ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ. ಈ ನಡುವೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಜಾಪೋರಿಷಿಯಾ ಸಮೀಪದ ಎನರ್ವೋದರ್ …
Read More »ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. …
Read More »ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ನಿಧನ
ಮೆಲ್ಬೋರ್ನ್: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಶಂಕಿತ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. https://twitter.com/virendersehwag/status/1499748352048599041/photo/1?ref_src=twsrc%5Etfw%7Ctwcamp%5Etweetembed%7Ctwterm%5E1499748352048599041%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fsports%2Fcricket%2Faustralian-cricket-icon-shane-warne-has-died%2Fka20220304194424913
Read More »ವಿಮಾನದಲ್ಲಿ ನವೀನ್ ಮೃತದೇಹ ತರಲು ಹೆಚ್ಚು ಜಾಗವನ್ನು ತೆಗೆದುಕೊಳ್ಳುತ್ತದೆ”: ಮೃತದೇಹ ಕರೆತರುವ ಕುರಿತು ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ
ಬೆಂಗಳೂರು, ಮಾರ್ಚ್ 4: ಉಕ್ರೇನ್ನಲ್ಲಿ ಹತ್ಯೆಗೀಡಾದ ವಿದ್ಯಾರ್ಥಿ ನವೀನ್ ಶೇಖರಗೌಡ ಅವರ ಶವವನ್ನು ಕರ್ನಾಟಕಕ್ಕೆ ತರಲು ಅವರ ಕುಟುಂಬ ಕಾಯುತ್ತಿರುವಾಗ, ಬಿಜೆಪಿ ಶಾಸಕರೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. “ವಿಮಾನದಲ್ಲಿ ನವೀನ್ ಮೃತದೇಹ ತರಲು ಹೆಚ್ಚು ಜಾಗವನ್ನು ತೆಗೆದುಕೊಳ್ಳುತ್ತದೆ” ಎಂದು ಹೇಳಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಹುಬ್ಬಳ್ಳಿ-ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ನವೀನ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಹಾವೇರಿಗೆ ಯಾವಾಗ ತರಲಾಗುವುದು ಎಂಬ ಸುದ್ದಿಗಾರರ …
Read More »ರೆಡಿಯಾಯ್ತು ರಷ್ಯಾದ ಎಸ್-400! ಇವು 400 ಕಿಲೋಮೀಟರ್ವರೆಗೆ ಸಾಗಿ ದಾಳಿ ನಡೆಸೋ ಸಾಮರ್ಥ್ಯ ಹೊಂದಿರುತ್ತವೆ.
ಯುಕ್ರೇನ್ ಮೇಲೆ ರಷ್ಯಾ ಮುಗಿಬಿದ್ದು ಈಗಾಗಲೇ ಒಂದು ವಾರ ಕಳೆದೋಗಿದೆ. ಸಂಘರ್ಷ 8ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೆ ಇಲ್ಲಿ ರಷ್ಯಾ ಅಂದುಕೊಂಡಿದ್ದರ ಮಟ್ಟಿಗೆ ಯಶಸ್ಸು ಸಿಗ್ತಾ ಇಲ್ಲ. ಯುಕ್ರೇನ್ ಕಡೆಯಿಂದ ಬಲವಾದ ವಿರೋಧ ಎದುರಾಗ್ತಿದೆ. ಮತ್ತೊಂದ್ಕಡೆ ಪಾಶ್ಚಿಮಾತ್ಯ ದೇಶಗಳು ಯುಕ್ರೇನ್ಗೆ ನಿರಂತರವಾಗಿ ಸಪೋರ್ಟ್ ಮಾಡ್ತಾ ಇದಾರೆ. ಇದ್ರ ನಡುವೆಯೇ ಭಾನುವಾರ ಪುಟಿನ್ ಪರಮಾಣು ಶಸ್ತ್ರಾಸ್ತ್ರಗಳನ್ನು ರೆಡಿ ಇಟ್ಕೊಳ್ಳಿ ಅಂತ ಆದೇಶಿಸಿದ್ರು. ಇದೀಗ ಕಂಟ್ರೋಲ್ಗೆ ಬಾರದ ಯುಕ್ರೇನ್ ಮೇಲೆ ಎಸ್ 400 …
Read More »ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ‘ಡಿ ಬಾಸ್’ ಘೋಷಣೆಗೆ ಸಿ.ಎಂ ಪೆಚ್ಚು!
ಬೆಂಗಳೂರು: ಚಿತ್ರಾಭಿಮಾನ, ಅಭಿಮಾನಿಗಳ ಜೈಕಾರ, ರಾಜಕೀಯ ಮೇಳ, ಬೇಡಿಕೆಗಳ ಪಟ್ಟಿ ಮತ್ತು ಭರವಸೆಗಳ ಮಹಾಪೂರಗಳ ನಡುವೆ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿತು. ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುಮಾರು ಒಂದು ಗಂಟೆಯಷ್ಟು ತಡವಾಗಿ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಆರಂಭಿಸಿದ ಕೆಲ ಕ್ಷಣಗಳಲ್ಲಿ ನಟ ದರ್ಶನ್ ಬಂದರು ಆ ವೇಳೆಗೆ ಸಭಾಂಗಣದಲ್ಲಿದ್ದ …
Read More »ಬೊಮ್ಮಾಯಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ಧತೆ.
ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ. ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, …
Read More »ಅಮರಾವತಿʼಯೇ ಆಂಧ್ರಪ್ರದೇಶದ ರಾಜಧಾನಿ!. ಹೈಕೋರ್ಟ್ನ ಅಂತಿಮ ತೀರ್ಪು ಪ್ರಕಟ
ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. …
Read More »ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು. ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್ ಕರೆತರುವ ಬಗ್ಗೆ …
Read More »ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ
ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ. ಆದರೆ ನನ್ನ ತಮ್ಮ ಬರಲೇ ಇಲ್ಲ ಎಮದು ಮೃತ ನವೀನ್ ಸಹೋದರ ಹರ್ಷ ಭಾವುಕರಾದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕಡೆ ಅಪ್ಪ ಅಮ್ಮನನ್ನು ಸಮಾಧಾನ ಮಾಡಬೇಕು. ಮನೆಯಲ್ಲಿ ನಾನೇ ಹಿರಿಯ ಮಗ ಅವರ ಮುಂದೆ ನಾನು ಅತ್ತರೆ ನನಗೆ ನೋವು ತಡೆಯಲು ಆಗುತ್ತಿಲ್ಲ ಎಂದು ಗದ್ಗದಿತರಾದರು. ರಷ್ಯಾ-ಉಕ್ರೇನ್ ನಡುವಿನ ಯುದ್ಧದ …
Read More »
Laxmi News 24×7