ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ನಿನ್ನೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು. ಗಣತಂತ್ರದ ಸಂಭ್ರಮದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದ ಬಾನಂಗಳದಲ್ಲಿ ನೂರಾರು ಡ್ರೋಣ್ಗಳು ಭಾರತ ಧ್ವಜ ಸೇರಿ ವಿವಿಧ ರಚನೆಗಳನ್ನು ಮೂಡಿಸಿದವು. ಆಕರ್ಷಕ ಬಣ್ಣಗಳಲ್ಲಿ ಮೂಡಿಸಿದ ಚಿತ್ತಾರಗಳು ಗಣತಂತ್ರದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದವು. ಇನ್ನು ಈ ಎಲ್ಲ ಡ್ರೋಣ್ಗಳು ಭಾರತದಲ್ಲೇ ನಿರ್ಮಿತವಾದವು ಅನ್ನೋದು ವಿಶೇಷವಾಗಿತ್ತು. ಸದ್ಯ ಡ್ರೋಣ್ಗಳ ಮನಮೋಹಕ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ …
Read More »ಕಾಂಗ್ರೆಸ್ ಹೈಕಮಾಂಡ್ನಿಂದ ಬಿಗ್ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ಅವರ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …
Read More »‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್.ಅಶೋಕ್
ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …
Read More »ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು.
ಶ್ರೀನಗರ: 73ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು. ಭಾರತದ ಸ್ವಾತಂತ್ರ್ಯದ ನಂತರ ಗಡಿಯಾರ ಗೋಪುರದ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರುವುದು ಇದೇ ಮೊದಲು ಭಾರತದ 73 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಥಳೀಯ ಕಾರ್ಯಕರ್ತರಾದ ಸಾಜಿದ್ ಯೂಸುಫ್ ಶಾ ಮತ್ತು ಸಾಹಿಲ್ ಬಶೀರ್ ಅವರು ಸ್ಥಳೀಯರು ಎನ್ಜಿಒ ಮತ್ತು ಆಡಳಿತದೊಂದಿಗೆ ಲಾಲ್ ಚೌಕ್ ಪ್ರದೇಶದಲ್ಲಿ …
Read More »ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ
ಕೇರಳ : ಸಿಪಿಐ ನೇತೃತ್ವದ ಎಲ್ಡಿಎಫ್ನ ಮಿತ್ರಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್ (ಐಎನ್ಎಲ್) ನ ನಾಮನಿರ್ದೇಶಿತ ಶಾಸಕರಾದ ದೇವರಕೋವಿಲ್ ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ವಿಶೇಷವೆಂದರೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ಯಾರೂ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ. ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತಲೆಕೆಳಗಾಗಿದ್ದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ನಂತರ ತಮ್ಮ ಭಾಷಣಕ್ಕೆ ಮುಂದಾದರು. ಇದರ …
Read More »ಕ್ರೀಡೆಯಲ್ಲಿ ಮಿಂಚಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿರುವ ಭಾರತದ ಮಹಿಳಾ ಕ್ರೀಡಾಪಟು
ಭಾರತದ ಮಹಿಳೆಯರು ಕ್ರೀಡಾ ಲೋಕದಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ. ಭಾರತೀಯ ಮಹಿಳಾ ಆಟಗಾರ್ತಿಯರು ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದಿದ್ದಾರೆ. ಅದು ಬಾಕ್ಸಿಂಗ್ ಅಥವಾ ವೇಟ್ ಲಿಫ್ಟಿಂಗ್ ಅಥವಾ ಅಥ್ಲೆಟಿಕ್ಸ್ ಆಗಿರಲಿ. ಭಾರತದ ಮಹಿಳೆಯರು ಪ್ರತಿ ಪಂದ್ಯದಲ್ಲೂ ಮುಂದಿದ್ದಾರೆ. ಇದಕ್ಕಾಗಿ ಬಹುಮಾನವನ್ನೂ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ …
Read More »ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ
ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ. ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ …
Read More »ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ
ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …
Read More »ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.
ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.
Read More »ಭೂಮಿಯ ಮೇಲೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ಶಾಶ್ವತವಾಗಿಸಲು ಸರಕಾರ ಕ್ರಮ-ಸಚಿವ ಗೋವಿಂದ ಕಾರಜೋಳ್
ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ …
Read More »
Laxmi News 24×7