ಬೆಂಗಳೂರು: ಈಗಾಗಲೇ ಹಲವರು ರಾಜ್ಯದ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ( JDS Party ) ಗುಡ್ ಬೈ ಹೇಳಿ, ವಿವಿಧ ರಾಷ್ಟ್ರೀಯ ಪಕ್ಷಗಳನ್ನು ಸೇರಿದ್ದಾರೆ. ಈ ಬಳಿಕ, ಈಗ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಜೆಡಿಎಸ್ ತೊರೆದು, ಶೀಘ್ರವೇ ಬಿಜೆಪಿ ( BJP Party ) ಸೇರ್ಪಡೆಯಾಗೋದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ( Basavaraj Horatti ) ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ …
Read More »ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ
ಬೆಂಗಳೂರು : ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ರೈಲ್ವೆ ವಿಭಾಗದ ಎಡಿಜಿಪಿ ಆಗಿದ್ದ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿರುವ ಅವರು, ಕಚೇರಿಯಿಂದ ಮನೆಯ ಕಡೆ ಕೊನೆಯ ಟ್ರಿಪ್ ಎಂದು ಬರೆದು, ಸಿಬ್ಬಂದಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. 2021ರ ಸೆಪ್ಟೆಂಬರ್ನಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಸರ್ಕಾರವು ಕೂಡಲೇ …
Read More »ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ
ಬೆಂಗಳೂರು : ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ, ರಾಮನವಮಿ ಉತ್ಸವ ಸಮಿತಿ ಅವರು ಏರ್ಪಡಿಸಿದ್ದ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಹನುಮನ …
Read More »ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಮುಂಬೈ: ನಟಿ, ರೂಪದರ್ಶಿ ಮಲೈಕಾ ಅರೋರಾ ಶನಿವಾರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಮಧ್ಯಾಹ್ನ ಪುಣೆಯಲ್ಲಿ ನಡೆದ ಫ್ಯಾಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಮಲೈಕಾ ಕಣ್ಣಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಅಪಘಾತದಲ್ಲಿ ಗಾಯಗೊಂಡ ನಟಿಯನ್ನು ಮುಂಬೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟಿಗೆ ಹೆಚ್ಚಿನ ತೊಂದರೆಗಳಾಗಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಲೈಕಾ ಸಹೋದರಿ ಅಮೃತಾ ಅರೋರಾ ತಿಳಿಸಿದ್ದಾರೆ.ಮಲೈಕಾ ಪುಣೆಯಲ್ಲಿ ನಡೆದ …
Read More »ಅಂಬಾನಿಯನ್ನು ಹಿಂದಿಕ್ಕಿದ ಅದಾನಿ; ಗೌತಮ್ ಈಗ ಏಷ್ಯಾದ ಅತಿ ಶ್ರೀಮಂತ..
ಮುಂಬೈ: ಅದಾನಿ ಗ್ರೂಪ್ನ ಚೇರ್ಮನ್ ಗೌತಮ್ ಅದಾನಿ ಇದೀಗ ಏಷ್ಯಾದ ಅತಿ ಶ್ರೀಮಂತ ವ್ಯಕ್ತಿಯಾಗುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ನ ಚೇರ್ಮನ್ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ನ ಹೊಸ ಪಟ್ಟಿ ಪ್ರಕಾರ ಗೌತಮ್ ಅದಾನಿಯ ಒಟ್ಟು ಆಸ್ತಿ 10,000 ಕೋಟಿ (100 ಬಿಲಿಯನ್) ಡಾಲರ್ ಆಗಿದ್ದು, ಈ ಮೂಲಕ ಅವರು ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಟಾಪ್-10 ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಮುಖೇಶ್ ಅಂಬಾನಿ 9,900 ಕೋಟಿ (99 ಬಿಲಿಯನ್) ಡಾಲರ್ …
Read More »ಪ್ರೀತಿಯ ಹೆಸರಲ್ಲಿ ಮೋಸ ಹೋದ ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನ
