Breaking News

ರಾಷ್ಟ್ರೀಯ

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ

  ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …

Read More »

ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..

ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ‌ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

Read More »

ಕೊರೊನಾ ಮಹಾಸ್ಫೋಟ: ವಿಜಯಪುರದಲ್ಲಿ 121 ಜನ್ರಿಗೆ ಕೊರೊನಾ ಸೋಂಕು

ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ …

Read More »

ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ

ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …

Read More »

ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್

ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು …

Read More »

ಕೊರೊನಾ ಪೀಕ್‍ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್

ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್‍ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …

Read More »

ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ

ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …

Read More »

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್‌ಗಳ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್‌ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್‌ ಸುಲ್ತಾಪುರ ರಸ್ತೆಯಲ್ಲಿ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …

Read More »

ಬೆಳಗಾವಿ: ಕಣಕುಂಬಿಯಲ್ಲಿ ಮರಕ್ಕೆ ಅಪ್ಪಿಳಿಸದ ಕಾರು: ಸ್ಥಳದಲ್ಲೇ ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ಕೈ ತಪ್ಪಿ ಕಾರೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ ಮಹಿಳೋರ್ವಳು ಸ್ಥಳದಲ್ಲೇ ಅಸುನೀಗಿರುವ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.   ಗುಲಾಬಿ ಪಾಂಡುರಂಗ ಗವಸ್( 38) ಮೃತ ಮಹಿಳೆ. ಸಂಬಂಧಿಕರ ಮನೆಯಲ್ಲಿಕಾರ್ಯಕ್ರಮ ಮುಗಿಸಿಕೊಂಡು ಬೆಳಗಾವಿ ಆಗಮಿಸುವ ವೇಳೆಯಲ್ಲಿ ಕಣಕುಂಬಿ ಪ್ರವಾಸಿ ಮಂದಿರದ ಬಳಿಯ ಈ ಅವಘಡ ಸಂಭವಿಸಿದೆ. ಕಾರನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ.   ವೇಗವಾಗಿ ಚಲಿಸುತ್ತಿದ್ದ ಕಾರು ಬೃಹತ್‌ ತಿರುವಿನಲ್ಲಿ ಚಾಲಕನ …

Read More »

ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

ತುರ್ತು ಪರಿಸ್ಥಿತಿಯಲ್ಲಿ  ಷರತ್ತುಬದ್ಧ ಅನುಮತಿ ಪಡೆದಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳಿಗೆ ಸಂಪೂರ್ಣವಾಗಿ ನಿಯಮಿತ ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡುವಂತೆ ಭಾರತದ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಲಸಿಕೆಗಳಿಗೆ ಮಾರುಕಟ್ಟೆ ದೃಢೀಕರಣ ಸಿಕ್ಕರೆ, ಅವು ಔಷಧ ಮಾರುಕಟ್ಟೆಯಲ್ಲಿ ಸಿಗಲಿವೆ. ಸೀರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​  ಲಸಿಕೆಗಳ ಸ್ಥಿತಿಯನ್ನು ಅಪ್​ಗ್ರೇಡ್ ಮಾಡಬೇಕು ಅಂದರೆ, ಸದ್ಯ ಅವುಗಳನ್ನು ತುರ್ತುಸಂದರ್ಭದಲ್ಲಿ ವಯಸ್ಕರಿಗೆ ಷರತ್ತುಬದ್ಧವಾಗಿ, ನಿಯಂತ್ರಿತವಾಗಿ ನೀಡಲಾಗುತ್ತಿದೆ.  …

Read More »