Breaking News

ರಾಷ್ಟ್ರೀಯ

ಅತ್ಯಾಚಾರ ಪ್ರಕರಣ: ವಿಧಾನಸಭೆಯಲ್ಲಿ ಸ್ಪೀಕರ್ ಕಾಗೇರಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ

ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣ ಸಂಬಂಧ ವಿಧಾನಸಭೆ ಕಲಾಪ ಚರ್ಚೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ ನಡೆಯಿತು. ಸ್ಪೀಕರ್ ಕಾಗೇರಿ, ನೀವು ಪ್ರತಿಯೊಂದಕ್ಕೂ ಹೀಗೆ ಗದ್ದಲ ಮಾಡಿಕೊಂಡು ಇರಿ. ನಾನು ನಿಮ್ಮ ಗದ್ದಲ ಕೇಳಿಕೊಂಡು ಇರ್ತೀನಿ. ಉಳಿದ ಸದಸ್ಯರು ಮಾಡುವಂತಿಲ್ಲ. ಬಿಲ್ ಬರುವಂಗಿಲ್ಲ. ಬರಿ ನಿಮ್ಮ ಮಾತು ಕೇಳಿಕೊಂಡು ಇರ್ಬೇಕಾ ಅಂತ ಸದಸ್ಯರು ಬಂದು ನನಗೆ ಕೇಳುತ್ತಿದ್ದಾರೆ. ನೀವು ಈ ರೀತಿ …

Read More »

ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.

ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು.   …

Read More »

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತ: ಜೆಡಿಎಸ್ ಶಾಸಕ

ಬೆಂಗಳೂರು, ಸೆಪ್ಟೆಂಬರ್ 22: ಮಂಡ್ಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸುರೇಶ್‌ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತವಾಗುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮೈಶುಗರ್ ಕಾರ್ಖಾನೆ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು, “ಮಂಡ್ಯ ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ತಮಾಷೆ ಮಾಡಬಾರದು. ಸರ್ಕಾರಕ್ಕೆ ನಿರ್ವಹಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ನಿಮಗೆ ಮಾಡಲು ಸಾಧ್ಯವಾಗದಿದ್ದರೆ ನಮಗೆ ಬಿಟ್ಟುಕೊಡಿ. …

Read More »

ನಿಪ್ಪಾಣಿ ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

  ನಿಪ್ಪಾಣಿ: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ …

Read More »

ಸವದತ್ತಿ ಯಲ್ಲಮ್ಮ ದೇಗುಲದ ದರ್ಶನಕ್ಕೆ ಸೆಪ್ಟೆಂಬರ್ 28 ರಿಂದ ಅವಕಾಶ

ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ. ಕಳೆದ 17ತಿಂಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ದೇವಿ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಕಾರ್ಯಕ್ರಮ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಕಡ್ಡಾಯವಾಗಿ ಕೊವಿಡ್ ನಿಯಮ …

Read More »

ಬೆಳಗಾವಿ: ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಆರೋಪಿಯ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಮನೆಯ ಎದುರು ಶೆಡ್​ನಲ್ಲಿ ಆಕೆಯ …

Read More »

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.  ಕಮಲಾ  ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ. ಈ ಹಿಂದೆ, ಇಬ್ಬರು ನಾಯಕರು ಕೊವಿಡ್ -19  (Covid -19) ಬಿಕ್ಕಟ್ಟಿನ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ್ದರು.  ಪ್ರಧಾನಿ ಮೋದಿ ಬುಧವಾರ ಅಮೆರಿಕಕ್ಕೆ …

Read More »