ಮೈಸೂರು: ಪ್ರೀತಿಯ ಹೆಸರಲ್ಲಿ ಮೋಸ ಹೋದ ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಪ್ರೀತಿಯ ಬಲೆಗೆ ಬಿದ್ದು ತನ್ನ ದೇಹವನ್ನು ಪ್ರಿಯಕರನಿಗೆ ಒಪ್ಪಿಸಿದ ಯುವತಿ ಇಂದು ವಂಚಿತಳಾಗಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾಳೆ. ಕಂದೇಗಾಲ ಗ್ರಾಮದ ಪ್ರಭುಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇಬ್ಬರು ಒಂದೇ ಗ್ರಾಮದವರು. ಪ್ರಿಯಕರ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು …
Read More »ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ.:ಪ್ರಭು ಚೌಹಾಣ್
ಬೆಂಗಳೂರು: ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ. ನಮ್ಮ ಇಲಾಖೆಯಿಂದ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಟಿವಿ9ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಪತ್ರ ಬರೆದಿದ್ದಾರೆ ಅಷ್ಟೇ. ಹಲಾಲ್ ಕಟ್ ಮಾಡಬಾರದು ಎಂದು ಪತ್ರ ಬರೆದಿದ್ದಾರೆ ಅಷ್ಟೇ. ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ. ಪತ್ರದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ತಿಳಿಸಿದ್ದಾರೆ. ಹಲಾಲ್ ಕಟ್ ಹಾಗೂ ಜಟ್ಕಾ …
Read More »ವನ್ಯಜೀವಿ ಸಂರಕ್ಷಣೆಯ ಸಂದೇಶಕ್ಕೆ 249 ಕಿ.ಮೀ ಸೈಕಲ್ ತುಳಿದ ಅರಣ್ಯಾಧಿಕಾರಿ
ಮುಂಬೈ: ಅರಣ್ಯ ಅಧಿಕಾರಿಯೊಬ್ಬರಿಗೆ ಪುಣೆಯಿಂದ ಕೊಲ್ಲಾಪುರಕ್ಕೆ ವರ್ಗಾವಣೆಯಾಗಿತ್ತು. ಅಧಿಕಾರ ವಹಿಸಿಕೊಳ್ಳವ ಶುಭ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸಲು 249 ಕಿ.ಮೀ ಸೈಕಲ್ ತುಳಿದು ಎಲ್ಲಡೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಹಾರಾಷ್ಟ್ರದ ಅರಣ್ಯ ಅಧಿಕಾರಿ ನಾನಾ ಸಾಹೇಬ್ ಲಾಡ್ಕತ್, ಬಿರು ಬಿಸಿಲ ನಡುವೆ ಕೆಲ ಘಟ್ಟ ಪ್ರದೇಶಗಳನ್ನು ದಾಟಿ 17 ಗಂಟೆಗಳ ನಂತರ ಕೊಲ್ಲಾಪುರ ತಲುಪಿದ್ದಾರೆ. ಈ ವೇಳೆ 12 ಗಂಟೆಗಳ ಕಾಲ ಸೈಕಲ್ ತುಳಿದಿದ್ದಾರೆ. ಲಾಡ್ಕತ್ ಸಹ್ಯಾದ್ರಿ ಹುಲಿ ಸಂರಕ್ಷಿತಾರಣ್ಯದ ಸಂರಕ್ಷಣಾಧಿಕಾರಿ ಮತ್ತು …
Read More »ಬೀಳ್ಕೊಡುಗೆ ಕಾರ್ಯಕ್ರಮ,ಐಟಂ ಸಾಂಗ್ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ
ಚಾಮರಾಜನಗರ: ಐಟಂ ಸಾಂಗ್ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಡ್ಯಾನ್ಸ್ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್ನಲ್ಲಿ …
Read More »ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ
Ugadi Special 2022 : ಹಿಂದೂ ಸಂಪ್ರದಾಯದಲ್ಲಿ ಈ ಯುಗಾದಿಗೆ ಅದರದೇ ಆದ ಮಹತ್ವದ ಸ್ಥಾನಮಾನವಿದೆ. ಭಾರತದ ಅನೇಕ ರಾಜ್ಯಗಳಲ್ಲಿ ಅದ್ದೂರಿಯಾಗಿ ಆಚರಿಸುತ್ತಿರುವ ಈ ಹಬ್ಬ ಯುಗಾದಿ, ಹೊಸ ವರ್ಷ, ಗುಡಿಪಾಡ್ವಾ ಹೀಗೆ ಅನೇಕ ನಾಮಗಳನ್ನು ಹೊತ್ತು ನಿಂತಿದೆ.ಯುಗಾದಿ ಸಮೀಪಿಸುತ್ತಿದೆ ಎಂದರೆ ಸಾಕು, ಪ್ರಕೃತಿಯಲ್ಲಿ ಏನೋ ಒಂದು ಹೊಸತನ, ಹೊಸ ಚೈತನ್ಯ,ಹೊಸ ಹುರುಪು, ಮರಗಿಡಗಳು ಹಚ್ಚ ಹಸಿರಿನಿಂದ ಕಂಗೊಳಿಸಿದಾಗ ಮನಸ್ಸಿಗೆ ಸಂತಸ ನೀಡುತ್ತದೆ, ಅಂತಹ ಬದಲಾವಣೆಯ ಪ್ರಕೃತಿಯನ್ನು ಕಣ್ತುಂಬಿಕೊಳ್ಳಲು ಎರಡು …
Read More »
Laxmi News 24×7