Breaking News

ರಾಷ್ಟ್ರೀಯ

ಸಿಎಂ ವಿರುದ್ಧ ಎಚ್​ಡಿಕೆ ಗರಂ;

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆ ಮೂರು ಆರ್ ಮತ್ತು ನಾಲ್ಕು ಗಂಟೆ.. ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿನ್ನೆ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರನ್ನು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಸಿಎಂ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದರು.   ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆದ ಆರ್​ಆರ್​ಆರ್​ ಸಿನಿಮಾ ಪ್ರಚಾರಾರ್ಥ ಕಾರ್ಯಕ್ರಮದಲ್ಲಿ …

Read More »

ಡೀಸೆಲ್ ಬೆಲೆ ಲೀಟರ್​ಗೆ 25 ರೂಪಾಯಿ ಹೆಚ್ಚಳ; ಚಿಂತೆ ಯಾರಿಗೆ?

ನವದೆಹಲಿ: ಈ ಹಿಂದೆಯೇ ಸುಳಿವು ಇದ್ದಂತೆ ತೈಲ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಡೀಸೆಲ್​ ದರ ಲೀಟರ್​ವೊಂದಕ್ಕೆ 25 ರೂಪಾಯಿ ಏರಿದೆ. ಅದಾಗ್ಯೂ ಚಿಲ್ಲರೆಯಾಗಿ ಡೀಸೆಲ್ ಭರಿಸಿಕೊಳ್ಳುವ ವಾಹನ ಮಾಲೀಕರು ಚಿಂತೆ ಮಾಡುವಂತಿಲ್ಲ. ಹಾಗಾದರೆ, ಈ ಬೆಲೆ ಏರಿಕೆಯ ಚಿಂತೆ ಯಾರಿಗೆ?   ಹೌದು.. ಡೀಸೆಲ್​​ ದರದಲ್ಲಿ ಪ್ರತಿ ಲೀಟರ್​ಗೆ 25 ರೂ. ಹೆಚ್ಚಳವಾಗಿದ್ದರೂ ಚಿಲ್ಲರೆಯಾಗಿ ಡೀಸೆಲ್​ ಭರಿಸಿಕೊಳ್ಳುವ ವಾಹನ ಮಾಲೀಕರಿಗೆ ಅದರ ಬಿಸಿ ಸದ್ಯಕ್ಕಂತೂ ತಟ್ಟುವಂತಿಲ್ಲ. ಏಕೆಂದರೆ ಈ ಬೆಲೆ ಏರಿಕೆ …

Read More »

ಭಗ್ನ ಪ್ರೇಯಸಿ ಉಪನ್ಯಾಸಕಿ; ಪ್ರಿಯಕರನ ಮದುವೆ ದಿನವೇ ಆತ್ಮಹತ್ಯೆ!

ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಅತಿಥಿ ಉಪನ್ಯಾಸಕಿಯೊಬ್ಬರು ಪ್ರೇಮವೈಫಲ್ಯದಿಂದ ಮನನೊಂದು ತನ್ನ ಪ್ರಿಯಕರ ಮದುವೆಯಾದ ದಿನವೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಭಾನುವಾರ ಬೆಳಗ್ಗೆ ತಮ್ಮ ಮನೆಯ ಬೆಡ್‌ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಏನಿದು ಪ್ರಕರಣ?: ಸಹ್ಯಾದ್ರಿ ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಆಕೆಗೆ ವಿನೋಬನಗರದ ನಿವಾಸಿಯಾದ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆದಿತ್ತು. ಆನಂತರ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ವೈಮನಸ್ಸು ಉಂಟಾಗಿತ್ತು. ನಂತರ ಪ್ರಿಯಕರನಿಗೆ …

Read More »

38 ಲಕ್ಷ ರೂ. ಬಾಡಿಗೆ ಬಾಬ್ತು ಪಾವತಿಸದ ಜಮೀರ್ ಅಹಮದ್​​; ಐವರು ಮಾಜಿ ಸಚಿವರಿಂದಲೂ ಬಾಕಿ..

ಬೆಂಗಳೂರು: ರಾಜ್ಯದಲ್ಲಿ ಬಿ.ಝಡ್. ಜಮೀರ್ ಅಹಮದ್ ಖಾನ್ ಸೇರಿ 6 ಮಾಜಿ ಸಚಿವರು ಸರ್ಕಾರದಿಂದ ನೀಡಲಾಗಿದ್ದ ವಸತಿ ಗೃಹಗಳ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತುಗಳನ್ನು ಮೂರು ವರ್ಷವಾದರೂ ಪಾವತಿಸಿಲ್ಲ. ರಾಜ್ಯದಲ್ಲಿ ಸಚಿವರಾದವರಿಗೆ ಸರ್ಕಾರದಿಂದ ಆಡಳಿತ ಕಾರ್ಯವೈಖರಿಗೆ ಅನುಕೂಲ ಆಗುವಂತೆ ವಸತಿ ಗೃಹ ನೀಡಲಾಗುತ್ತದೆ. ಕೆಲವರು ಅಧಿಕಾರ ಪೂರ್ಣಗೊಂಡರೂ ವಸತಿ ಮನೆ ಬಿಟ್ಟು ಹೋಗದೇ ಇದ್ದಲ್ಲಿ, ಎಷ್ಟು ದಿನಗಳವರೆಗೆ ಉಳಿದುಕೊಂಡಿರುತ್ತಾರೋ ಅಷ್ಟು ಅವಧಿಗೆ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತು ಪಾವತಿಸಬೇಕು. …