ಭೋಜನ ಕೂಟದಲ್ಲೂ ಆಪರೇಷನ್ ಹಸ್ತದ ಬಗ್ಗೆ ಎಚ್ಚರಿಕೆ ನೀಡಿದ ಬಿಎಸ್‍ವೈ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ವೀವ್ ಕಾಟೇಜ್ ನಿವಾಸದಲ್ಲಿ ನಿನ್ನೆ ರಾತ್ರಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಗಾಳ ಹಾಕಿದೆ ಎಚ್ಚರದಿಂದಿರಿ. ಯಾರೂ ಕಾಂಗ್ರೆಸ್ ಪ್ರಲೋಭನೆಗೆ ಒಳಗಾಗುವುದು ಬೇಡ ಎಂದು ಕಿವಿಮಾತು ನೀಡಿದ್ದಾರೆ. ಶಾಸಕರೊಂದಿಗೆ ಚರ್ಚಿಸಿದ ಬಿಎಸ್‍ವೈ, ಯಾರಾದರೂ ಕಾಂಗ್ರೆಸ್ ನಾಯಕರು ನಮ್ಮ ಶಾಸಕರ ಸಂಪರ್ಕಿಸಿದರೆ ನಾಯಕರ ಗಮನಕ್ಕೆ ತನ್ನಿ. ಶಾಸಕರ ಬೇಕು ಬೇಡಗಳನ್ನು ಈಡೇರಿಸಲು …

Read More »

ಬೆಚ್ಚಿಬಿದ್ದ ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ-ಮಗಳ ಕೊಂದ ಪಾಪಿ ಪತಿ..!

ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ ಮತ್ತು ಮಗಳನ್ನ ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಈಶ್ವರ್ ನಗರದಲ್ಲಿ ನಡೆದಿದೆ. ದಿಗಂಬರ್ 46 ಅನ್ನೋ ವ್ಯಕ್ತಿಯಿಂದ ಪತ್ನಿ ಮತ್ತು ಮಗಳನ್ನ ಕಗ್ಗೊಲೆ ಮಾಡಿದ್ದಾನೆ. ಜಗದೀಶ್ವರಿ 45, ಪ್ರಿಯಾಂಕಾ 11 ಕೊಲೆಯಾದ ದುರ್ದೈವಿಗಳು. ಮಧ್ಯರಾತ್ರಿ ಮನೆಯಲ್ಲಿ ಜಗಳ ತೆಗೆದು ಕೊಲೆ ಮಾಡಿದ್ದಾರೆ. ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿರೋ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿ ದಿಗಂಬರ್​ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೇಡಂ ಪೊಲೀಸ್ …

Read More »

ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ಕ್ರಿಕೆಟ್ ಆಟದಲ್ಲಿ ಇನ್ನು ಬ್ಯಾಟಿಂಗ್ ಮಾಡುವವರನ್ನು “ಬ್ಯಾಟ್ಸ್‌ಮನ್” (Batsman) ಎಂದು ಕರೆಯಲಾಗುವುದಿಲ್ಲ. ಕ್ರಿಕೆಟ್ ​ಅನ್ನು ಅಂತರ್ಗತ ಆಟವಾಗಿ ಬಲಪಡಿಸುವ ಪ್ರಯತ್ನವಾಗಿ ಬ್ಯಾಟ್ಸ್​ಮನ್​ ಎಂಬ ಪದದ ಬದಲು ಇನ್ನು ಮುಂದೆ ಲಿಂಗ ತಟಸ್ಥ ಪದ “ಬ್ಯಾಟರ್”​ (Batter) ಎಂಬ ಪದವನ್ನು ಕ್ರಿಕೆಟ್ ನಿಯಮಾವಳಿಯಲ್ಲಿ ಅಳವಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ನಿಯಮ ರೂಪಿಸಲಾಗಿದ್ದು ಬದಲಾವಣೆ ತಕ್ಷಣದಿಂದ ಜಾರಿಯಾಗಿದೆ ಎಂದು ಮೆರಿಲ್‌ಬಾರ್ನ್‌ ಕ್ರಿಕೆಟ್ ಕ್ಲಬ್‌ (MCC) ತಿಳಿಸಿದೆ. ಎಂಸಿಸಿ ಕ್ರಿಕೆಟ್ ನಿಯಮಗಳ ರಕ್ಷಕನಾಗಿದ್ದು, ಐಸಿಸಿ (ICC) …

Read More »