Breaking News

ರಾಷ್ಟ್ರೀಯ

ನರೇಂದ್ರ ಗಿರಿ ಅಸಹಜ ಸಾವು ಕೇಸ್; FIR ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ: ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ ಭಾರತೀಯ ಅಖಾಡ ಪರಿಷದ್ ಅಧ್ಯಕ್ಷ ನರೇಂದ್ರಗಿರಿ ಅಸಹಜ ಸಾವಿನ ತನಿಖೆಯನ್ನ ಇಂದಿನಿಂದ ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿದೆ. ತನಿಖೆ ಹಿನ್ನೆಲೆಯಲ್ಲಿ 6 ಅಧಿಕಾರಿಗಳ ನೇತೃತ್ವದ ತಂಡ ಪ್ರಯಾಗ್​ರಾಜ್​ ನಗರಕ್ಕೆ ಆಗಮಿಸಿದ್ದು, ಪ್ರಕರಣ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿದೆ. ಕಳೆದ ಸೋಮವಾರ ಬಘಮಬರಿ ಗದ್ದಿ ಮಠದಲ್ಲಿರುವ ರೂಮಿನಲ್ಲಿ ನರೇಂದ್ರ ಗಿರಿಯ ಶವ ಪತ್ತೆಯಾಗಿತ್ತು. ನರೇಂದ್ರ ಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಡೆತ್​ನೋಟ್ ಕೂಡ ಸಿಕ್ಕಿದೆ. ಇನ್ನು …

Read More »

ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …

Read More »

“ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರದ ಬಗ್ಗೆ ಆತಂಕ ಬೇಡ”

ಬೆಂಗಳೂರು- ಮಕ್ಕಳಲ್ಲಿ ಇತ್ತೀಚೆಗೆ ಹೆಚ್ಚಾಗಿ ವೈರಲ್ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್ ಮತ್ತು ಡೆಂಗ್ಯು ಜ್ವರದ ಲಕ್ಷಣಗಳೇ ಕಂಡುಬರುತ್ತಿದ್ದು ಮಕ್ಕಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರುತ್ತಿದೆ. ಹಾಗಾದರೆ ಇದು ಕೊರೋನಾ ರೂಪಾಂತರಿಯೇ ಎಂಬ ಸಂಶಯ, ಭಯ ಸಾರ್ವಜನಿಕರನ್ನು ಕಾಡುತ್ತಿದೆ. ಸಾಮಾನ್ಯವಾಗಿ ಮಳೆಗಾಲ, ಚಳಿಗಾಲ, ಬೇಸಿಗೆಕಾಲಗಳಲ್ಲಿ ಋತುಗಳು ಬದಲಾದಾಗ ಶೀತ, ನೆಗಡಿ- ಜ್ವರ ಬರುವುದು ಸಾಮಾನ್ಯ. ಆದರೆ ಇತ್ತೀಚೆಗೆ ಬರುತ್ತಿರುವ ಜ್ವರ ಅದರಲ್ಲೂ ಮಕ್ಕಳಲ್ಲಿ ಮಾತ್ರ ದೀರ್ಘಕಾಲ ಇದೆ. ಶಿಶುಗಳಿಂದ ಹಿಡಿದು …

Read More »

ಎತ್ತಿನಗಾಡಿ ಚಲೋ ಆಯ್ತು, ಸೈಕಲ್ ಜಾಥಾ ಆಯ್ತು, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ!

ಬೆಂಗಳೂರು: ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಕೈ ನಾಯಕರು, ಮೇಲಿಂದ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎತ್ತಿನಗಾಡಿ ಚಲೋ, ಸೈಕಲ್ ಜಾಥಾ ಬಳಿಕ, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ ನಡೆಯುತ್ತಿದೆ. ಮೂರನೇ ಬಾರಿ ವಿಧಾನಸೌಧಕ್ಕೆ ಟಾಂಗದಲ್ಲಿ ಬರುವ ಮೂಲಕ ವಿನೂತನ ಹೋರಾಟಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ವಿಪಕ್ಷ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ. ಟಾಂಗ ಜಾಥಾ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

Read More »

ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ ಎಂದು ಶಿಕ್ಷಣಾಧಿಕಾರಿ ಕಾಲು ಹಿಡಿದ ವಿದ್ಯಾರ್ಥಿಗಳು

ಗದಗ: ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರಿಲ್ಲ. ‘ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಲು ಹಿಡಿದು ವಿದ್ಯಾರ್ಥಿಗಳು ಗೋಳಾಡಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರ ಕೊರತೆ ಇದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ನೇಮಕ ಮಾಡಿ ಎಂದು ಗದಗ ಬಿಇಒ ಎಂ.ಎ.ರಡ್ಡೇರ್‌ಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ ಬಿಇಒಗೆ …

Read More »

ಮೋದಿ-ಕಮಲಾ ಹ್ಯಾರೀಸ್ ದ್ವಿಪಕ್ಷೀಯ ಮಾತುಕತೆ; ಇಂಡೋ-ಫೆಸಿಫಿಕ್ ಪ್ರದೇಶದ ​ಬಗ್ಗೆ ಫೋಕಸ್

ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು​ ಭೇಟಿಯಾದರು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇಬ್ಬರು ನಾಯಕರುಗಳು ಇಂಡೋ-ಫೆಸಿಫಿಕ್​  ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ಅಭಿವೃದ್ಧಿ, ಎರಡೂ ದೇಶಗಳ ಸ್ನೇಹ ಸಂಬಂಧ, ಸಂಸ್ಕೃತಿ ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಚರ್ಚೆ …

Read More »

ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …

Read More »

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್​ಆರ್​ಟಿಸಿ ನಿಗಮ ಬೇಡಿಕೆ ಇಟ್ಟಿದೆ. ಆರ್ಥಿಕ ಪರಿಸ್ಥಿತಿ …

Read More »

ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್​ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್​ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ …

Read More »

ವಿಶ್ಲೇಷಣೆ: ಸದನದ ಕಲಾಪ ಮತ್ತು ಹಳೆಯ ವರಸೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊತ್ತು ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚೆಗೆ ವಿಧಾನಸೌಧ ತಲುಪಲು ಚಕ್ಕಡಿ ಏರಿದರು, ಸೈಕಲ್ ತುಳಿದರು. ಬೆಲೆ ಏರಿಕೆ ಸಂಕಟವನ್ನು ಸರ್ಕಾರಕ್ಕೆ ತಲುಪಿಸುವುದರ ಜೊತೆಗೆ ತಮ್ಮ ಜನಪರ ಕಾಳಜಿಯನ್ನು ಮತದಾರರಿಗೆ ಮುಟ್ಟಿಸುವ ಆಶಯ ಅವರ ಕಾರ್ಯಕ್ರಮದಲ್ಲಿ ಅಡಕವಾಗಿದ್ದು ರಹಸ್ಯವೇನಲ್ಲ. ಆದರೆ, ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಗಿಳಿದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ …

Read More »