ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ. ತನ್ಮೂಲಕ, ನಾಯಿಯೊಂದು ತನ್ನ ಪ್ರಾಣ ತೆತ್ತು ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ. ಶುಕ್ರವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಶಿವಬಸವ ನಗರದ ಹೆಸ್ಕಾಮ್ ಕಲ್ಯಾಣ ಮಂಟಪವಿರುವ ಮುಖ್ಯ ರಸ್ತೆಯ ಬದಿಯ ಫುಟ್ ಪಾಥ್ ಮೇಲೆ ಜೀವಂತ ತಂತಿ ಬಿದ್ದಿತ್ತು. ಡಾ.ರಾಜು ನಾಯಕ ಅವರ ಜೆರ್ಮನ್ …
Read More »ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ
ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆ ಕಸರತ್ತು ಆರಂಭವಾಗಿದ್ದು, ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ. ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತು ಆರೋಗ್ಯ ಸಚಿವ ಡಾ.ರಘು ಶರ್ಮಾ ಮತ್ತು ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಸ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ರಾಜೀನಾಮೆ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ. ರಾಜಸ್ಥಾನ ಸಚಿವ ಸಂಪುಟದ ಮೂವರು ಸಚಿವರು ರಾಜೀನಾಮೆ ನೀಡಿದ್ದು, …
Read More »ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,
*ಚಿಕ್ಕೋಡಿ ಬ್ರೇಕಿಂಗ್* ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ, ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ, ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ, ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ, ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …
Read More »ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ
ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ …
Read More »ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ
ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಯ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ ಹೋಗಿ ತಲುಪಿದೆ. ಆಕಾಂಕ್ಷಿಗಳ ಮಧ್ಯೆ ಹೆಚ್ಚಿದ ಪೈಪೋಟಿ, ಮುಖಂಡರಲ್ಲಿ ಒಮ್ಮತ ಮೂಡದಿರುವುದರಿಂದ ಅಭ್ಯರ್ಥಿ ಘೋಷಣೆಗೆ ವಿಳಂಬವಾಗುತ್ತಿದ್ದು, ಜಿಲ್ಲೆಯ ಮುಖಂಡರೊಂದಿಗೆ ಆಕಾಂಕ್ಷಿಗಳು ಸಹ ಗುರುವಾರ ದೆಹಲಿಗೆ ದೌಡಾಯಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಅ ಧಿಸೂಚನೆ ಪ್ರಕಟವಾಗಿ ಕೆಲ ದಿನ ಕಳೆದರೂ, ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಮುಖ್ಯವಾಗಿ ಕಾಂಗ್ರೆಸ್ …
Read More »ವಿಧಾನ ಪರಿಷತ್ ಚುನಾವಣೆ: ಲಿಂಗಾಯತ ಅಭ್ಯರ್ಥಿಗಳಿಗೆ ಕಾಂಗ್ರೆಸ್, ಬಿಜೆಪಿ ಮನ್ನಣೆ; ಇತರ ಸಮುದಾಯಗಳ ಕಡೆಗಣನೆ!
ಬೆಳಗಾವಿ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ವಿವಿಧ ಪ್ರಬಲ ಸಮುದಾಯಗಳಿಂದ ಬೆಂಬಲ ಸಿಗುತ್ತಿದ್ದರೂ, ಈ ಭಾಗದ ನಾಲ್ಕು ಪ್ರಮುಖ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎರಡೂ ಪಕ್ಷಗಳು ಪ್ರಭಾವಿ ಲಿಂಗಾಯತ ಮುಖಂಡರನ್ನು ಕಣಕ್ಕಿಳಿಸಲು ಮುಂದಾಗಿವೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಬಹುತೇಕ ಹಾಲಿ ವಿಧಾನ ಪರಿಷತ್ ಸದಸ್ಯರು ಲಿಂಗಾಯತ ಸಮುದಾಯದವರಾಗಿದ್ದಾರೆ. ಬೆಳಗಾವಿ/ಚಿಕ್ಕೋಡಿ, ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ, ವಿಜಯಪುರ-ಬಾಗಲಕೋಟ ಮತ್ತು ಕಲಬುರ್ಗಿ ಮತ್ತು ಯಾದಗಿರಿಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಬಹುತೇಕ ಹಾಲಿ ಎಂಎಲ್ಸಿಗಳು …
Read More »ಸಂಸತ್ ನಲ್ಲಿ ಘೋಷಣೆ ಮಾಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ : ರಾಕೇಶ್ ಟಿಕಾಯತ
ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ. ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ …
Read More »ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್
ನವದೆಹಲಿ, ನವೆಂಬರ್ 19: ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಹೇಳಿದರು. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ …
Read More »ತಿರುಮಲ ತಿರುಪತಿಯಲ್ಲಿ ಭಾರಿ ಮಳೆ
ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್ಪಾಸ್ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್ಪೋರ್ಟ್ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ …
Read More »ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ
ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು. ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್ಕಾಯಿನ್ ಅಥವಾ …
Read More »
Laxmi News 24×7