*ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.* 👉Breaking News👉👉👉 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್ ಜಾರಕಿಹೊಳಿ. ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …
Read More »ಮೊಟ್ಟೆ ದರದಲ್ಲಿ ಭಾರಿ ಇಳಿಕೆ
ಬೇಸಿಗೆಯಿಂದಾಗಿ ಮೊಟ್ಟೆ ದರದಲ್ಲಿ ಭಾರಿ ಇಳಿಕೆಯಾಗಿದೆ. ಈ ಹಿಂದೆ 5.30-6.30 ರೂ. ತಲುಪಿದ್ದ ಮೊಟ್ಟೆ ಬೆಲೆ ಈಗ 3.70-4.50 ರೂ. ತಲುಪಿದೆ. ಹೌದು ಬೆಂಗಳೂರು, ಮೈಸೂರಿನಲ್ಲಿ ಮೊಟ್ಟೆ ಬೆಲೆ 4.30 ರೂ.ನಷ್ಟಿದ್ದರೆ ಹೈದರಾಬಾದ್ ನಲ್ಲಿ 3.70 ರೂ. ನಷ್ಟಿದೆ. ಹೊಸಪೇಟೆಯಲ್ಲಿ 3.90 ರೂ.ನಷ್ಟಿದೆ. ಇದು ಸಗಟು ಬೆಲೆಯಾಗಿದ್ದು ಚಿಲ್ಲರೆ ಬೆಲೆಯಲ್ಲಿ 20-30 ಪೈಸೆಯಷ್ಟು ಹೆಚ್ಚಳವಾಗಲಿದೆ. ಬೇಸಿಗೆಯಲ್ಲಿ ಮೊಟ್ಟೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಬೆಲೆ ಕೂಡ ಕುಸಿತಕಂಡಿದೆ.
Read More »ರಾಯಚೂರು: ಬಾವಿಗೆ ಬಿದ್ದು ಯುವಕ ಸಾವು
ರಾಯಚೂರು: ಸಮೀಪದ ಯರಮರಸ್ ನಲ್ಲಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಡಿ.ಪಾಂಡು ( 27) ಎಂದು ಗುರುತಿಸಲಾಗಿದೆ. ಬಾವಿಯಲ್ಲಿದ್ದ ಜಲಚರಗಳಿಗೆ ಆಹಾರ ನೀಡುವ ಹವ್ಯಾಸ ಹೊಂದಿದ್ದ ಪಾಂಡು ಶನಿವಾರ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈಜು ಬಾರದ ಕಾರಣ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ರವಿವಾರ ಬೆಳಗ್ಗೆ ಶವ ಮೇಲೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ …
Read More »ಹಿಂದೂ-ಮುಸ್ಲೀಂ ಸೇರಿ ಕೇಸರಿ ಶಾಲು ಧರಿಸಿ, ಪಾನಕ-ಪಲಾರ ಹಂಚಿ ರಾಮನವಮಿ ಆಚರಣೆ :
ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.
Read More »BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್
ಬೆಳಗಾವಿ: ಬಿಜೆಪಿ (BJP), ಆರ್ಎಸ್ಎಸ್ (RSS) ನವರು ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದ್ದು, ಹಿಂದುಳಿದವರಿಗೆ ಮೀಸಲಾತಿ ರದ್ದುಪಡಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ (B.K Hariprasad) ಹೇಳಿದರು ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೀತಿದೆ. ಸ್ವಾತಂತ್ರ್ಯ ಹೋರಾಟ ಕೇವಲ ಒಂದು …
Read More »ಬೆಳಗಾವಿಯಲ್ಲಿಯೂ ಬೇರೆ ದೇಶದ ನೋಟುಗಳು, ಶಸ್ತ್ರಾಸ್ತ್ರಗಳು ಸಿಗುತ್ತವೆ: ಅಭಯ್ ಪಾಟೀಲ್
ಬೆಳಗಾವಿ: ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಹಾಗೂ ಶಸ್ತ್ರಾಸ್ತ್ರಗಳು ಸಿಗುತ್ತವೆ ಎಂದು ಶಾಸಕ ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ಪತ್ತೆಯಾದ ಪಾಕಿಸ್ತಾನ ನೋಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪಾಟೀಲ್, ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿರುವ ಕೆಲವು ಪ್ರದೇಶಗಳನ್ನು ಪರಿಶೀಲಿಸಿದರೆ ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಸಿಗುತ್ತವೆ. ಶಸ್ತ್ರಾಸ್ತ್ರಗಳು ಕೂಡ ಸಿಗುತ್ತವೆ ಎಂದು ಗಂಭೀರ ಆರೋಪ ಮಾಡಿದರು.ಬೆಳಗಾವಿಯಲ್ಲಿರುವ ಪೊಲೀಸ್ ಡಿಪಾರ್ಟ್ಮೆಂಟ್ …
Read More »ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ …
Read More »ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಆಧಾರದಲ್ಲಿ ಹಾಲಿ ಸಚಿವರ ಟಿಕೆಟ್ ಅನ್ನು ಬಿಜೆಪಿ ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ ರಾಜ್ಯದಲ್ಲಿ ಮುಂದಿನ ವಿಧಾನಸಭಾ …
Read More »ಐಪಿಎಲ್: ಬಿಸಿಸಿಐ ಹೊಸ ನಿಯಮ
ಮುಂಬಯಿ: ಈ ಬಾರಿಯ ಐಪಿಎಲ್ನಲ್ಲಿ ಬಿಸಿಸಿಐ ರೂಪಿಸಿರುವ ನಿಯಮವೊಂದು ತಡವಾಗಿ ತಿಳಿದು ಬಂದಿದೆ. ಪ್ರೇಕ್ಷಕರು ಬಾವುಟ ಗಳನ್ನು ಕೋಲಿನಲ್ಲಿ ಸಿಕ್ಕಿಸಿಕೊಂಡು ಸ್ಟೇಡಿಯಂಗೆ ಹೋಗುವಂತಿಲ್ಲ. ಈ ಕೋಲುಗಳನ್ನು ಉಪ ಯೋಗಿಸಿ ಪಂದ್ಯದ ವೇಳೆ ಅಭಿಮಾನಿಗಳು ಹೊಡೆದಾಡಿಕೊಳ್ಳಬಹುದು ಅಥವಾ ಮೈದಾನಕ್ಕೆ ಎಸೆಯಬಹುದು. ಇದರಿಂದ ಆಟಗಾರರಿಗೆ ಗಂಭೀರ ಗಾಯಗಳೂ ಆಗಬಹುದು. ಆದ್ದ ರಿಂದ ಕೋಲುಗಳನ್ನು ಒಯ್ಯಬೇಡಿ ಎಂದು ಬಿಸಿಸಿಐ ಹೇಳಿದೆ. ಇದರಿಂದ ಪಂದ್ಯದ ವೇಳೆ ಮೈದಾನದಲ್ಲಿ ಬಾವುಟಗಳನ್ನು ಹಾರಾಡಿಸುವ ಅಭಿಮಾನಿಗಳಿಗೆ ನಿರಾಶೆಯುಂಟಾಗಿದೆ. ಕೊರೊನಾ …
Read More »ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ
ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯುಥ್ ಕಾಂಗ್ರೆಸ್ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಸ್ವಾತಂತ್ರ್ಯ ಹೋರಾಟ ಮಾಡುವಾಗ …
Read More »
Laxmi News 24×7