Breaking News

ರಾಷ್ಟ್ರೀಯ

ಬಸ್, ಹೋಟೆಲ್, ಚಿತ್ರೀಕರಣ ಪುನಾರಂಭ: ಮಾಲ್, ಈಜುಕೊಳ, ಸಿನಿಮಾ ಮಂದಿರಕ್ಕೆ ನಿರ್ಬಂಧ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಬಸ್ ಸಂಚಾರ ಸೇರಿ ಬಹುತೇಕ ಎಲ್ಲಾ ಚಟುವಟಿಕೆ ಪುನಾರಂಭವಾಗಲಿವೆ. ಬಸ್‌ ಮತ್ತು ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಿ ಶೇಕಡ 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳನ್ನು ಹೊರತುಪಡಿಸಿ 28 ಜಿಲ್ಲೆಗಳಲ್ಲಿ ಬಸ್ ಸಂಚಾರ ಶುರುವಾಗಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಬಸ್ ಗಳ ಸಂಖ್ಯೆ ಕೂಡ ವಿರಳವಾಗಿದೆ. ಇಂದಿನಿಂದ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ರಾಮಮಂದಿರ ಟ್ರಸ್ಟ್ ಇನ್ನಷ್ಟು ಭೂ ಹಗರಣ ಬಯಲಿಗೆ

ಲಕ್ನೋ, ಜೂನ್ 20: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತುಕೊಂಡಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿರುದ್ಧ ಗಂಭೀರ ಭೂಹಗರಣದ ಆರೋಪ ಕೇಳಿ ಬಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಈ ಟ್ರಸ್ಟ್‌ನ ಮೂಲಕ ಮಾಡಲಾಗುತ್ತಿದೆ. ಇದರಲ್ಲಿ 15 ಮಂದಿ ಸದಸ್ಯರಿದ್ದು ಇದರಲ್ಲಿ 12 ಮಂದಿ ಸದಸ್ಯರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ”ಆಸ್ತಿ ಖರೀದಿಯಲ್ಲಿ ಸುಮಾರು 16. 5ಕೋಟಿ ರು ಅವ್ಯವಹಾರ ನಡೆದಿದೆ,” …

Read More »

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದ ಭಕ್ತರಿಗೆ ಪೊಲೀಸರ ಎಚ್ಚರಿಕೆ

ಮಂಗಳೂರು, ಜೂನ್ 20; ಲಾಕ್‌ಡೌನ್ ನಡುವೆಯೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ದೇವಾಲಯಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ ನೊಟೀಸ್ ಕೊಟ್ಟಿದ್ದರು. ಈಗ ತೆರೆದಿದ್ದ ದೇವಾಲಯಗಳು ಪುನಃ ಬಾಗಿಲು ಮುಚ್ಚಿವೆ. ಈಗ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳಿಗೆ ಬರುವ ಭಕ್ತರ ವಾಹನವನ್ನು ಸೀಝ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ …

Read More »

81 ದಿನಗಳ ಬಳಿಕ 60 ಸಾವಿರಕ್ಕಿಂತ ಕಡಿಮೆ ಕೋವಿಡ್‌ ಪ್ರಕರಣ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ಕಳೆದ 24ಗಂಟೆಗಳಲ್ಲಿ 58,419 ಕೋವಿಡ್ ಪ್ರಕರಣ ವರದಿಯಾಗಿದ್ದು, 1,576 ಮಂದಿ ಸಾವನ್ನಪ್ಪಿದ್ದಾರೆ. 81 ದಿನಗಳಲ್ಲಿ ಇದೇ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣ ವರದಿಯಾಗಿದೆ. ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದೆ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕೇರಳದಲ್ಲಿ 12,443 ಪ್ರಕರಣ, ಮಹಾರಾಷ್ಟ್ರದಲ್ಲಿ 8,912 ಕೋವಿಡ್ …

Read More »

ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ

ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು …

Read More »

ನಿಮ್ಹಾನ್ಸ್‌ಗೆ ಡಾ. ಪ್ರತಿಮಾ ಮೂರ್ತಿ ನಿರ್ದೇಶಕಿ

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕರನ್ನಾಗಿ ಡಾ. ಪ್ರತಿಮಾ ಮೂರ್ತಿ ಅವರನ್ನು ಕೇಂದ್ರ ಆರೋಗ್ಯ ಸಚಿವಾಲಯ ನೇಮಕ ಮಾಡಿದೆ. ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ನಿರ್ದೇಶಕರ ಅವಧಿ 5 ವರ್ಷ ಇರಲಿದ್ದು, ಪ್ರತಿಮಾ ಅವರು 2026ರ ಮಾರ್ಚ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಡಾ.ವೈ.ಸಿ. ಜನಾರ್ದನ ರೆಡ್ಡಿ ಅವರನ್ನು ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ವರ್ಷ ಅ.4ರಂದು ಡಾ.ಬಿ.ಎನ್. ಗಂಗಾಧರ್ ನಿವೃತ್ತರಾದ ಬಳಿಕ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ- ಗೋಕಾಕ್ ಜಲಪಾತಕ್ಕೆ ಜೀವ ಕಳೆ

ಬೆಳಗಾವಿ: ಘಟ್ಟ ಪ್ರದೇಶ ಸೇರಿ ಜಿಲ್ಲೆಯ ಹಲವೆಡೆ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ನದಿ, ಹಳ್ಳ, ಕೆರೆಗಳು ಮೈದು0ಬಿವೆ. ಮೂರು ದಿನಗಳ ಮಳೆಗೆ ಗೋಕಾಕ್ ಜಲಪಾತಕ್ಕೆ ಸಹ ಜೀವ ಕಳೆ ಬಂದಿದ್ದು, ಧುಮ್ಮಿಕ್ಕಿ ಹರಿಯುತ್ತಿದೆ. ಕರ್ನಾಟಕದ ನಯಾಗರ ಎಂದೇ ಕರೆಯಲಾಗುವ ಗೋಕಾಕ್ ಜಲಪಾತ ಈಗ ಧುಮ್ಮಿಕ್ಕುತ್ತಿದ್ದು, ಕಣ್ಮನ ಸೆಳೆಯುತಿದ್ದೆ. ಘಟಪ್ರಭಾ ನದಿಯ ಸೌಂದರ್ಯ ಗೋಕಾಕ್ ಜಲಪಾತದಲ್ಲಿ ಗರಿಬಿಚ್ಚಿದೆ. ಸುತ್ತಲೂ ಹಚ್ಚ ಹಸಿರು ನಡುವೆ ನೀರ ಧಾರೆಯ ಸೊಬಗು, …

Read More »