ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …
Read More »ಎಂಇಎಸ್ನಿಂದ ಕರಾಳ ದಿನ: 46 ಮಂದಿ ವಿರುದ್ಧ ದೂರು
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನಗರದಲ್ಲಿ ನ.1ರಂದು ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ 46 ನಾಯಕರು ಸೇರಿ ಹಲವರ ವಿರುದ್ಧ ಇಲ್ಲಿನ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯೋತ್ಸವ ದಿನದಂದೇ ಎಂಇಎಸ್ನವರು ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ಬಾರಿ ಅದಕ್ಕೆ ಅನುಮತಿ ಕೋರಿ ಬಂದಿದ್ದ ಎಂಇಎಸ್ ನಿಯೋಗಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಯಾವ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ’ ಎಂದು ತಿಳಿಸಿದ್ದರು. ನಗರ ಪೊಲೀಸ್ …
Read More »ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್
ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ …
Read More »ಬಿಜೆಪಿ ಅಧೋಗತಿಗೆ ತಳ್ಳಿದ್ದ ಸಾರಿಗೆ ನಿಗಮಗಳಿಗೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ
ಬೆಂಗಳೂರು, ನವೆಂಬರ್ 02: ಶಕ್ತಿ ಯೋಜನೆ ಮರು ಪರಿಶೀಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ರಾಜ್ಯಾದ್ಯಂತೆ ಶಕ್ತಿ ಯೋಜನೆ ಕಿಡಿ ಹೊತ್ತಿಕೊಂಡಿದೆ. ಆರೋಪ, ಪ್ರತ್ಯಾರೋಪಗಳ ಮಧ್ಯೆ ಸವಾಲೆಸೆಯುವುದು, ಬಹಿರಂಗ ಚರ್ಚೆಗೆ ಆಹ್ವಾನ ನಡೆದಿದೆ. ಈ ಮಧ್ಯೆ ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಟ್ವೀಟ್ ಮೂಲಕ ಕಿರಿ ಕಾರಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಆರ್.ಅಶೋಕ್ ಅವರೆ …
Read More »Waqf Board ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ: ಗೃಹಸಚಿವ
ಬೆಂಗಳೂರು: ವಕ್ಫ್ ಮಂಡಳಿ (Waqf Board) ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ (DR. G. Parameshwar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ (DR. G. Parameshwar), ವಕ್ಫ್ ಮಂಡಳಿ (waqf Board) ಆಸ್ತಿ ವಿಚಾರ ಸದ್ಯ ಮುಗಿದು ಹೋದ …
Read More »ನವೆಂಬರ್ 1ರಿಂದ ಹೊಸ ರೂಲ್ಸ್ ; ಇನ್ಮುಂದೆ ‘ಫೋನ್ ನಂಬರ್’ಗೆ ‘OTP’ ಬರೋದಿಲ್ಲ
ನವದೆಹಲಿ : OTP (ಒನ್ ಟೈಮ್ ಪಾಸ್ವರ್ಡ್) ಪರಿಶೀಲನೆ ಪ್ರಕ್ರಿಯೆಯು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಬಹಳ ಮಹತ್ವದ್ದಾಗಿದೆ. ಎಲ್ಲಾ ರೀತಿಯ ಸೇವೆಗಳು ಆನ್ಲೈನ್’ನಲ್ಲಿ ಲಭ್ಯವಿದ್ದರೂ, ಬಳಕೆದಾರರನ್ನು OTP ಯೊಂದಿಗೆ ಗುರುತಿಸಲಾಗುತ್ತದೆ. ಭಾರತದಲ್ಲಿ ಹೆಚ್ಚಿನ ಆನ್ಲೈನ್ ವಹಿವಾಟುಗಳು ಭದ್ರತೆಗಾಗಿ OTP ಪರಿಶೀಲನೆಯನ್ನ ಅವಲಂಬಿಸಿವೆ. ಆದಾಗ್ಯೂ, ಡಿಜಿಟಲ್ ಭದ್ರತೆ ಮತ್ತು ವಂಚನೆಯನ್ನ ತಡೆಯುವ ಉದ್ದೇಶದಿಂದ ಟೆಲಿಕಾಂ ಕಂಪನಿಗಳು ನವೆಂಬರ್ 1 ರಿಂದ ಹೊಸ ನಿಯಮಗಳನ್ನ ಜಾರಿಗೆ ತರಲು ಸಿದ್ಧವಾಗಿವೆ. ಈ ಕಾರಣದಿಂದಾಗಿ, OTP …
Read More »ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯ ವರ್ತನೆ
ಬೆಂಗಳೂರು : ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ ಬಂದಿದ್ದು, ಅದನ್ನು ತೆಗೆದುಕೊಳ್ಳಲು ಹೊರಗಡೆ ಬಂದ ಯುವತಿ ಜೊತೆ ಸೆಕ್ಯೂರಿಟಿ ಗಾರ್ಡ್ ಅಸಭ್ಯವಾಗಿ ವರ್ತಿಸಿದ್ದು, ಘಟನೆ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ …
Read More »ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ: ಸಚಿವ ಬೈರತಿಗೆ ಶೋಭಾ ಸವಾಲು
ಬೆಳಗಾವಿ: ‘ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ’ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಸಚಿವ ಬೈರತಿ ಸುರೇಶ್ ಅವರಿಗೆ ಸವಾಲು ಹಾಕಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೈರತಿ ಸುರೇಶ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಾವಿರಾರು ಕಡತಗಳನ್ನು ತಂದು, ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಬೇರೆ ಬೇರೆ ಆರೋಪ …
Read More »ವಿಧಾನ ಪರಿಷತ್ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ …
Read More »ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದರೆ ನ್ಯಾಯಾಧೀಶರು ಹೇಳಿದ್ದೇನು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರ ಪ್ರತಿಕ್ರಿಯೆ ಏನಿತ್ತು ಇಲ್ಲಿದೆ ವಿವರ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ …
Read More »