ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ …
Read More »ಮಹಿಳಾ ಕಾನ್ ಸ್ಟೇಬಲ್ ಗೆ ಸಿನಿಮಾ, ಮಾಡೆಲಿಂಗ್ ನಲ್ಲಿ ಬಂಪರ್ ಅವಕಾಶ!
ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್ಸ್ಟೇಬಲ್ ಪ್ರಿಯಾಂಕಾ ಶರ್ಮಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಬಹಳ ವೈರಲ್ ಆಗಿತ್ತು. ಕೊನೆಗೆ ಆ ಕಾನ್ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಯ್ತು. ಸರ್ವೀಸ್ ಪಿಸ್ತೂಲು ಹಿಡಿದುಕೊಂಡು, ‘ಉತ್ತರ ಪ್ರದೇಶದಲ್ಲಿ ಐದು ವರ್ಷದ ಹುಡುಗರು ಸಹ ಪಿಸ್ತೂಲು ಚಲಾಯಿಸುತ್ತಾರೆ” ಎಂದು ಸ್ಟೈಲ್ ಆಗಿ ವಿಡಿಯೋ ಒಂದನ್ನು ಮಾಡಿದ್ದರು. ಇದು ಉತ್ತರ ಪ್ರದೇಶ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿ ಪ್ರಿಯಾಂಕಾ …
Read More »ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ
ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ …
Read More »ದೇಶದಲ್ಲಿ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿದ ಹೆಮ್ಮೆ ಬೆಳಗಾವಿ ಜಿಲ್ಲೆಗೆ: ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ: ಸೆಪ್ಟೆಂಬರ್ 17 ರಂದು ನಡೆದ ಮೆಗಾ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಬೆಳಗಾವಿ ಜಿಲ್ಲೆಯು …
Read More »ನಾವು ಸತ್ರೂ ಲಸಿಕೆ ಹಾಕಿಸಿಕೊಳ್ಳಲ್ಲ; ವಿಡಿಯೋ ಫುಲ್ ವೈರಲ್
ಕೊಪ್ಪಳ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಕೊರೊನಾ ಲಸಿಕೆ. ಆದರೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬರು ಹಿಂದೇಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ನಡೆದಿದೆ. ಲಸಿಕೆ ಪಡೆಯುವುದರಿಂದ ಏನು ಪ್ರಯೋಜನ ಅಂತ ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಾವು ಹೀಗೆ ಸಾಯಲಿ, ಲಸಿಕೆ ಹಾಕಿಸಿಕೊಳ್ಳುವುದಿಲ್ಲ …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ …
Read More »ಆರ್ಡರ್ ಮಾಡಿದ ಬರ್ಗರ್ ನಲ್ಲಿ ಸಿಕ್ತು ಮನುಷ್ಯನ ಕೈ ಬೆರಳು
ಆನ್ ಲೈನ್ ಶಾಪಿಂಗ್ ಮಾಡುವಾಗ ಒಮ್ಮೊಮ್ಮೆ ಮೋಸಗಳು ಆಗುತ್ತದೆ. ನಾವು ಆರ್ಡರ್ ಮಾಡಿದ್ದೇ ಒಂದು..ಬಂದಿರೋದೇ ಒಂದು ಆಗಿರುತ್ತದೆ. ಆದರೆ ಈ ಸುದ್ದಿ ಕೇಳಿದ್ರೆ ಮಾತ್ರ ನೀವು ಬೆಚ್ಚಿ ಬೀಳ್ತೀರಾ..! ಹೌದು, ಮಹಿಳೆಯೊಬ್ಬರು ಆರ್ಡರ್ ಮಾಡಿದ ಬರ್ಗರ್ನಲ್ಲಿ ಮನುಷ್ಯನ ಬೆರಳು ಸಿಕ್ಕು ಬೆಚ್ಚಿಬೀಳಿಸಿದ ಘಟನೆ ಬೊಲಿವಿಯಾದಲ್ಲಿ ವರದಿಯಾಗಿದೆ. ಮಹಿಳೆಯೊಬ್ಬರು ರೆಸ್ಟೋರೆಂಟ್ ನಿಂದ ಬರ್ಗರ್ ಆರ್ಡರ್ ಮಾಡಿದ್ದಾರೆ, ಆದರೆ ಮನೆಗೆ ಬಂದ ಪಾರ್ಸೆಲ್ ತೆಗೆದುನೋಡಿದಾಗ ಮಹಿಳೆ ಹೌ ಹಾರಿದ್ದಾಳೆ. ಆರ್ಡರ್ ಮಾಡಿದ ಬರ್ಗರ್ …
Read More »ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ಕಾಡುತ್ತಿದೆ ನ್ಯುಮೋನಿಯಾ; ಒಂದೇ ವಾರದಲ್ಲಿ 7 ಮಕ್ಕಳು ಬಲಿ
ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್ನ ಮಕ್ಕಳ ವಿಭಾಗದ ಬೆಡ್ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …
Read More »ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು. ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿದ್ದು, ಇಲ್ಲಿಯವರಿಗೆ ಸುಮಾರು 1.60 ಲಕ್ಷ ಜನರಿಗೆ ಲಸಿಕೆಗಳನ್ನು ಹಾಕಲಾಗಿದ್ದು, ಕೊವೀಡ್ …
Read More »14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ
ಮನುಷ್ಯನ ಅನುಭವಿಸಬಹುದಾದ ಅರ್ಧಕ್ಕಿಂತ ಹೆಚ್ಚು ಮಾನಸಿಕ ಸಮಸ್ಯೆಗಳು 14 ವರ್ಷಕ್ಕಿಂತ ಮುನ್ನವೇ ಆರಂಭವಾಗಿರುತ್ತದೆ ಎಂದು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಮಲ್ಹೋತ್ರಾ ತಿಳಿಸಿದ್ದಾರೆ. ಪ್ರತಿಯೊಬ್ಬನ ಬಾಲ್ಯದ ಜೀವನ ಜೀವನದ ಉದ್ದಕ್ಖೂ ಪ್ರಭಾವ ಬೀರುತ್ತದೆ. ಹೀಗಾಗಿ ಬಾಲ್ಯದ ಜೀವನ ಅತ್ಯಂತ ಉತ್ತಮವಾಗಿರುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ. ‘ಮಕ್ಕಳ ಮಾನಸಿಕ ಆರೋಗ್ಯ- ಮಾನಸಿಕ ಆರೋಗ್ಯದ ವಿಶ್ವ’ ಎಂಬ ವಿಷಯದ ಅಡಿ ಉಪನ್ಯಾಸ …
Read More »
Laxmi News 24×7