Breaking News

ರಾಷ್ಟ್ರೀಯ

ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು:. ಮಾಯಾವತಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ, ಸಮಾಜವಾದಿ ಪಕ್ಷ ದಂತೆ ಬರೀ ಮಾತನಾಡದೆ, ಕೆಲಸವನ್ನೂ ಮಾಡುವುದಾಗಿ ಬಹುಜನ್‌ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಹೇಳಿಕೊಂಡಿದ್ದಾರೆ. ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯುವುದಕ್ಕಾಗಿ ಪಕ್ಷವು ಒಂದು ತಿಂಗಳ ಕಾಲ ನಡೆಸಿದ ಅಭಿಯಾನದ ಕೊನೆಯ ದಿನದಂದು ಪ್ರಬುದ್ಧ್ ವರ್ಗ ಸಮ್ಮೇಳನಲ್ಲಿ ಅವರು ಈ ಮಾತನ್ನಾಡಿದ್ದಾರೆ. ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು. ಬಿಜೆಪಿ ಮತ್ತು ಸಮಾಜವಾದಿ ಪಕ್ಷ ಬರೀ ಮಾತನಾಡುತ್ತವೆ. ಆದರೆ …

Read More »

ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್‌ ವಿತರಕ ಸಂಘಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ 1,82,651 ವಾಹನ ಮಾರಾಟ ವಾಗಿತ್ತು, ಈ ವರ್ಷ ಆಗಸ್ಟ್‌ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್‌ ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಣಿಜ್ಯ …

Read More »

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …

Read More »

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಸಂಪೂರ್ಣ ಸಹಕಾರ : ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ …

Read More »

ಶಾಲೆಗೆ ಪುನರಾಗಮನ

ಬೆಂಗಳೂರು: ಉಡುಪಿ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾರಂಭವಾಗಿದೆ. ಹಲವು ದಿನ ಗಳಿಂದ ಮನೆಯಲ್ಲೇ ಕಾಲಕಳೆದಿದ್ದ ಮಕ್ಕಳು ಉತ್ಸಾಹದಿಂದ ಪಾಠ ಆಲಿಸಿದರು. ಆದರೆ ಕೋವಿಡ್‌ ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇನ್ನೂ ಆರಂಭವಾಗಿಲ್ಲ. ಮೊದಲ ದಿನ ಭೌತಿಕ ಹಾಜರಾತಿ ಕಡಿಮೆಯಿತ್ತು. ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯ ವಲ್ಲದ ಕಾರಣ ಅರ್ಧಕ್ಕಿಂತಲೂ ಕಡಿಮೆ ಹಾಜರಾತಿ ಇತ್ತು. …

Read More »

ಕಲಬುರಗಿ ಪಾಲಿಕೆ ಚುನಾವಣೆ: ಯಾರಿಗೂ ಸ್ಪಷ್ಟ ಬಹುಮತ ಇಲ್ಲ; ಜೆಡಿಎಸ್ ಕಿಂಗ್ ಮೇಕರ್- ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

2021: ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಜೆಡಿಎಸ್ ಯಾರಿಗೆ ಜೈ ಅಂತಾರೋ ಅವರೇ ಪಾಲಿಕೆ ಮೇಯರ್ ಆಗಲಿದ್ದಾರೆ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನ, ಬಿಜೆಪಿ 23 ಸ್ಥಾನ, ಜೆಡಿಎಸ್ 4 ಸ್ಥಾನದಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಕಲಬುರಗಿ: ಕಲಬುರಗಿ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿಲ್ಲ. ಜೆಡಿಎಸ್ ಬೆಂಬಲಿಸಿದ ಪಕ್ಷಕ್ಕೆ ಮೇಯರ್ ಸ್ಥಾನ ಸಿಗಲಿದೆ. ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …

Read More »

ಬಿಕಿನಿ ತೊಟ್ಟು, ಮಾಸ್ಕ್​ ಹಾಕಿ ಏರ್​​ಪೋರ್ಟ್​ಗೆ ಬಂದ ಮಹಿಳೆ; ..

ಮಹಿಳೆಯೊಬ್ಬರು ಕೇವಲ ಬಿಕಿನಿ ತೊಟ್ಟು ಏರ್​​​ಪೋರ್ಟ್​ಗೆ ಬಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಮಿಯಾಮಿ ವಿಮಾನ ನಿಲ್ದಾಣಕ್ಕೆ ಬಿಕಿನಿ ತೊಟ್ಟ ಮಹಿಳೆ ಬಂದಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಗ್ರೀನ್​​ ಬಿಕಿನಿ ತೊಟ್ಟು ಏರ್​​ಪೋರ್ಟ್​ಗೆ ಬಂದಿದ್ದ ಮಹಿಳೆ ಮಾಸ್ಕ್​​​ ಹಾಕುವುದು ಮಾತ್ರ ಮರೆತಿರಲಿಲ್ಲ. ಕೈಯಲ್ಲಿ ಬ್ಯಾಗ್​​ ಹಿಡಿದು ಬಂದಿದ್ದ ಇವರು ಎಲ್ಲಿಗೆ ಹೊರಟಿದ್ದರು ಎಂಬ ಏರ್​​​ಪೋರ್ಟ್​ ಸಿಬ್ಬಂದಿ ಯಾವುದೇ ಮಾಹಿತಿ ನೀಡಿಲ್ಲ. ಏರ್​​ಪೋರ್ಟ್​ನಲ್ಲಿ ನಡೆದುಕೊಂಡು ಬರುತ್ತಿರುವ ಬಿಕಿನಿ ತೊಟ್ಟ ಮಹಿಳೆಯ ವಿಡಿಯೋ …

Read More »

ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ

ಬೆಂಗಳೂರು: ಸರ್ಕಾರಕ್ಕೆ ಮುಜುಗರವಾಗಬಹುದಾದ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೆಲ ಸಚಿವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದ ‘ಅಷ್ಟೊತ್ತಿನಲ್ಲಿ ಹೆಣ್ಣುಮಕ್ಕಳು ಯಾಕೆ ಅಲ್ಲಿಗೆ ಹೋಗಬೇಕಿತ್ತು’ ಎಂಬ ಮಾತನ್ನು ನೆನಪಿಸಿದ್ದಾರೆ. ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ ಬಸವರಾಜ …

Read More »

ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, ಪ್ರತಿಭಟನೆ ನಡೆಸುತ್ತೇವೆ: ಡಿ ಕೆ ಶಿವಕುಮಾರ್

ಕಾಂಗ್ರೆಸ್​ಗೆ ಪದಾಧಿಕಾರಿಗಳ ನೇಮಕದ ಬಗ್ಗೆ ಸೂಚಿಸಿದ್ದೇನೆ. ಮಾಸಾಂತ್ಯದಲ್ಲಿ ಎಲ್ಲಾ ಘಟಕಗಳಿಗೆ ನೇಮಕಾತಿ ಮಾಡುತ್ತೇವೆ. ಕಾಂಗ್ರೆಸ್​ನಿಂದ ಸಾಂಸ್ಕೃತಿಕ, ಸಾರಿಗೆ ವಿಭಾಗ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ. ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದೇವೆ. ಜಿಲ್ಲಾ ಕಾಂಗ್ರೆಸ್​ ನಾಯಕರ ಅಭಿಪ್ರಾಯವನ್ನು ಕೇಳಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಶನಿವಾರ (ಸಪ್ಟೆಂಬರ್ 4)​ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್​ …

Read More »