ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಮಕ್ಕಳು ಹೊರೆತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಹಾಕಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. …
Read More »ಅಬುಧಾಬಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: ಮುಂಬೈ-ಕೋಲ್ಕತ್ತಾ ನಡುವೆ ಯಾರಿಗೆ ವಿಜಯ?
ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯಲ್ಲಿಂದು (IPL 2021) 34ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಇಯಾನ್ ಮಾರ್ಗನ್ (Eion Morgan) ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (MIvsKKR) ತಂಡಗಳು ಮುಖಾಮುಖಿ ಆಗುತ್ತಿವೆ. ಮುಂಬೈ ತಂಡ ಈ ಬಾರಿಯ ಟೂರ್ನಿಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಕಂಡಿದೆ. ಆಡಿದ ಎಂಟು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಅನುಭವಿಸಿದೆ. ಇತ್ತ ಕೆಕೆಆರ್ ತಂಡ ಆಡಿದ …
Read More »ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …
Read More »‘ಬೈಡನ್ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ, ಜಾಗತಿಕ ವಿಚಾರಗಳ ಬಗ್ಗೆ ನಮ್ಮ ಚರ್ಚೆ’ ಅಂದ್ರು ಮೋದಿ
ನವದೆಹಲಿ: ಬೈಡೆನ್ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಳ್ತಿದ್ದಾರೆ. ಇಂದು ಅಮೆರಿಕಾಕ್ಕೆ ಹೊರಡಲಿರುವ ಮೋದಿ, ಕ್ವಾಡ್ ಶೃಂಗ ಸಮ್ಮೇಳನ, ವಿಶ್ವಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ..ಭೇಟಿ ವೇಳೆ ಗ್ಲೋಬಲ್ ಪಾರ್ಟನರ್ಶಿಪ್ ಬಗ್ಗೆ ಸಮಗ್ರವಾಗಿ …
Read More »ಬೆಂಗಳೂರು ಬಸ್ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್ ಬಂಧನ
ಬೆಂಗಳೂರು: ಸಿನಿಮಾ ಸ್ಟೈಲ್ನಲ್ಲಿ ಬಸ್ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …
Read More »ಬಿಎಸ್ಎಫ್ ಕ್ಯಾಂಪ್ನಲ್ಲಿ ಕೊರೊನಾ ರಣಕೇಕೆ, ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ ಸೋಂಕು
ದೇವನಹಳ್ಳಿ: ಬಿಎಸ್ಎಫ್ ಕ್ಯಾಂಪ್ನ 70 ಯೋಧರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಾರಹಳ್ಳಿಯ BSF ಕ್ಯಾಂಪ್ನಲ್ಲಿ ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ ತಗುಲಿದೆ. ಮೊದಲು 34 ಯೋಧರಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ ಇಂದು ಮತ್ತೆ 36 ಯೋಧರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 2 ದಿನದಲ್ಲಿ 70 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದು ಬಂದಿದೆ. ಇನ್ನು 70 ಸೋಂಕಿತರ ಪೈಕಿ …
Read More »ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ
ಬೆಳಗಾವಿ: ಗಣೇಶ ವಿಸರ್ಜನೆಯ ಮೆರವಣಿಗೆ ನೋಡಲು ಬಂದ ಮಹಾರಾಷ್ಟ್ರದ ಮೂಲದ ಯುವಕನಿಗೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡದಿದೆ. ಕೊಲ್ಹಾಪುರ ಮೂಲದ ವಿಶಾಲ್ ಶಿವಡೆ (27) ಚಾಕು ಇರಿತಕ್ಕೊಳಗಾದ ಯುವಕ. ಅಪರಿಚಿತ ಯುವಕರ ಗ್ಯಾಂಗ್ ನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಚಾಕು ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಯುವಕ ಆತನ ಸ್ನೇಹಿತರು ಪಟ್ಟಣಕ್ಕೆ ಬಂದಿದ್ದು ಈ ವೇಳೆ ವೈಯಕ್ತಿಕ …
Read More »ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?
ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ ಸಿಲಿಕಾನ್ ಸಿಟಿ ಜನರನ್ನೇ ಶಾಕ್ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …
Read More »ಸನ್ ‘ರೈಸಿಂಗ್’ ಆಗಲು ಮಾಡ್ಬೇಕಿದೆ ಮ್ಯಾಜಿಕ್; ಲಯಕ್ಕೆ ಮರಳುತ್ತಾ ಡೆಲ್ಲಿ ಕ್ಯಾಪಿಟಲ್ಸ್..?
ಮತ್ತೊಂದು ಮೋಸ್ಟ್ ಎಕ್ಸೈಟೆಡ್ ಮ್ಯಾಚ್ಗೆ ಸಾಕ್ಷಿಯಾಗಲು ದುಬೈ ಮೈದಾನ ಸಜ್ಜಾಗಿದೆ. ಮೊದಲ ಹಂತದ ದರ್ಬಾರ್ ಮುಂದುವರೆಸಲು ಡೆಲ್ಲಿ ರೆಡಿಯಾಗಿದ್ರೆ, ಪಂತ್ ಪಡೆಗೆ ಬ್ರೇಕ್ ಹಾಕಲು ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಗೇಮ್ಪ್ಲಾನ್ ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಐಪಿಎಲ್ ಸೆಕೆಂಡ್ ಹಾಫ್ ರಂಗೇರುತ್ತಿದೆ. ಇಂದು ಮತ್ತೊಂದು ಹೈವೋಲ್ಟೇಜ್ ಮ್ಯಾಚ್ಗೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಸಜ್ಜಾಗಿದೆ. ಇಂದಿನ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ & ಸನ್ ರೈಸರ್ಸ್ ಹೈದ್ರಾಬಾದ್ ಮುಖಾಮುಖಿಯಾಗ್ತಿದೆ. ಯಂಗ್ vs …
Read More »ತಾಲಿಬಾನ್ ಪ್ರತಿನಿಧಿಸಲು ಪಾಕ್ ಅನುಮತಿ ಕೇಳಿದ ಬೆನ್ನಲ್ಲೇ SAARC ಸಭೆಯೇ ರದ್ದು..!
ನವದೆಹಲಿ: ಸೆಪ್ಟೆಂಬರ್ 25ರಂದು ನಿಗದಿಯಾಗಿದ್ದ ವಾರ್ಷಿಕ ಸಾರ್ಕ್ ವಿದೇಶಾಂಗ ಮಂತ್ರಿಗಳ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನ ಪ್ರತಿನಿಧಿಸಲು ತಾಲಿಬಾನ್ಗೆ ಅನುಮತಿ ನೀಡುವಂತೆ ಪಾಕಿಸ್ತಾನ ಮನವಿ ಸಲ್ಲಿಸಿದ್ದ ಬೆನ್ನಲ್ಲೇ ಸಾರ್ಕ್ ವಿದೇಶಾಂಗ ಮಂತ್ರಿಗಳ ಸಭೆಯನ್ನೇ ರದ್ದುಗೊಳಿಸಲಾಗಿದೆ ಎಂದು ನೇಪಾಳ ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ನಲ್ಲಿ ಯುಎನ್ ಜನರಲ್ ಅಸೆಂಬ್ಲಿಯ 76ನೇ ಅಧಿವೇಶನದಲ್ಲಿ ಭಾಗವಹಿಸಬೇಕಿತ್ತು. ಆದರೆ ಎಲ್ಲಾ ಸದಸ್ಯ ರಾಷ್ಟ್ರಗಳ ಒಪ್ಪಿಗೆಯ ಕೊರತೆಯಿಂದ ಸಭೆ ರದ್ದುಗೊಂಡಿದೆ ಎಂದು ನೇಪಾಳದ …
Read More »
Laxmi News 24×7