವೇಶ್ವರನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಪತ್ನಿ ಜಯಶ್ರೀ, ‘ನನ್ನ ಪತಿಯನ್ನ ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು. …
Read More »ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಹಿನ್ನೆಲೆ ಏನು? ಆರೋಪ ಏನು?
ಸಂತೋಷ್ ಪಾಟೀಲ್ ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ. ಕಳೆದ ತಿಂಗಳಷ್ಟೇ, ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ಗೆ ಪತ್ರ ಬರೆದಿದ್ದು. ಬೆಳಗಾವಿಯ ಹಿಂಡಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ತಾವು ಮತ್ತು ಇತರ ಗುತ್ತಿಗೆದಾರರು ರಸ್ತೆ ಕಾಮಗಾರಿ ಸೇರಿ ಒಟ್ಟು 108 ಕಾಮಗಾರಿಗಳನ್ನ ಪೂರ್ಣಗೊಳಿಸಿದ್ದೀವಿ. ಇದಕ್ಕಾಗಿ …
Read More »ಮೇ.3ರೊಳಗೆ ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸಿ: ಸರ್ಕಾರಕ್ಕೆ ರಾಜ್ ಠಾಕ್ರೆ ಗಡುವು
ಮುಂಬೈ: ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ಮೇ 3ರೊಳಗೆ ಸರ್ಕಾರ ಕ್ರಮಕೈಗೊಂಡು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಮಂಗಳವಾರ ಥಾಣೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿ ಮಾತನಾಡಿದ ಅವರು, ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರವು ಮೇ 3ಕ್ಕೂ ಮುನ್ನ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಎಂಎನ್ಎಸ್ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾವನ್ನು ಹಾಕುತ್ತಾರೆ ಎಂದಿದ್ದಾರೆ. ಭಾಷಣದ ಬಳಿಕ ಅನೇಕ ಎಂಎನ್ಎಸ್ ಬೆಂಬಲಿಗರು ಮಸೀದಿಗಳ ಮುಂದೆ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು
ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ …
Read More »ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% …
Read More »
Laxmi News 24×7