Breaking News

ರಾಷ್ಟ್ರೀಯ

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ಸುದ್ದಿ ತಾಣವೊಂದರ ವಿರುದ್ಧ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ ಭಾರತ್ ಬಯೋಟೆಕ್​; ತೆಲಂಗಾಣ ಕೋರ್ಟ್ ಹೇಳಿದ್ದೇನು?

ದಿ ವೈರ್​ ಸುದ್ದಿ ಮಾಧ್ಯಮದ ಪ್ರಕಾಶಕರು, ಸಂಪಾದಕರು ಮತ್ತು ಅಲ್ಲಿರುವ ಕೆಲವು ಬರಹಗಾರರ ವಿರುದ್ಧ ತೆಲಂಗಾಣ ಕೋರ್ಟ್​​ವೊಂದರಲ್ಲಿ ಭಾರತ್ ಬಯೋಟೆಕ್​​ ಔಷಧೀಯ ಕಂಪನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದೆ. ಭಾರತ್​ ಬಯೋಟೆಕ್​ (Bharat Biotech) ಅಭಿವೃದ್ಧಿ ಪಡಿಸಿದ ಕೊವ್ಯಾಕ್ಸಿನ್​ ಕೊವಿಡ್​ 19 ಲಸಿಕೆ (covaxin)  ಬಗ್ಗೆ ಅವಹೇಳನಕಾರಿ ಸುದ್ದಿಗಳನ್ನು ಬರೆದು, ಪ್ರಕಟಿಸಿದ ಆರೋಪದಡಿ ಈ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾಗಿ ಕಂಪನಿ ಹೇಳಿಕೊಂಡಿದೆ. ತೆಲಂಗಾಣದ ರಂಗಾರೆಡ್ಡಿ ಕೋರ್ಟ್​​ನಲ್ಲಿ ಕೇಸ್​ …

Read More »

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …

Read More »

ಅಖಿಲೇಶ್ ಯಾದವ್ ಬಾಬುವಾಗಿಯೇ ಇರ್ತಾರೆ: ಯೋಗಿ ವ್ಯಂಗ್ಯ

ಲಕ್ನೋ: ಅಖಿಲೇಶ್ ಯಾದವ್ ಅವರು ತಮ್ಮ ಜೀವನುದ್ದಕ್ಕೂ ಚಿಕ್ಕ ಹುಡುಗನಾಗಿಯೇ(ಬಾಬು) ಇರುತ್ತಾನೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಖಿಲೇಶ್ ಯಾದವ್ ಅವರನ್ನು ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಸರ್ಕಾರದ ಯೋಜನೆಗಳನ್ನು ಮೇಲ್ವಿಚಾರಣೆ ನಿರ್ವಹಿಸಲು ಇ-ಡ್ಯಾಶ್‍ಬೋರ್ಡ್ ಬಳಸುತ್ತಿದ್ದಾರೆ ಎನ್ನುವುದು ತಿಳಿದಿರಲಿಲ್ಲ ಎಂದು ವ್ಯಂಗ್ಯವಾಡಿದರು. ಅಖಿಲೇಶ್ ಯಾದವ್ ಅವರು ಗ್ಯಾಜೆಟ್‍ಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಟ್ಯಾಬ್ಲೆಟ್‍ಗಳು ಮತ್ತು ಸ್ಮಾರ್ಟ್‍ಫೋನ್ ಗಳ ವಿತರಣೆಯನ್ನು ವಿಳಂಬ ಮಾಡಿದರು …

Read More »

ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್‌

ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.7 ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ …

Read More »

ರಾಜ್ಯದಲ್ಲಿ ಇಳಿಕೆಯತ್ತ ಕೋವಿಡ್‌ ಕೇಸ್‌ -ಇಂದಿನ ಪಾಸಿಟಿವಿಟಿ ರೇಟ್ ಶೇ.1.45

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಪ್ರಮಾಣ ಮುಂದುವರಿದಿದೆ. ನಿನ್ನೆಗಿಂತ ಮೂನ್ನೂರಕ್ಕೆ ಕೇಸ್ ಇಳಿಕೆಯಾಗಿವೆ. ಇಂದು ರಾಜ್ಯದಲ್ಲಿ 1,549 ಕೇಸ್ ದಾಖಲಾಗಿವೆ. ಪಾಸಿಟಿವ್ ರೇಟ್ ಪ್ರಮಾಣ 1.45%ಗೆ ಇಳಿದಿದೆ. ರಾಜ್ಯದಲ್ಲಿ ಇಂದು 90,688 ಕೋವಿಡ್ ಟೆಸ್ಟ್ ಆಗಿದ್ದು, 1549 ಕೇಸ್ ದಾಖಲಾಗಿದೆ. ಜೊತೆಗೆ 23 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕೇಸ್ ಕಡಿಮೆ ಆಗಿ ಸಾವಿನ ಪ್ರಮಾಣ ಕೂಡ ಕೋವಿಡ್ ಇಳಿಕೆಯ ಗ್ರಾಫ್ ಕಾಣ್ತಿದೆ. 

Read More »

ಗೋಕಾಕ : ತಾಲೂಕಾ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ದೇಶನೂರ ಅವರನ್ನು ಅಭಿನಂದಿಸುತ್ತಿವದು.

ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …

Read More »

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

ಕೋಲ್ಕತ್ತಾ: ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ, ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಗಿದ್ದಾರೆ. ಸಂಧ್ಯಾ ಮುಖರ್ಜಿ ಇಂದು ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಅವರು ದಾಖಲಾಗಿದ್ದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೋವಿಡ್ -19 ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಹೃದಯದ ಕಾಯಿಲೆ, ಬಹು-ಅಂಗಾಂಗಗಳ ವೈಫಲ್ಯ ಮೂಳೆಯಲ್ಲಿ ಮುರಿತವಾಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು …

Read More »

ಹಿಜಾಬ್ ತೆಗೆಯುವ ವಿಚಾರಕ್ಕೆ ಲಿಂಗರಾಜ್ ಕಾಲೇಜ ಸಿಬ್ಬಂದಿಗಳೊಂದಿಗೆ ವಿದ್ಯಾರ್ಥಿಗಳ ವಾಗ್ವಾದ

ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ …

Read More »

ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!

ನವದೆಹಲಿ:  ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …

Read More »