Breaking News

ರಾಷ್ಟ್ರೀಯ

ಉಚಿತ ಬಸ್​ ಸೇವೆಗಾಗಿ ಹುಡುಗಿಯಾದ ಯುವಕ.. ಕಂಡಕ್ಟರ್​ ಕೈಗೆ ಸಿಕ್ಕಿಬಿದ್ದಿದ್ದು ಹೀಗೆ.. ವಿಡಿಯೋ!

ನವದೆಹಲಿ: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲಿನ ಸರ್ಕಾರ ಮಹಿಳೆಯರಿಗೆ ಉಚಿತ ಬಸ್​ ಸೇವೆ ಆರಂಭಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಉಚಿತ ಬಸ್​ ಸೇವೆ ಆನಂದಿಸಲು ಯುವಕನೊಬ್ಬ ತನ್ನ ಎಲ್ಲ ಮಿತಿಗಳನ್ನು ದಾಟಿದ್ದಾನೆ. ಹುಡುಗಿಯಂತೆ ರೆಡಿಯಾದ ಯುವಕ ಬಸ್​ವೊಂದಕ್ಕೆ ಹತ್ತಿ ಪ್ರಯಾಣಿಸುತ್ತಿದ್ದನು. ಆದರೆ ಆತ ಕಂಡಕ್ಟರ್​ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಹೌದು, ಉಚಿತ ಬಸ್​ ಸೌಲಭ್ಯ ಆನಂದಿಸಲು ಯುವಕನೊಬ್ಬ ಹುಡುಗಿಯಂತೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು …

Read More »

ಅಕ್ರಮ ಆಸ್ತಿ ಗಳಿಕೆ: ಸಚಿವ ಸೋಮಣ್ಣ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಹಿನ್ನೆಲೆಯಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನೋಟಿಸ್​ ನೀಡಿದೆ. ಹೀಗಾಗಿ, ತಕ್ಷಣವೇ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿಗಳೇ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ ವಿಷಯ ಪ್ರಸ್ತಾಪಿಸಿ, ರಾಮಕೃಷ್ಣ ಎಂಬುವರು ಸಲ್ಲಿಸಿರುವ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ …

Read More »

ಸ್ಕೂಟಿಯಲ್ಲಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು

ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್​ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್​ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು‌. ಟ್ರಾನ್ಸ್​ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ …

Read More »

ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ …

Read More »

ಸುಧಾಕರ್ ಆಯೋಜಿಸಿದ್ದ ಭೋಜನಕೂಟಕ್ಕೆ ಬಿಜೆಪಿಯವರೇ ಗೈರು: ಕಮಲದಲ್ಲಿ ತಳಮಳ

ಬೆಂಗಳೂರು, ಮಾರ್ಚ್ 22: ಮೂಲ ಬಿಜೆಪಿಗರು ಮತ್ತು ವಲಸಿಗರು ಎನ್ನುವ ಚರ್ಚೆ ಪಕ್ಷದಲ್ಲಿ ಇದೇನು ಮೊದಲಲ್ಲ. ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಲವು ಬಾರಿ ಬಹಿರಂಗವಾಗಿಯೇ ಈ ಬಗ್ಗೆ ಮಾತನಾಡಿದ್ದರು. ನಾವು ಬಂದಿದ್ದರಿಂದಲೇ ನೀವು ಸಚಿವರಾಗಿರುವುದು ಎಂದು ಬಾಂಬೆ ಫ್ರೆಂಡ್ಸ್ ಅದಕ್ಕೆ ಕೌಂಟರ್ ಅನ್ನೂ ಕೊಡುತ್ತಿದ್ದರು. ಈ ವಿಚಾರ ಇತ್ತೀಚಿನ ದಿನಗಳಲ್ಲಿ ಪಕ್ಷದೊಳಗೆ ಅಷ್ಟೇನೂ ಚರ್ಚೆಯಾಗುತ್ತಿರಲಿಲ್ಲ. ಕಾರಣ, ದೊಡ್ಡವರ ಖಡಕ್ ಎಚ್ಚರಿಕೆ. ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ …

Read More »

ಬಿಎಸ್‌ವೈ ಮನೆಯಲ್ಲೇ ಭ್ರಷ್ಟಾಚಾರ , ನಾ ಖಾವೂಂಗ, ನಾ ಖಾನೆದೂಂಗ ಎಂದರೆ ಇದೇನಾ: ಸಿದ್ದರಾಮಯ್ಯ

ಬೆಂಗಳೂರು: ‘ಬಿಜೆಪಿಯವರು ಭ್ರಷ್ಟರು, ಭಂಡರು. ತಮ್ಮ ಹುಳುಕು ಗೊತ್ತಾಗುತ್ತದೆ ಎಂದು ಚರ್ಚೆಗೆ ಅವಕಾಶ ಕೊಡಲಿಲ್ಲ. ಪೊಲೀಸ್‌, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳಲ್ಲಿನ ವ್ಯಾಪಕ ಭ್ರಷ್ಟಾಚಾರ ವರದಿಗಳು ಪ್ರಕಟ ಆಗಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ವಿರೋಧ ಪಕ್ಷಗಳು ಸುಮ್ಮನಿರಬೇಕಾ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ವಿಧಾನಸಭೆಯ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ, ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಪ್ರಸ್ತಾಪಿಸುವುದು ಬಿಜೆಪಿಯವರಿಗೆ …

Read More »

ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.

