ರಾಷ್ಟ್ರೀಯ

ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್​ ಚಾಟಿ2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ ಎಂದು ಕಟುವಾಗಿ ಟೀಕಿಸಿದೆ. 2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬೀದರ್​​ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ …

Read More »

ಸ್ನೇಹಿತರ ಜೊತೆಗೂಡಿ ಎಣ್ಣೆ ಪಾರ್ಟಿ.. ಮತ್ತೇರಿದ ಮೇಲೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..

ಹೊಸಕೋಟೆ (ಬೆಂ.ಗ್ರಾ) : ಅವಾಚ್ಯ ಪದಗಳಿಂದ ನಿಂದಿಸಿದ ಎಂದು ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆ.ಸತ್ಯವಾರ ಗ್ರಾಮದಲ್ಲಿ ನಡೆದಿದೆ. ಎಣ್ಣೆ ಪಾರ್ಟಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಸ್ನೇಹಿತರೇ ಸೇರಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ದಾವಣಗೆರೆ ಮೂಲದ ಸುಧಾಕರ್ (43) ಎಂಬುವರು ಕೊಲೆಯಾಗಿರುವ ದುರ್ದೈವಿ. ಕೆ.ಸತ್ಯವಾರ ಗ್ರಾಮದ ನಾಗಭೂಷಣ್ ಅಲಿಯಾಸ್ ನಾಗ, ಚಂದ್ರಶೇಖರ್ ಅಲಿಯಾಸ್ …

Read More »

#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!

ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ‌ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲಾಡಳಿತ …

Read More »

‘ಲಕ ಲಕ ಲಂಬರ್ಗಿನಿ’ ಎನ್ನುತ್ತಾ ಚಂದನ್​ ಶೆಟ್ಟಿ ಜೊತೆ ಸೊಂಟ ಬಳುಕಿಸಿದ ಡಿಂಪಲ್​ ಕ್ವೀನ್

ರಾಜಾ-ರಾಣಿ ಶೋನಲ್ಲಿ ಬ್ಯುಸಿಯಾಗಿದ್ದ ಚಂದನ್​ ಯಾವುದೇ ಆಲ್ಬಂ ಸಾಂಗ್​ಗಳನ್ನ ಘೋಷಣೆ ಮಾಡಿರಲಿಲ್ಲ. ಇತ್ತೀಚಿಗೆ ಶೋ ಗ್ರ್ಯಾಂಡ್​ ಆಗಿ ಎಂಡ್​ ಆಗಿದ್ದು, ಚಂದನ್​-ನಿವೇದಿತಾ ಮೂರನೇ ಸ್ಥಾನ ಪಡೆಯುವುದರ ಮೂಲಕ ಜನರ ಮನಸ್ಸನ್ನ ಗೆದ್ದಿದ್ದರು. ಈಗ ಚಂದನ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಒಂದನ್ನ ನೀಡಿದ್ದಾರೆ. ರಾಪರ್​ ಚಂದನ್​ ಶೆಟ್ಟಿ ಅವರು ಏನೇ ಮಾಡಿದ್ರು ಸಖತ್​ ಡಿಫರೆಂಟ್​ ಆಗಿ ಮಾಡ್ತಾರೆ. ಕ್ಯಾಚಿ ಸಾಹಿತ್ಯ, ಅದ್ಧೂರಿ ಸೆಟ್​, ಕಾಸ್ಟೂಮ್​ಗಳು ಅವರ ಆಲ್ಬಂ ಸಾಂಗ್ಸ್​ಗಳಲ್ಲಿ ನೀವು ನೋಡಿರ್ತಿರಾ. ಇನ್ನು …

Read More »

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ …

Read More »

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು …

Read More »

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.

Read More »

ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ತಂಡವೊಂದರ ಪಾಲಾಗಲಿದ್ದಾರೆ ಕನ್ನಡಿಗ ಕೆಎಲ್ ರಾಹುಲ್..?

15ನೇ ಆವೃತ್ತಿಯ ಐಪಿಎಲ್‌ಗೆ ಆಟಗಾರರ ರಿಟೇನ್ ಪಟ್ಟಿ ಅಂತಿಮ ಹಂತದಲ್ಲಿದೆ. ಹಾಲಿ 8 ತಂಡಗಳಿಗೆ ತಲಾ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಟಗಾರರು ಬೇಕಿದ್ದರಷ್ಟೇ ತಮ್ಮ ಫ್ರಾಂಚೈಸಿಗಳೊಂದಿಗೆ ಒಪ್ಪಂದ ಮುಂದುವರಿಸಬಹುದು. ಇಲ್ಲವಾದರೆ ಹರಾಜಿಗೆ ದಾಖಲಿಸಬಹುದು. ಈ ಬಾರಿ ಲಖನೌ ಹಾಗೂ ಅಹಮದಾಬಾದ್ ತಂಡಗಳು ಕೂಡ ಸೇರ್ಪಡೆಗೊಂಡಿದ್ದು, ಸ್ಟಾರ್ ಆಟಗಾರರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ತಂಡದಿಂದ …

Read More »

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -​ಸಂಭ್ರಮದಲ್ಲಿ ಮುಳುಗಿದ ರೈತರು 

ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …

Read More »

ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ವೇಳೆ ಮೃತ ಸಿದ್ದರಾಜುವಿಗೆ ರಾತ್ರಿ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ವಿಷಯ ತಿಳಿದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಭೇಟಿ …

Read More »