Breaking News

ರಾಷ್ಟ್ರೀಯ

ಹಿಂಸಾಚಾರ ಸಹಿಸಲು ಸಾಧ್ಯವಿಲ್ಲ: ಅಮಿತ್ ಶಾ ಭೇಟಿ ಬಳಿಕ ಚನ್ನಿ ಹೇಳಿಕೆ

ನವದೆಹಲಿ, ಅಕ್ಟೋಬರ್‌ 06: ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ದೆಹಲಿಯ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಸಭೆಯ ನಂತರ ಮಾತನಾಡಿದ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ, “ನಾನು ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದೆ. ಕೇಂದ್ರ ಸರ್ಕಾರದ ಮೂರು …

Read More »

ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು

* ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು 06/10/2021 ಬುಧವಾರ : ಅಶ್ವಿಜ ಶುದ್ಧ ಪ್ರತಿಪದಾ   ನವರಾತ್ರಿ ಪ್ರಾರಂಭ   07/10/2021 ಗುರುವಾರ : ಘಟಸ್ಥಾಪನೆ   10/10/2021 ಭಾನುವಾರ : ಲಲಿತಾ ಪಂಚಮಿ   13/10/2021 ಬುಧವಾರ   ( ಉಪಾಂಗ ಲಲಿತಾ ವೃತ್ತಂ ) : ದುರ್ಗಾಷ್ಟಮಿ   – ನವಚಂಡಿ ಹವನ ರಾತ್ರಿ ಪ್ರಾರಂಭ …

Read More »

ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಮೈಸೂರಲ್ಲಿ ಮಹಿಷಾ ದಸರಾ ಆಚರಣೆ

ಮೈಸೂರು: ಜಿಲ್ಲಾಡಳಿತದ ವಿರೋಧದ ನಡುವೆಯೂ ಪೊಲೀಸರ ಬಿಗಿ ಬಂದೋಬಸ್ತ್​​ನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮಷಿಷಾ ದಸರಾಗೆ ಚಾಲನೆ ಸಿಕ್ಕಿದ್ದು ನಗರದ ಬುದ್ಧ ವಿಹಾರದಿಂದ ಮಹಿಷಾ ಮೆರವಣಿಗೆ ಆರಂಭವಾಗಿದೆ.     ಮೊದಲ ಬಾರಿಗೆ ಮಹಿಷಾಸುರ ಪ್ರತಿಮೆ ನಿರ್ಮಿಸಿ ಮೆರವಣಿಗೆ ಮಾಡಲಾಗುತ್ತಿದ್ದು, ಮಹಿಷಾಸುರ ಪಂಚಲೋಹದ ವಿಗ್ರಹಕ್ಕೆ ಪುಷ್ಪಾರ್ಚನೆ‌ ಸಲ್ಲಿಸಿ ಬುದ್ದವಿಹಾರದಿಂದ ಅಶೋಕಪುರಂ ಪಾರ್ಕ್‌ವರೆಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಪೀಠಾಧಿಪಾತಿ ಜ್ಞಾನಪ್ರಕಾಶ ಸ್ವಾಮೀಜಿ, ಮಾಜಿ ಮೇಯರ್ ಪುರುಷೋತ್ತಮ್ …

Read More »

ಕೆಲವೇ ಗಂಟೆಗಳಲ್ಲಿ 6 ಬಿಲಿಯನ್ ಡಾಲರ್‌ಗಳಷ್ಟು ನಷ್ಟ ಅನುಭವಿಸಿದ ಜುಕರ್‌ಬರ್ಗ್

ವಾಷಿಂಗ್ಟನ್: ಫೇಸ್‌ಬುಕ್‌ ಒಡೆತನದ ಸೋಷಿಯಲ್‌ ಮೀಡಿಯಾ ವೇದಿಕೆಗಳ ಸೇವೆಯಲ್ಲಿ ಸೋಮವಾರ ವ್ಯತ್ಯಯವಾಗಿದ್ದರಿಂದ ಮಾರ್ಕ್‌ ಜುಕರ್‌ಬರ್ಗ್‌ ಅವರಿಗೆ ಸುಮಾರು 6 ಬಿಲಿಯನ್‌ ಡಾಲರ್‌ (44,728 ಕೋಟಿ ರೂ.) ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಸೋಮವಾರ ಕೆಲವೇ ಗಂಟೆಗಳ ಅವಧಿಯಲ್ಲಿನ ಸೇವೆ ವ್ಯತ್ಯಯದಿಂದಾಗಿ ಕೋಟ್ಯಂತರ ನಷ್ಟವಾಗಿದೆ. ಪರಿಣಾಮವಾಗಿ ಜುಕರ್‌ಬರ್ಗ್‌ ಅವರು ವಿಶ್ವದ ಸಿರಿವಂತರ ಪಟ್ಟಿಯಲ್ಲಿಯೂ ಕೆಲವು ಸ್ಥಾನ‌ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಫೇಸ್‌ಬುಕ್‌ನ ಷೇರು ಮೌಲ್ಯ ಸೋಮವಾರ ಒಂದೇ ದಿನ ಶೇ. 4.9 ರಷ್ಟು …

Read More »

ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

ರಾಯಚೂರು: ಮಾನ್ವಿ ಪಟ್ಟಣದ ಪಕ್ಷಿ ಪ್ರೇಮಿ ಪಬ್ಲಿಕ್ ಹೀರೋ ಸಲ್ಲಾವುದ್ದೀನ್ ಗಾಯಗೊಂಡಿದ್ದ ನವಿಲೊಂದನ್ನ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡಿ ಪುನಃ ಕಾಡಿಗೆ ಬಿಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಪಕ್ಷಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಸಲ್ಲಾವುದ್ದೀನ್ ಈಗ ನವಿಲೊಂದಕ್ಕೆ ಪುನರ್ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಮಾನ್ವಿ ತಾಲೂಕಿನ ಬಾಪೂರಿನ ಜಮೀನೊಂದರಲ್ಲಿ ಅನಾರೋಗ್ಯದಿಂದ ಬಿದ್ದಿದ್ದ ನವಿಲನ್ನು ಸ್ಥಳೀಯರಾದ ಫಯಾಜ್ ರುಮಾಲ್ ವಾಲೆ ಹಾಗೂ ಅವರ ಸ್ನೇಹಿತರು ಸಲ್ಲಾವುದ್ದೀನ್ ಅವರಿಗೆ ತಂದು ಒಪ್ಪಿಸಿದ್ದಾರೆ. ಬಳಿಕ …

Read More »

ಮಕ್ಕಳಿಂದ ಅನುಕಂಪ ಗಿಟ್ಟಿಸಿ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್, 5 ಮಕ್ಕಳು ಬಾಲಮಂದಿರಕ್ಕೆ ಶಿಫ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಖತರ್ನಾಕ್ ಕಳ್ಳಿಯ ಬಂಧನವಾಗಿದೆ. ಆರ್.ಟಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಲಕ್ಷ್ಮೀಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಲಕ್ಷ್ಮೀ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೊಲೀಸರಿಗೆ ಸಿಕ್ಕಿಬಿದ್ದಾಗ ಮಕ್ಕಳಿದ್ದಾರೆ, ಗರ್ಭಿಣಿ ಎಂದು ಅನುಕಂಪದ ಅಸ್ತ್ರ ಪ್ರಯೋಗ ಮಾಡಿದ್ದಾಳೆ. ಆದ್ರೆ ಕಳ್ಳಿಯ ಚಲಾಕಿತನ ತಿಳಿದಿದ್ದ ಪೊಲೀಸರು ಅನುಕಂಪದ ಅಲೆಗೆ ಮೋಸ ಹೋಗಿಲ್ಲ. ಆರೋಪಿ ಲಕ್ಷ್ಮೀಗೆ ಬರೋಬ್ಬರಿ ಆರು ಮಕ್ಕಳಿದ್ದಾರೆ. ಕಳ್ಳಿ ಲಕ್ಷ್ಮೀಯಿಂದ ಪೊಲೀಸರು ಮಕ್ಕಳನ್ನು …

Read More »

ರಾಜ್ಯಸಭೆಯ ಕೊನೆಯ 7 ಅಧಿವೇಶನಗಳಲ್ಲಿ ಶೇ100 ಹಾಜರಾತಿ ಪಡೆದ ಏಕೈಕ ಸಂಸದ ಎಸ್‌ ಆರ್ ಬಾಲಸುಬ್ರಮಣ್ಯಂ 

ದೆಹಲಿ: ಶೇಕಡಾ 78 ರಷ್ಟು ರಾಜ್ಯಸಭಾ (Rajya Sabha) ಸದಸ್ಯರು ಸದನದ ಕಲಾಪಗಳಿಗೆ ಪ್ರತಿನಿತ್ಯ ಹಾಜರಾಗುತ್ತಿದ್ದರು ಎಂದು ಸದನದ ಸೆಕ್ರೆಟರಿಯಟ್ ನಡೆಸಿದ ಅಧ್ಯಯನವು ತೋರಿಸಿದೆ. ಸಂಸತ್ತಿನ ಮೇಲ್ಮನೆಯಲ್ಲಿ ಸಂಸದರ ಹಾಜರಾತಿಯ ವಿಶ್ಲೇಷಣೆ ಪ್ರಕಾರ ಎಐಎಡಿಎಂಕೆ (AIADMK) ಸದಸ್ಯ ಎಸ್‌ಆರ್ ಬಾಲಸುಬ್ರಮಣ್ಯಂ(SR Balasubramaniam) ಅಧಿವೇಶನಕ್ಕೆ ತಪ್ಪದೇ ಹಾಜರಾಗುವ ರಾಜ್ಯಸಭಾ ಸದಸ್ಯರು ಎಂದು ಹೇಳಿದೆ. ಅಧ್ಯಯನದ ಪ್ರಕಾರ 75ರ ಹರೆಯದ ಬಾಲಸುಬ್ರಮಣ್ಯಂ ಈ 7 ಅಧಿವೇಶನಗಳ ಎಲ್ಲಾ 138 ಕಲಾಪಗಳಲ್ಲಿ ಭಾಗವಹಿಸಿದರು. ಒಂದು …

Read More »

ತಿರುಪತಿಗೆಂದು ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ – ಯುವಕನಿಗೆ 5 ವರ್ಷ ಜೈಲು!

ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ …

Read More »

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ; ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ. ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು …

Read More »

WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ …

Read More »