ಹಾನಗಲ್​ಕುಟುಂಬದ ಆಸ್ತಿಯನ್ನೆಲ್ಲ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡು ಬೇರೆಯಾಗಿ ಉಳಿದು, ಜೀವನದ ಮುಸ್ಸಂಜೆಯಲ್ಲಿರುವ ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.   ಹಾನಗಲ್ ತಾಲೂಕಿನ ಹಿರೇಬಾಸೂರ ಗ್ರಾಮದ 80 ವರ್ಷದ ವೃದ್ಧ ರುದ್ರಗೌಡ ಬಸನಗೌಡ ಪಾಟೀಲ ಹಾಗೂ ನೀಲಮ್ಮ ಪಾಟೀಲ ದಂಪತಿ ಹೆಸರಿನಲ್ಲಿದ್ದ ಎಲ್ಲ ಆಸ್ತಿಯನ್ನೂ ಮಕ್ಕಳು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ನಂತರ, ತಂದೆ ತಾಯಿಯನ್ನು ನೋಡಿಕೊಳ್ಳದೆ ಬೇರೆಯಾಗಿ ಉಳಿದಿದ್ದರು. ಅವರ ಈ ಧೋರಣೆಯಿಂದ …

Read More »

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು.

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು. 2022-23ನೇ ಸಾಲಿನಲ್ಲಿ 44,765.22 ಲಕ್ಷಗಳಷ್ಟು ಅಂದಾಜು ಆದಾಯವನ್ನು ನಿರೀಕ್ಷಿಸಲಾಗಿದ್ದು, 44,758.91 ಲಕ್ಷಗಳಷ್ಟು ಅಂದಾಜು ವೆಚ್ಚವನ್ನು ನಿರೀಕ್ಷೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪಾಲಿಕೆ ಬಜೆಟ್‍ನ್ನು ಮಂಡಿಸಿದ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡರು. ಬೀದಿ ದೀಪಗಳ ನಿರ್ವಹಣೆಗೆ 550ಲಕ್ಷ ರೂಪಾಯಿಗಳನ್ನು ವ್ಯಯ ಮಾಡಲು ನಿರ್ಧರಿಸಲಾಗಿದೆ. ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಎಲ್‍ಇಡಿ ಲೈಟ್ ಹಾಕಲು ಯೋಜಿಸದಲಾಗಿದೆ. ರಸ್ತೆ, …

Read More »

ಚರಂಡಿಗಿಳಿದು ಕೊಳಚೆ ಶುಚಿಗೊಳಿಸಿದ ಆಪ್ ಕೌನ್ಸಿಲರ್‌ಗೆ ಹಾಲಿನ ಸ್ನಾನ..!

ದೆಹಲಿ: ಇಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಹಸೀಬ್-ಉಲ್-ಹಸನ್ ಅವರು ಶಾಸ್ತ್ರಿ ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದೆ. ಇದಕ್ಕೆ ಪ್ರತಿಯಾಗಿ ಗೌರವ ಸಲ್ಲಿಸಿದ ಸಾರ್ವಜನಿಕರು, ಕೌನ್ಸಿಲರ್ ಅವರನ್ನು ಹಾಲಿನಲ್ಲೇ ಸ್ನಾನ ಮಾಡಿಸಿದ್ದಾರೆ. ಪೂರ್ವ ದೆಹಲಿಯ ಕೌನ್ಸಿಲರ್ ಆಗಿರುವ ಹಸನ್ ಬಿಳಿ ಕುರ್ತಾ ಧರಿಸಿ ಎದೆ ಮಟ್ಟದವರೆಗೆ ತುಂಬಿಕೊಂಡಿದ್ದ ಚರಂಡಿಗೆ ಇಳಿದು ಅಲ್ಲಿನ ಕೊಳಚೆಯನ್ನು ಶುಚಿಗೊಳಿಸಿದರು. ಚರಂಡಿಯಲ್ಲಿ ತೇಲುತ್ತಿದ್ದ ತ್ಯಾಜ್ಯ ವಸ್ತುಗಳನ್ನು ಹಸನ್ ತೆಗೆದು ಹಾಕಿದ್ದಾರೆ. …

Read More »

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರಕ್ಕೆ ನಿರ್ಬಂಧ ವಿಚಾರ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿ ಮಾಡಿತ್ತು. ಕಾಂಗ್ರೆಸ್ ಮುಸ್ಲಿಂ ಶಾಸಕರು ಮತ್ತು ಬಿಜೆಪಿಯ ಕರಾವಳಿ ಭಾಗದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರ ನಿರ್ಬಂಧದ ಭಿತ್ತಿಪತ್ರ ಹಾಕಿದವರು ಹೇಡಿಗಳು, ಕ್ರೂರಿಗಳ ಎಂದ ಖಾದರ್ ಹೇಳಿಕೆ ಗದ್ದಲವನ್ನು ಎಬ್ಬಿಸಿತು. ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ರಾಜ್ಯದ ಕೆಲ ಕಡೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು …

Read More »