Read More »

ಮತ್ತೆ ಬೆಲೆ ಏರಿಕೆಯ ಬರೆ: ದಿನಬಳಕೆ ಗ್ರಾಹಕ ಉತ್ಪನ್ನಗಳು ಶೇ.10 ತುಟ್ಟಿ ಸಾಧ್ಯತೆ

ನವದೆಹಲಿ: ಬೆಲೆ ಏರಿಕೆ ಆಘಾತದಿಂದ ಈಗಾಗಲೇ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಮತ್ತೊಂದು ಸುತ್ತಿನ ದುಬಾರಿ ಬರೆ ಬೀಳುವುದು ಖಚಿತವಾಗಿದೆ. ಸಗಟು ಮತ್ತು ಚಿಲ್ಲರೆ ಮಾರಾಟ ಹಣದುಬ್ಬರದ ದರ ಏರಿಕೆಯಾದ ಬೆನ್ನಲ್ಲೇ ದಿನಬಳಕೆಯ ಶೀಘ್ರ ಬಿಕರಿಯಾಗುವ ಗ್ರಾಹಕ ಸರಕುಗಳ (ಎಫ್​ಎಂಸಿಜಿ) ಬೆಲೆಯನ್ನು ಶೇ.10 ಹೆಚ್ಚಿಸಲು ತಯಾರಿಕಾ ಕಂಪನಿಗಳು ಮುಂದಾಗಿವೆ. ಕೆಲವು ಕಂಪನಿಗಳು ಈಗಾಗಲೇ ಏರಿಕೆ ಮಾಡಿಯೂ ಆಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳದ ಕಾರಣ ಕಳೆದ ಜನವರಿಯಲ್ಲಿ ಎಫ್​ಎಂಸಿಜಿ …

Read More »

ಕೋ-ಜನರೇಷನ್​ಗೆ ಬೇಕಿದೆ ನವೀಕರಣ; 62 ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಂಕಷ್ಟ!

ಬೆಳಗಾವಿ :ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 72 ಸಕ್ಕರೆ ಕಾರ್ಖಾನೆಗಳ ಪೈಕಿ 60 ಸಕ್ಕರೆ ಕಾರ್ಖಾನೆಗಳು ಕೋಜನರೇಷನ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದರೂ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ನೆರೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ಯುನಿಟ್​ಗೆ 5.80 ರೂ. ವಿದ್ಯುತ್ ದರ ನೀಡುತ್ತಲಿದೆ. ಆದರೆ ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಕೋ-ಜನರೇಷನ್ ವಿದ್ಯುತ್ ಉತ್ಪಾದನೆಯ …

Read More »

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು..! ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು ಬಿಟ್ಟಿದೆ. ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ, ಅಪಾಯ ಇದೆ. 10 ಕಿಲೋ ಮೀಟರ್ ಉದ್ದದ ಫ್ಲೈಓವರ್ ಇದಾಗಿದೆ. ಫ್ಲೈಓರ್ ನ ಮಧ್ಯ ಭಾಗ ಲೇಬೈ ಬಳಿ ಬಿರುಕು ಬಿಟ್ಟಿದೆ. ಕೆಲ ತಿಂಗಳ ಹಿಂದೆ ಇದೇ ಲೇಬೈ ಬಳಿ ಅಪಘಾತವಾಗಿತ್ತು. ಇತ್ತೀಚೆಗೆ ಅಪಘಾತದಲ್ಲಿ ತಡೆಗೋಡೆ ಬಿರುಕುಬಿಟ್ಟಿತ್ತು. ಆದರೆ ತಡೆಗೋಡೆ ದುರಸ್ತಿ ಮಾಡದೆ, ಬಿಇಪಿಟಿಎಲ್ ಸಂಸ್ಥೆ ಹಾಗೆಯೇ ಬಿಟ್ಟಿದೆ. ಗೋಡೆ ಬದಲಿಗೆ ಬ್ಯಾರಿಕೇಡ್ …

Read More »

ಹಿಜಾಬ್ ತೀರ್ಪು ನೀಡಿದ ಮೂವರು ನ್ಯಾಯಾಧೀಶರಿಗೆ ‘Y’ ಶ್ರೇಣಿಯ ಭದ್ರತೆ: ಸಿಎಂ

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಿದ್ದು, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರ ಮೇಲೆ ಬೆದರಿಕೆ …

Read More »

ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ:ಜೋಶಿ

ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ ನೋಡುವುದಿಲ್ಲ. ಬೇರೆ ಸಿನಿಮಾ ನೋಡಲು ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ …

Read More »

ಕಾಂಗ್ರೆಸ್‌ ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೆ,ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ

ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ …

Read More »