ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನ ಹಿಡಿದ ಪೊಲೀಸರು.. ಚಾಲಕನಿಗೆ ಚಾಕು ಇರಿದು ಲಾರಿ ಕಳ್ಳತನ ಮಾಡಿದ್ದ ಕಳ್ಳರು ಪರಾರಿ…ಲಾರಿ ವಶಕ್ಕೆ!! ಜೀವದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನವನ್ನು ಹಿಡಿಯುವುದರಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಬಾಡಗಂಡಿ ಕ್ರಾಸ್ ಬಳಿ ಮದ್ಯ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಜೀವದ ಹಂಗು ತೊರೆದು ಚೆಸ್ ಮಾಡಿ …
Read More »ಹನಿಟ್ರ್ಯಾಪ್ ಸದ್ದು ಮಧ್ಯೆ ಕುತೂಹಲ ಕೆರಳಿಸಿದ ಉಭಯ ನಾಯಕರ ಭೇಟಿ
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಲ್ಲಿಕಾರ್ಜುನ ಖರ್ಗೆ, ಅವರ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು. ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು. ಹನಿಟ್ರ್ಯಾಪ್ ಕುರಿತು ಈಗಾಗಲೇ ಸದನದಲ್ಲೇ ಸಚಿವ ರಾಜಣ್ಣ ಹೇಳಿಕೆ …
Read More »ಬೆಳಗಾವಿಯಲ್ಲಿ ನಾಳೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ
ಬೆಳಗಾವಿ: “ಬೆಳಗಾವಿಯಲ್ಲಿ ನಾಳೆ ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಇಂದು ಬೆಳಗಾವಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಗರದ ಸಿಪಿಇಡ್ ಮೈದಾನದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಅಂಗವಾಗಿ ಸುಮಾರು 100 ಜನರಿಗೆ …
Read More »ಸ್ಯಾಂಕಿ ಟ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮೂಲಕ ಗಂಗೆಗೆ ನಮನ
ಬೆಂಗಳೂರು : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ.. ಇದು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ. ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ 21ರಂದು …
Read More »ಕರವೇ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಬೆಳಗಾವಿಯಲ್ಲಿ ಫಾಲೋವರ್ ಎಂಬ ಮರಾಠಿ ಸಿನಿಮಾ ರದ್ದು
ಬೆಳಗಾವಿ : ಟ್ರೇಲರ್ನಲ್ಲಿ ಬೆಳಗಾವಿ ಮಹಾರಾಷ್ಟ್ರದ್ದು ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು “ಫಾಲೋವರ್” ಮರಾಠಿ ಚಿತ್ರ ವಿರುದ್ಧ ಸಿಡಿದೆದ್ದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಸಿನಿಮಾ ಪ್ರದರ್ಶನ ರದ್ದು ಪಡಿಸಲಾಗಿದೆ. ಗಡಿ ವಿವಾದದ ಬಗ್ಗೆ ಬೆಳಕು ಚೆಲ್ಲುವ ಚಿತ್ರ ಇದಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಕಾರ್ಯಕರ್ತರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಫಾಲೋವರ್ ಚಿತ್ರಪ್ರದರ್ಶನವನ್ನು ಟಾಕೀಸ್ …
Read More »ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಕವಿತೆ
ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾರಂಭ ಅದರ ಒಂದು ಭಾಗದಂತೆ “ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು ತಮ್ಮ ಕವಿತೆಯಿಂದ ಮುಂದಿನ ನುಡಿಗಳನ್ನು ಸಾದರ ಪಡಿಸಿದ್ದಾರೆ ಸದಾ ಒಂದಲ್ಲ ಒಂದು ಕವಿತೆಯನ್ನು ರಚಿಸಿ ಖಾನಾಪೂರ ತಾಲೂಕಿನ ಪರಂಪರೆ ಮತ್ತು ತಾಲೂಕಿನ ಸ್ಥಿತಿ ಗತಿಗೆ ತಕ್ಕಂತೆ ಕವಿತೆ ಸದರ ಪಡಿಸಿರುವ ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು …
Read More »ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ* *ಬೆಂಗಳೂರು:* ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ …
Read More »ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣ ನಿರ್ಭಂಧಿತ ಪ್ರದೇಶ;144ರ ಮೇರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 …
Read More »ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಘಟಪ್ರಭಾ ಎಡದಂಡೆ, ಬಲದಂಡ, ನದಿಗೆ ಹುಕ್ಕೇರಿ ಕೊಟವಾಗಿ ಯಾತ ನೀರಾವರಿ ಎಡದಂಡೆ ಕಾಲುವೆ ನೀರು ಹರಿಸಲೇಬೇಕಾದ ಅನಿವಾರ್ಯ ಇದೆ. ಕೋಳವೆ ಬಾಂವಿ ಬೋರುಗಳು ಬತ್ತಿ ಹೋಗಿವೆ ಹಾಗೂ ದನಕರುಗಳಿಗೆ ಜಾನುವಾರುಗಳಿಗೆ ತುಂಬಾ ನೀರಿನ ಕೊರತೆ ಇರುವುದರಿಂದ ಕಾಲುವೆಗೆ ನೀರು ಹರಿಸಬೇಕೆಂದು ಒತ್ತಾಯಿಸಿದ್ದಾರೆ. …
Read More »ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವುದು ಶತಸಿದ್ಧ,:ಡಿ.ಕೆ.ಶಿ
ಬೆಂಗಳೂರು/ದೆಹಲಿ: “ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಾವಣೆ ಮಾಡುವುದು ಶತಸಿದ್ಧ. ಹೇಗೆ ಹೆಸರು ಬದಲಾಯಿಸಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರಕಾರ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಪ್ರಸ್ತಾಪವನ್ನು ತಡೆಹಿಡಿದಿರುವ ಕುರಿತು ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಜಿಲ್ಲೆಯ ಹೆಸರು ಬದಲಾವಣೆ ರಾಜ್ಯ ಸರಕಾರಕ್ಕೆ ಸಂಬಂಧಪಟ್ಟ ವಿಚಾರ. ನಮಗೂ ಕಾನೂನು ಗೊತ್ತಿದೆ” ಎಂದರು. “ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲಾ, ಅವರುಗಳು ಕೇಂದ್ರ …
Read More »
Laxmi News 24×7